ETV Bharat / state

ರಾಯಣ್ಣ-ಶಿವಾಜಿ ಇಬ್ಬರೂ ಈ ದೇಶದ ಆಸ್ತಿ: ಸಚಿವ ರಮೇಶ್ ಜಾರಕಿಹೊಳಿ

author img

By

Published : Aug 28, 2020, 1:42 PM IST

ಗಲಾಟೆಯ ವಿಚಾರವಾಗಿ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಜಿಲ್ಲಾಧಿಕಾರಿ ಹಾಗೂ ಎಸ್​​ಪಿ ಅವರ ಜೊತೆಯೂ ಮಾತನಾಡಿದ್ದೇನೆ. ಲಾಠಿ ಚಾರ್ಜ್​ ಆಗಿದ್ದು ನಿಜ. ಆದರೆ ಯಾರೂ ಚಪ್ಪಲಿ ಎಸೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಅಂತ ಜಾರಕಿಹೊಳಿ ಹೇಳಿದರು.

Rayanna and Shivaji are the property of this country:
ರಾಯಣ್ಣ, ಶಿವಾಜಿ ಇಬ್ಬರೂ ಈ ದೇಶದ ಆಸ್ತಿ: ಸಚಿವ ರಮೇಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸಂಬಂಧ ಸದ್ಯ ಪೀರನವಾಡಿಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಬೆಳಗಾವಿ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ

ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರತಿಕ್ರಿಯಿಸಿದ ಅವರು, ರಾಯಣ್ಣ ಹಾಗೂ ಶಿವಾಜಿ ಇಬ್ಬರೂ ಈ ದೇಶದ ಆಸ್ತಿ. ಅವರನ್ನು ಯಾವ ಜಾತಿಗೂ ಸೀಮಿತ ಮಾಡುವುದಿಲ್ಲ. ಅವರಿಗೆ ಯಾವುದೇ ಅಪಮಾನ ಆಗದ ರೀತಿಯಲ್ಲಿ ಗೊಂದಲ ಪರಿಹರಿಸುತ್ತೇವೆ ಎಂದರು.

ಅಲ್ಲದೆ ಈ ಗಲಾಟೆಯ ವಿಚಾರವಾಗಿ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಜಿಲ್ಲಾಧಿಕಾರಿ ಹಾಗೂ ಎಸ್​​​ಪಿ ಅವರ ಜೊತೆಯೂ ಮಾತನಾಡಿದ್ದೇನೆ. ಲಾಠಿ ಚಾರ್ಜ್​ ಆಗಿದ್ದು ನಿಜ. ಆದರೆ ಯಾರೂ ಚಪ್ಪಲಿ ಎಸೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಅಂತ ಜಾರಕಿಹೊಳಿ ಹೇಳಿದರು.

ಚಿಕ್ಕೋಡಿ (ಬೆಳಗಾವಿ): ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸಂಬಂಧ ಸದ್ಯ ಪೀರನವಾಡಿಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಬೆಳಗಾವಿ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ

ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರತಿಕ್ರಿಯಿಸಿದ ಅವರು, ರಾಯಣ್ಣ ಹಾಗೂ ಶಿವಾಜಿ ಇಬ್ಬರೂ ಈ ದೇಶದ ಆಸ್ತಿ. ಅವರನ್ನು ಯಾವ ಜಾತಿಗೂ ಸೀಮಿತ ಮಾಡುವುದಿಲ್ಲ. ಅವರಿಗೆ ಯಾವುದೇ ಅಪಮಾನ ಆಗದ ರೀತಿಯಲ್ಲಿ ಗೊಂದಲ ಪರಿಹರಿಸುತ್ತೇವೆ ಎಂದರು.

ಅಲ್ಲದೆ ಈ ಗಲಾಟೆಯ ವಿಚಾರವಾಗಿ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಜಿಲ್ಲಾಧಿಕಾರಿ ಹಾಗೂ ಎಸ್​​​ಪಿ ಅವರ ಜೊತೆಯೂ ಮಾತನಾಡಿದ್ದೇನೆ. ಲಾಠಿ ಚಾರ್ಜ್​ ಆಗಿದ್ದು ನಿಜ. ಆದರೆ ಯಾರೂ ಚಪ್ಪಲಿ ಎಸೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಅಂತ ಜಾರಕಿಹೊಳಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.