ETV Bharat / state

ಮರಾಠಿ ಶಿಕ್ಷಕ ವಿನಾಯಕ ಮೋರೆ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ

author img

By

Published : Oct 27, 2022, 8:34 PM IST

Updated : Oct 27, 2022, 9:40 PM IST

ಅ.28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ 5,000 ವಿದ್ಯಾರ್ಥಿಗಳು ಸುವರ್ಣ ಸೌಧದಲ್ಲಿಯೂ, ಇನ್ನುಳಿದವರು ಬೇರೆ ಬೇರೆ ಕಡೆ ಹಾಡುವರು.

ಮರಾಠಿ ಶಿಕ್ಷಕ ವಿನಾಯಕ ಮೋರೆ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ
ಮರಾಠಿ ಶಿಕ್ಷಕ ವಿನಾಯಕ ಮೋರೆ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗುತ್ತಿರುವ "ಕೋಟಿ ಕಂಠ ಗೀತಗಾಯನ" ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯ 5,000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವದ ಕಾರ್ಯವನ್ನು ಮರಾಠಿ ಶಿಕ್ಷಕ ಹಾಗೂ ಸಮೂಹ ಗಾಯನದ ಶಿಕ್ಷಕರೆಂದು ಪ್ರಸಿದ್ಧರಾದ ವಿನಾಯಕ ಮೋರೆ ಮಾಡಿದ್ದಾರೆ.

ಅ 28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ 5,000 ವಿದ್ಯಾರ್ಥಿಗಳು ಸುವರ್ಣ ಸೌಧದಲ್ಲಿಯೂ, ಇನ್ನುಳಿದವರು ಬೇರೆ ಬೇರೆ ಕಡೆ ಹಾಡಲಿದ್ದಾರೆ. ವಿನಾಯಕ ಮೋರೆ ಅವರು ನಗರದ ಬಿಎಡ್ ಕಾಲೇಜಿನ ಹಾಗೂ ಶಾಲೆಯ ವಿದ್ಯಾರ್ಥಿಗಳಿಗೆ ಈ ಹಾಡುಗಳನ್ನು ಕಲಿಸಿದ್ದಾರೆ.

ಮರಾಠಿ ಶಿಕ್ಷಕ ವಿನಾಯಕ ಮೋರೆ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ

ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಿನಾಯಕ ಮೋರೆ ಸಂಗೀತದ ಯೋಗದಾನವಿರುತ್ತದೆ. ವಿಶ್ವ ಕನ್ನಡ ಸಮ್ಮೇಳನದಲ್ಲಿ ಅವರು ಕಲಿಸಿದ ನಾಡ ಗೀತೆಯು ಇಂದಿಗೂ ಜನರ ನೆನಪಿನಲ್ಲಿದೆ. ಮೋರೆ ಅವರಿಗೆ ಕನ್ನಡ ಮಾತನಾಡಲು ಬರುವುದಿಲ್ಲ. ಮರಾಠಿ ಭಾಷಿಕರಾದರೂ ಸಹ ಕನ್ನಡ ಗೀತೆಗಳನ್ನು ಪ್ರೀತಿಯಿಂದ ಪ್ರಭಾವ ಪೂರ್ವಕವಾಗಿ ಸ್ವತಃ ಹಾಡಿ ವಿದ್ಯಾರ್ಥಿಗಳಿಗೂ ಕಲಿಸುತ್ತಾರೆ.

ಇದನ್ನೂ ಓದಿ: ಕೋಟಿ ಕಂಠ ಗಾಯ‌ನಕ್ಕೆ 1 ಕೋಟಿ 10 ಲಕ್ಷ ಮಂದಿ ನೋಂದಣಿ: ಸಚಿವ ಸುನೀಲ್ ಕುಮಾರ್

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗುತ್ತಿರುವ "ಕೋಟಿ ಕಂಠ ಗೀತಗಾಯನ" ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯ 5,000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವದ ಕಾರ್ಯವನ್ನು ಮರಾಠಿ ಶಿಕ್ಷಕ ಹಾಗೂ ಸಮೂಹ ಗಾಯನದ ಶಿಕ್ಷಕರೆಂದು ಪ್ರಸಿದ್ಧರಾದ ವಿನಾಯಕ ಮೋರೆ ಮಾಡಿದ್ದಾರೆ.

ಅ 28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ 5,000 ವಿದ್ಯಾರ್ಥಿಗಳು ಸುವರ್ಣ ಸೌಧದಲ್ಲಿಯೂ, ಇನ್ನುಳಿದವರು ಬೇರೆ ಬೇರೆ ಕಡೆ ಹಾಡಲಿದ್ದಾರೆ. ವಿನಾಯಕ ಮೋರೆ ಅವರು ನಗರದ ಬಿಎಡ್ ಕಾಲೇಜಿನ ಹಾಗೂ ಶಾಲೆಯ ವಿದ್ಯಾರ್ಥಿಗಳಿಗೆ ಈ ಹಾಡುಗಳನ್ನು ಕಲಿಸಿದ್ದಾರೆ.

ಮರಾಠಿ ಶಿಕ್ಷಕ ವಿನಾಯಕ ಮೋರೆ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ

ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಿನಾಯಕ ಮೋರೆ ಸಂಗೀತದ ಯೋಗದಾನವಿರುತ್ತದೆ. ವಿಶ್ವ ಕನ್ನಡ ಸಮ್ಮೇಳನದಲ್ಲಿ ಅವರು ಕಲಿಸಿದ ನಾಡ ಗೀತೆಯು ಇಂದಿಗೂ ಜನರ ನೆನಪಿನಲ್ಲಿದೆ. ಮೋರೆ ಅವರಿಗೆ ಕನ್ನಡ ಮಾತನಾಡಲು ಬರುವುದಿಲ್ಲ. ಮರಾಠಿ ಭಾಷಿಕರಾದರೂ ಸಹ ಕನ್ನಡ ಗೀತೆಗಳನ್ನು ಪ್ರೀತಿಯಿಂದ ಪ್ರಭಾವ ಪೂರ್ವಕವಾಗಿ ಸ್ವತಃ ಹಾಡಿ ವಿದ್ಯಾರ್ಥಿಗಳಿಗೂ ಕಲಿಸುತ್ತಾರೆ.

ಇದನ್ನೂ ಓದಿ: ಕೋಟಿ ಕಂಠ ಗಾಯ‌ನಕ್ಕೆ 1 ಕೋಟಿ 10 ಲಕ್ಷ ಮಂದಿ ನೋಂದಣಿ: ಸಚಿವ ಸುನೀಲ್ ಕುಮಾರ್

Last Updated : Oct 27, 2022, 9:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.