ETV Bharat / state

ಸಹಕಾರಿ ಸಂಸ್ಥೆಗಳ ಹಣ ದುರ್ಬಳಕೆ ತಡೆಗೆ ಕ್ರಮ ವಹಿಸಲು ಸಚಿವ ಕೆ.ಎನ್. ರಾಜಣ್ಣ ಸೂಚನೆ

author img

By

Published : Jul 31, 2023, 11:03 PM IST

''ಠೇವಣಿ ಏಜೆಂಟ್​ಗಳಿಂದ ಪಿಗ್ಮಿ ಕಲೆಕ್ಷನ್​ಗಳಲ್ಲಿ ಈಗಾಗಲೇ ಅನೇಕ ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಸಾಫ್ಟ್‌ವೇರ್‌ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಣ ದುರ್ಬಳಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು'' ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

Minister K N Rajanna
ಸಹಕಾರಿ ಸಂಸ್ಥೆಗಳ ಹಣ ದುರ್ಬಳಕೆ ತಡೆಗೆ ಕ್ರಮ ವಹಿಸಲು ಸಚಿವ ಕೆ.ಎನ್. ರಾಜಣ್ಣ ಸೂಚನೆ

ಬೆಳಗಾವಿ: ''ಸಹಕಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಅರ್ಬನ್ ಸೊಸೈಟಿಗಳಲ್ಲಿ ಹಣ ಕಬಳಿಸಿ, ದುರುಪಯೋಗಪಡಿಸಿಕೊಂಡು ಸಂಸ್ಥೆಗಳಿಗೆ ವಂಚನೆ ಎಸಗುವವರ ವಿರುದ್ಧ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು'' ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್ ರಾಜಣ್ಣ ಸೂಚನೆ ನೀಡಿದರು.

ಸುವರ್ಣ ವಿಧಾನ ಸೌಧದ ಕಾನ್ಫರೆನ್ಸ್ ಹಾಲ್​ನಲ್ಲಿ ಇಂದು ನಡೆದ ಬೆಳಗಾವಿ ಪ್ರಾಂತ್ಯದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ''ಜಿಲ್ಲೆಗಳ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಹಣ ದುರುಪಯೋಗ ಪ್ರಕರಣಗಳು ಗಣನೀಯವಾಗಿ ಹೆಚ್ಚಿರುವುದು ಗಮನಕ್ಕೆ ಬಂದಿದೆ. ಕಳೆದ 3ರಿಂದ 4 ವರ್ಷಗಳಿಂದ ಬಾಕಿಯಿರುವ ವಂಚನೆ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ನ್ಯಾಯಾಲಯ ಹಂತಗಳಲ್ಲಿರುವ ಪ್ರಕರಣಗಳ ಕೋರ್ಟ್ ನಿಗದಿ ದಿನಾಂಕಕ್ಕೆ ಅಧಿಕಾರಿಗಳು ತಪ್ಪದೇ ಹಾಜರಿರಬೇಕು'' ಎಂದು ಸೂಚಿಸಿದರು. ''ಪ್ರತಿ ಸಭೆಯಲ್ಲಿ ಸರಿಯಾದ ಮಾಹಿತಿ ಒದಗಿಸುತ್ತಿಲ್ಲ. ಈ ಹಿಂದಿನ ಮಾಹಿತಿಯನ್ನು ಪರಿಶೀಲಿಸಿದಾಗ ಸಾಕಷ್ಟು ಮಾಹಿತಿಗಳು ಹೊಂದಾಣಿಕೆ ತಪ್ಪುತ್ತಿವೆ. ಅಧಿಕಾರಿಗಳು ಸಮರ್ಪಕ ಮಾಹಿತಿ ಜೊತೆಗೆ ಸಭೆಗಳಿಗೆ ಹಾಜರಾಗಬೇಕು'' ಎಂದು ಸಚಿವರು ತಿಳಿಸಿದರು.

ಪಿಗ್ಮಿ ಕಲೆಕ್ಷನ್ ಸಾಫ್ಟ್ ವೇರ್ ದುರ್ಬಳಕೆ: ''ಠೇವಣಿ ಏಜೆಂಟ್​ಗಳಿಂದ ಪಿಗ್ಮಿ ಕಲೆಕ್ಷನ್​ಗಳಲ್ಲಿ ಈಗಾಗಲೇ ಅನೇಕ ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಸಾಫ್ಟ್‌ವೇರ್‌ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಣ ದುರ್ಬಳಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು'' ಎಂದು ಕೆ.ಎನ್.ರಾಜಣ್ಣ ತಿಳಿಸಿದರು.

''ಬಾಗಲಕೋಟೆ, ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳ ಡಿಸಿಸಿ ಬ್ಯಾಂಕ್ ವ್ಯಾಪ್ತಿಯಲ್ಲಿ ಕೆಲವು ಹಣ ದುರುಪಯೋಗ ವಂಚನೆ ಪ್ರಕರಣಗಳು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣಗಳು ಸಿಬಿಐ ಹಂತದಲ್ಲಿ ತನಿಖೆ ನಡೆಯುತ್ತಿವೆ'' ಎಂದು ಸಂಬಂಧಿಸಿದ ಅಧಿಕಾರಿಗಳು ವಿವರಿಸಿದರು.

ಕೃಷಿ ಸಾಲ ವಿತರಣೆಗೆ ಒತ್ತು ನೀಡಿ: ಸಾಲ ವಿತರಣೆ ಹಾಗೂ ವಸೂಲಾತಿಯತ್ತ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನ ಹರಿಸಬೇಕು. ಸಾರ್ವಜನಿಕರು ಸಾಕಷ್ಟು ಠೇವಣಿಗಳನ್ನು ಇರಿಸಿದ್ದಾರೆ. ಸಾರ್ವಜನಿಕರ ನಂಬಿಕೆಗೆ ಚ್ಯುತಿ ಬರದಂತೆ ಸಿಬ್ಬಂದಿ ಕೆಲಸ ಮಾಡಬೇಕು. ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದ ಸಣ್ಣ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ ಹೆಚ್ಚಿನ ಕೃಷಿ ಸಾಲ ನೀಡಬೇಕು. ಕೇವಲ ಹೆಚ್ಚು ಜಾಮೀನು ಹೊಂದಿದ ರೈತರಿಗೆ ಸಾಲ ನೀಡುವುದು ಮಾತ್ರವಲ್ಲದೇ ಸಣ್ಣ ಜಾಮೀನು ಹೊಂದಿದ ರೈತರಿಗೂ ಕೂಡ ಸಾಲ ಒದಗಿಸುವತ್ತ ಅಧಿಕಾರಿ ಸಿಬ್ಬಂದಿ ಆದ್ಯತೆ ನೀಡಬೇಕು ಎಂದು ಸಚಿವ ಕೆ.ಎನ್. ರಾಜಣ್ಣ ಸಲಹೆ ನೀಡಿದರು.

ಸಹಕಾರ ಸಂಘಗಳ ನಿಬಂಧಕ ಡಾ.ಕೆ. ರಾಜೇಂದ್ರ, ಸಹಕಾರ ಸಂಘಗಳ ಅಪರ ನಿಬಂಧಕ ಕೆ.ಎಂ. ಆಶಾ, ಸಹಕಾರ ಸಂಘಗಳ ಅಪರ ನಿಬಂಧಕರು ಪ್ರಕಾಶ ರಾವ್ ಬೆಳಗಾವಿ ಜಂಟಿ ನಿಬಂಧಕರಾದ ಸುರೇಶ ಗೌಡ, ಸಹಕಾರ ಇಲಾಖೆ ಸಿಬ್ಬಂದಿ, ಡಿಸಿಸಿ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕರು ಸೇರಿದಂತೆ ಇಲಾಖೆಯ ಅಧಿಕಾರಿ, ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅರ್ಥಪೂರ್ಣ, ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ, ಉದ್ಘಾಟಕರಾಗಿ ಸುತ್ತೂರು ಸ್ವಾಮೀಜಿ ಹೆಸರು ಪ್ರಸ್ತಾಪ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ''ಸಹಕಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಅರ್ಬನ್ ಸೊಸೈಟಿಗಳಲ್ಲಿ ಹಣ ಕಬಳಿಸಿ, ದುರುಪಯೋಗಪಡಿಸಿಕೊಂಡು ಸಂಸ್ಥೆಗಳಿಗೆ ವಂಚನೆ ಎಸಗುವವರ ವಿರುದ್ಧ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು'' ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್ ರಾಜಣ್ಣ ಸೂಚನೆ ನೀಡಿದರು.

ಸುವರ್ಣ ವಿಧಾನ ಸೌಧದ ಕಾನ್ಫರೆನ್ಸ್ ಹಾಲ್​ನಲ್ಲಿ ಇಂದು ನಡೆದ ಬೆಳಗಾವಿ ಪ್ರಾಂತ್ಯದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ''ಜಿಲ್ಲೆಗಳ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಹಣ ದುರುಪಯೋಗ ಪ್ರಕರಣಗಳು ಗಣನೀಯವಾಗಿ ಹೆಚ್ಚಿರುವುದು ಗಮನಕ್ಕೆ ಬಂದಿದೆ. ಕಳೆದ 3ರಿಂದ 4 ವರ್ಷಗಳಿಂದ ಬಾಕಿಯಿರುವ ವಂಚನೆ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ನ್ಯಾಯಾಲಯ ಹಂತಗಳಲ್ಲಿರುವ ಪ್ರಕರಣಗಳ ಕೋರ್ಟ್ ನಿಗದಿ ದಿನಾಂಕಕ್ಕೆ ಅಧಿಕಾರಿಗಳು ತಪ್ಪದೇ ಹಾಜರಿರಬೇಕು'' ಎಂದು ಸೂಚಿಸಿದರು. ''ಪ್ರತಿ ಸಭೆಯಲ್ಲಿ ಸರಿಯಾದ ಮಾಹಿತಿ ಒದಗಿಸುತ್ತಿಲ್ಲ. ಈ ಹಿಂದಿನ ಮಾಹಿತಿಯನ್ನು ಪರಿಶೀಲಿಸಿದಾಗ ಸಾಕಷ್ಟು ಮಾಹಿತಿಗಳು ಹೊಂದಾಣಿಕೆ ತಪ್ಪುತ್ತಿವೆ. ಅಧಿಕಾರಿಗಳು ಸಮರ್ಪಕ ಮಾಹಿತಿ ಜೊತೆಗೆ ಸಭೆಗಳಿಗೆ ಹಾಜರಾಗಬೇಕು'' ಎಂದು ಸಚಿವರು ತಿಳಿಸಿದರು.

ಪಿಗ್ಮಿ ಕಲೆಕ್ಷನ್ ಸಾಫ್ಟ್ ವೇರ್ ದುರ್ಬಳಕೆ: ''ಠೇವಣಿ ಏಜೆಂಟ್​ಗಳಿಂದ ಪಿಗ್ಮಿ ಕಲೆಕ್ಷನ್​ಗಳಲ್ಲಿ ಈಗಾಗಲೇ ಅನೇಕ ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಸಾಫ್ಟ್‌ವೇರ್‌ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಣ ದುರ್ಬಳಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು'' ಎಂದು ಕೆ.ಎನ್.ರಾಜಣ್ಣ ತಿಳಿಸಿದರು.

''ಬಾಗಲಕೋಟೆ, ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳ ಡಿಸಿಸಿ ಬ್ಯಾಂಕ್ ವ್ಯಾಪ್ತಿಯಲ್ಲಿ ಕೆಲವು ಹಣ ದುರುಪಯೋಗ ವಂಚನೆ ಪ್ರಕರಣಗಳು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣಗಳು ಸಿಬಿಐ ಹಂತದಲ್ಲಿ ತನಿಖೆ ನಡೆಯುತ್ತಿವೆ'' ಎಂದು ಸಂಬಂಧಿಸಿದ ಅಧಿಕಾರಿಗಳು ವಿವರಿಸಿದರು.

ಕೃಷಿ ಸಾಲ ವಿತರಣೆಗೆ ಒತ್ತು ನೀಡಿ: ಸಾಲ ವಿತರಣೆ ಹಾಗೂ ವಸೂಲಾತಿಯತ್ತ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನ ಹರಿಸಬೇಕು. ಸಾರ್ವಜನಿಕರು ಸಾಕಷ್ಟು ಠೇವಣಿಗಳನ್ನು ಇರಿಸಿದ್ದಾರೆ. ಸಾರ್ವಜನಿಕರ ನಂಬಿಕೆಗೆ ಚ್ಯುತಿ ಬರದಂತೆ ಸಿಬ್ಬಂದಿ ಕೆಲಸ ಮಾಡಬೇಕು. ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದ ಸಣ್ಣ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ ಹೆಚ್ಚಿನ ಕೃಷಿ ಸಾಲ ನೀಡಬೇಕು. ಕೇವಲ ಹೆಚ್ಚು ಜಾಮೀನು ಹೊಂದಿದ ರೈತರಿಗೆ ಸಾಲ ನೀಡುವುದು ಮಾತ್ರವಲ್ಲದೇ ಸಣ್ಣ ಜಾಮೀನು ಹೊಂದಿದ ರೈತರಿಗೂ ಕೂಡ ಸಾಲ ಒದಗಿಸುವತ್ತ ಅಧಿಕಾರಿ ಸಿಬ್ಬಂದಿ ಆದ್ಯತೆ ನೀಡಬೇಕು ಎಂದು ಸಚಿವ ಕೆ.ಎನ್. ರಾಜಣ್ಣ ಸಲಹೆ ನೀಡಿದರು.

ಸಹಕಾರ ಸಂಘಗಳ ನಿಬಂಧಕ ಡಾ.ಕೆ. ರಾಜೇಂದ್ರ, ಸಹಕಾರ ಸಂಘಗಳ ಅಪರ ನಿಬಂಧಕ ಕೆ.ಎಂ. ಆಶಾ, ಸಹಕಾರ ಸಂಘಗಳ ಅಪರ ನಿಬಂಧಕರು ಪ್ರಕಾಶ ರಾವ್ ಬೆಳಗಾವಿ ಜಂಟಿ ನಿಬಂಧಕರಾದ ಸುರೇಶ ಗೌಡ, ಸಹಕಾರ ಇಲಾಖೆ ಸಿಬ್ಬಂದಿ, ಡಿಸಿಸಿ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕರು ಸೇರಿದಂತೆ ಇಲಾಖೆಯ ಅಧಿಕಾರಿ, ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅರ್ಥಪೂರ್ಣ, ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ, ಉದ್ಘಾಟಕರಾಗಿ ಸುತ್ತೂರು ಸ್ವಾಮೀಜಿ ಹೆಸರು ಪ್ರಸ್ತಾಪ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.