ETV Bharat / state

ಪತ್ನಿ ಬಿಟ್ಟು ಹೋಗಿದ್ದಕ್ಕೆ ನೊಂದು ಇಬ್ಬರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

author img

By

Published : Jul 28, 2020, 2:24 PM IST

ತಾನು ವಿಷ ಕುಡಿದು ಮಕ್ಕಳಿಗೂ ವಿಷವುಣಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ನಡೆದಿದೆ.

man committed suicide with two children in Belgavi
ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಚಿಕ್ಕೋಡಿ : ಪತ್ನಿ ತನ್ನನ್ನು ಬಿಟ್ಟು ಹೋಗಿದ್ದಕ್ಕೆ ಮನನೊಂದು ಇಬ್ಬರು ಮಕ್ಕಳ ಜೊತೆಗೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ನಡೆದಿದೆ.

ಯಾದಗೂಡು ಗ್ರಾಮದ ತಮ್ಮಣ್ಣ ಗಿಡ್ಡಾಳೆ (38) ಚಿನ್ನು ತಮ್ಮಣ್ಣಾ ಗಿಡ್ಡಾಳೆ (2) ನಿರಂಜನ‌ ತಮ್ಮಣ್ಣ ಗಿಡ್ಡಾಳೆ (10) ಮೃತ ದುರ್ದೈವಿಗಳು.

ಇಬ್ಬರು ಮಕ್ಕಳು ಮತ್ತು ತನ್ನನ್ನು ಬಿಟ್ಟು ಹೋಗಿದ್ದ ಪತ್ನಿಯ ಮನವೊಲಿಸಲು ತಮ್ಮಣ್ಣ ನಿನ್ನೆ ತವರು ಮನೆ ಹುಕ್ಕೇರಿ ತಾಲೂಕಿನ ಕೇಸ್ತಿ ಗ್ರಾಮಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ತವರು ಮನೆಯವರು ತಮ್ಮಣ್ಣನನ್ನು ಅವಮಾನ ಮಾಡಿ ಕಳುಹಿಸಿದ್ದರು ಎನ್ನಲಾಗಿದೆ. ಇದರಿಂದ ನೊಂದು ರಾತ್ರಿ ತಾನು ವಿಷ ಕುಡಿದು ಮಕ್ಕಳಿಗೂ ಉಣಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹುಕ್ಕೇರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಚಿಕ್ಕೋಡಿ : ಪತ್ನಿ ತನ್ನನ್ನು ಬಿಟ್ಟು ಹೋಗಿದ್ದಕ್ಕೆ ಮನನೊಂದು ಇಬ್ಬರು ಮಕ್ಕಳ ಜೊತೆಗೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ನಡೆದಿದೆ.

ಯಾದಗೂಡು ಗ್ರಾಮದ ತಮ್ಮಣ್ಣ ಗಿಡ್ಡಾಳೆ (38) ಚಿನ್ನು ತಮ್ಮಣ್ಣಾ ಗಿಡ್ಡಾಳೆ (2) ನಿರಂಜನ‌ ತಮ್ಮಣ್ಣ ಗಿಡ್ಡಾಳೆ (10) ಮೃತ ದುರ್ದೈವಿಗಳು.

ಇಬ್ಬರು ಮಕ್ಕಳು ಮತ್ತು ತನ್ನನ್ನು ಬಿಟ್ಟು ಹೋಗಿದ್ದ ಪತ್ನಿಯ ಮನವೊಲಿಸಲು ತಮ್ಮಣ್ಣ ನಿನ್ನೆ ತವರು ಮನೆ ಹುಕ್ಕೇರಿ ತಾಲೂಕಿನ ಕೇಸ್ತಿ ಗ್ರಾಮಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ತವರು ಮನೆಯವರು ತಮ್ಮಣ್ಣನನ್ನು ಅವಮಾನ ಮಾಡಿ ಕಳುಹಿಸಿದ್ದರು ಎನ್ನಲಾಗಿದೆ. ಇದರಿಂದ ನೊಂದು ರಾತ್ರಿ ತಾನು ವಿಷ ಕುಡಿದು ಮಕ್ಕಳಿಗೂ ಉಣಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹುಕ್ಕೇರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.