ಚಿಕ್ಕೋಡಿ: ಕಳೆದ ಎರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ಭಾಗದಲ್ಲಿ ಮಳೆಯಾಗಿದ್ದು ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳ ಹರಿವಿನಲ್ಲಿ ಸ್ವಲ್ಪ ಏರಿಕೆ ಕಂಡಿದೆ. 48,000 ಅಧಿಕ ಕ್ಯುಸೆಕ್ಗಿಂತ ಹೆಚ್ಚು ಕೃಷ್ಣಾ ನದಿಗೆ ಒಳ ಹರಿವು ಇದೆ ಎಂದು ಚಿಕ್ಕೋಡಿ ತಹಶೀಲ್ದಾರ ಶುಭಾಸ್ ಸಂಪಗಾಂವಿ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ನಿಂದ 38,125 ಕ್ಯೂಸೆಕ್ ನೀರು, ದೂಧಗಂಗಾ ನದಿಯಿಂದ 10,560 ಕ್ಯೂಸೆಕ್ ನೀರು ಹೀಗೆ ಒಟ್ಟು 48,000 ಕ್ಯೂಸೆಕ್ಗೂ ಅಧಿಕ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ - 24 ಮಿ.ಮೀ, ನವಜಾ - 11 ಮಿ.ಮೀ, ಮಹಾಬಲೇಶ್ವರ - 09 ಮಿ.ಮೀ, ವಾರಣಾ - 18 ಮಿ.ಮೀ, ಕಾಳಮ್ಮವಾಡಿ - 12 ಮಿ.ಮೀ, ರಾಧಾನಗರಿ - 05 ಮಿ.ಮೀ, ಪಾಟಗಾಂವ - 12 ಮಿ.ಮೀ ಮಳೆಯಾಗಿದ್ದು ವರದಿಯಾಗಿದೆ.
ಸದ್ಯ ಕೊಯ್ನಾ ಜಲಾಶಯ 98%,ವಾರಣಾ ಜಲಾಶಯ 98%, ರಾಧಾನಗರಿ ಜಲಾಶಯ 96%, ಕಣೇರ ಜಲಾಶಯ 100%, ಧೂಮ ಜಲಾಶಯ 98%, ಪಾಟಗಾಂವ 99% ಧೂದಗಂಗಾ 100%, ತುಂಬಿದೆ. ಹಿಪ್ಪರಗಿ ಬ್ಯಾರೇಜ್ನಿಂದ 47,000 ಹಾಗೂ ಆಲಮಟ್ಟಿ ಜಲಾಶಯದಿಂದ 62,000 ಕ್ಯೂಸೆಕ್ ನೀರನ್ನು ಹೊರಗಡೆ ಬಿಡಲಾಗುತ್ತಿದೆ.