ಬೆಳಗಾವಿ: ಲಾಕ್ಡೌನ್ ಸಡಿಲಿಕೆ ಆಗುತ್ತಿದ್ದಂತೆ ಸಾರ್ವಜನಿಕರ ಸಂಚಾರ ಹೆಚ್ಚಾಗಿದ್ದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ನಗರದಲ್ಲಿ ಸಂಚರಿಸಿ ವ್ಯಾಪಾರಸ್ಥರ ಕುಂದು-ಕೊರತೆಗಳನ್ನು ಆಲಿಸಿದರು.
ನಗರದ ರವಿವಾರ ಪೇಟೆ, ಗಣೇಶ್ ಪೇಟೆ, ಶನಿವಾರ ಕೂಟ್ ಸೇರಿದಂತೆ ಪ್ರಮುಖ ಮಾರುಕಟ್ಟೆ ವ್ಯಾಪಾರಿಗಳ ಸಮಸ್ಯೆಗಳಿಗೆ ಸ್ಪಂದಿಸಿದರು.
![Lock down relaxation in belgavi](https://etvbharatimages.akamaized.net/etvbharat/prod-images/kn-bgm-02-06-minister-visit-01-ka10029_06052020153753_0605f_1588759673_61.jpg)
ಈ ವೇಳೆ ಮಾತನಾಡಿದ ಅವರು, ಕೊರೊನಾ ನಿಯಂತ್ರಿಸಲು ಕಳೆದ 44 ದಿನಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜನರು ಬೆಂಬಲಿಸಿದ್ದಾರೆ. ಆದರೆ ಈ ವೇಳೆ ಕೆಲಸವಿಲ್ಲದೆ ಪರದಾಡುತ್ತಿರೋ ಬಡವರು, ವ್ಯಾಪಾರಸ್ಥರ ಸಮಸ್ಯೆಗಳು ಹೆಚ್ಚಾಗಿವೆ ಎಂದರು.
ವ್ಯಾಪಾರಿಗಳು ಸರ್ಕಾರದ ಮಾರ್ಗಸೂಚಿಯಂತೆ ವಹಿವಾಟು ನಡೆಸಬೇಕು. ಚಿಲ್ಲರೆ ವ್ಯಾಪಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.