ಅಥಣಿ: ಡಿಸಿಎಂ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅಥಣಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಅವರ ಅಭಿಮಾನಿಗಳು ಲಕ್ಷ್ಮಣ ಸವದಿ ಅವರ ಕಟೌಟ್ ನಿಲ್ಲಿಸಿದ್ದಾರೆ.
ಅಥಣಿಯ ಪ್ರಮುಖ ರಸ್ತೆಗಳಲ್ಲಿ ಅವರಿಗೆ ಸ್ವಾಗತ ಬಯಸುವ ನಿಟ್ಟಿನಲ್ಲಿ ಪೋಸ್ಟರ್ ಹಾಕಿ, ಅದರಲ್ಲಿ 'ಅಂತ್ಯವಲ್ಲ ಆರಂಭ' ಎಂದು ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ.
ಈ ಪೋಸ್ಟರ್ ಕಾಣುತ್ತಿದ್ದಂತೆ ಅಥಣಿ ಕಾಂಗ್ರೆಸ್ ಮುಖಂಡರು ಮಹೇಶ್ ಕುಮಟಳ್ಳಿ ಅವರ ಕಾಲೆಳೆಯುತ್ತಿದ್ದಾರೆ. ಮಹೇಶ್ ಅಣ್ಣ ಹುಷಾರು, ಡಿಸಿಎಂ ಲಕ್ಷ್ಮಣ ಸವದಿ ನಿಮಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅಥಣಿ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಿಚಾಯಿಸುತ್ತಿದ್ದಾರೆ.