ಬೆಳಗಾವಿ: ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಗರದ ಛತ್ರಪತಿ ಶಿವಾಜಿ ಮಹಾರಾಜ್ ಹಾಗೂ ಜಗಜ್ಯೋತಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಆರಂಭಿಸಿದ ಲಖನ್ ಜಾರಕಿಹೊಳಿ, ತೆರೆದ ವಾಹನದಲ್ಲಿ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದರು.
ಲಖನ್ ಜಾರಕಿಹೊಳಿ ಅವರು ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಗ್ರಾಮ ಪಂಚಾಯತ್, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.
![lakhan jarkiholi submitted nomination as independent candidate](https://etvbharatimages.akamaized.net/etvbharat/prod-images/kn-bgm-05-23-lakhan-jarkiholi-nomination-7201786_23112021134359_2311f_1637655239_763.jpg)
ವಿಧಾನಪರಿಷತ್ ಸದಸ್ಯ ವಿವೇಕರಾವ್ ಪಾಟೀಲ್, ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಸೇರಿದಂತೆ ಅನೇಕರು ಲಖನ್ ಜಾರಕಿಹೊಳಿಯವರಿಗೆ ಸಾಥ್ ನೀಡಿದರು.
ಇದನ್ನೂ ಓದಿ:ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳುತ್ತಿದ್ದಂತೆ ಥೂ.. ಥೂ.. ಎಂದು ಗೇಲಿ ಮಾಡಿದ ರಮೇಶ್ ಜಾರಕಿಹೊಳಿ