ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಗಾಂಧಿ ಭವನ ಕಾಮಗಾರಿಗೆ ಶಾಸಕ ಅಭಯ ಪಾಟೀಲ ಚಾಲನೆ ನೀಡಿದರು.
ಗಾಂಧೀಜಿಯವರ 150ನೇ ಜನ್ಮದಿನದಂದೇ ಭೂಮಿ ಪೂಜೆ ನೆರವೇರಿಸಿದ ಶಾಸಕರು, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
![gandhi](https://etvbharatimages.akamaized.net/etvbharat/prod-images/4628769_gandhiji.jpg)
ಭವನ ನಿರ್ಮಾಣಕ್ಕೆ ಒಟ್ಟಾರೆ 3 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಈಗಾಗಲೇ 2.87 ಕೋಟಿ ರೂಪಾಯಿ ಹಣ ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ ಎಂದು ಮಾಹಿತಿ ನೀಡಿದರು.
ಪೀರನವಾಡಿಯಲ್ಲಿ ಜೈನ್ ಕಾಲೇಜು ಎದುರಿಗೆ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ 2 ಎಕರೆ ಜಮೀನು ಮಂಜೂರು ಮಾಡಿದೆ.
ಪೀರನವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಕೇಶ್ ತಳವಾರ, ಭೂಷಣ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ ಗೌಡ ಪಾಟೀಲ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.