ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ ಕೃಷ್ಣಾ, ವೇದಗಂಗಾ ಹಾಗೂ ದೂಧ್ಗಂಗಾ ನದಿಗಳ ಒಳ ಹರಿವಿನಲ್ಲಿ ಇಳಿಮುಖ ಕಂಡು ಬಂದಿದೆ. ಸದ್ಯ 46,000ಕ್ಕೂ ಅಧಿಕ ಕ್ಯೂಸೆಕ್ಕ್ಕಿಂತ ಹೆಚ್ಚು ಕೃಷ್ಣಾ ನದಿ ಒಳಹರಿವು ಇದೆ ಎಂದು ತಹಶೀಲ್ದಾರ್ ಶುಭಾಸ ಸಂಪಗಾಂವಿ ತಿಳಿಸಿದ್ದಾರೆ.
ಮಹಾರಾಷ್ಟ್ರ ರಾಜಾಪೂರ ಜಲಾಶಯದಿಂದ 42,625 ಕ್ಯೂಸೆಕ್ ನೀರು ಹಾಗೂ ದೂಧ್ಗಂಗಾ ನದಿಯಿಂದ 3,872 ಕ್ಯೂಸೆಕ್ ನೀರು ಹೀಗೆ ಒಟ್ಟು 46 ಸಾವಿರ ಕ್ಯೂಸೆಕ್ಗೂ ಅಧಿಕ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ.
ಸದ್ಯ ಕೊಯ್ನಾ ಜಲಾಶಯ - 98.98%, ವಾರಣಾ ಜಲಾಶಯ - 100%, ರಾಧಾನಗರಿ ಜಲಾಶಯ 98.07%, ಕಣೇರ ಜಲಾಶಯ 100%, ಧೂಮ ಜಲಾಶಯ 100% ಹಾಗೂ ಪಾಟಗಂವ ಜಲಾಶಯ 100% ಭರ್ತಿಯಾಗಿದೆ. ಹಿಪ್ಪರಗಿ ಬ್ಯಾರೆಜ್ನಿಂದ 69,000 ಕ್ಯೂಸೆಕ್ ಹಾಗೂ ಆಲಮಟ್ಟಿ ಜಲಾಶಯದಿಂದ 1,00,000 ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ.