ETV Bharat / state

Electricity Bill: ವಿದ್ಯುತ್ ದರ ಏರಿಕೆ ಬಗ್ಗೆ ನಮಗೂ ಗೊಂದಲ ಇದೆ - ಸಚಿವ ಸತೀಶ್​ ಜಾರಕಿಹೊಳಿ

author img

By

Published : Jun 13, 2023, 3:29 PM IST

Updated : Jun 13, 2023, 5:36 PM IST

ವಿದ್ಯುತ್ ದರ ಏಕೆ ಹೆಚ್ಚಾಗಿದೆ ಎಂದು ಸಂಜೆಯೊಳಗೆ ತಿಳಿದುಕೊಂಡು ಹೇಳುತ್ತೇವೆ ಎಂದು ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದರು.

Etv Bharatsatish-jarakiholi-reaction-on-electricity-price-hike-in-belgavi
Electricity price hike: ವಿದ್ಯುತ್ ದರ ಏರಿಕೆ ಬಗ್ಗೆ ನಮಗೂ ಗೊಂದಲ ಇದೆ - ಸತೀಶ್​ ಜಾರಕಿಹೊಳಿ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ‌

ಬೆಳಗಾವಿ: ಒಂದು ದಿನದಲ್ಲಿ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ಹೋಗಲು ಆಗುವುದಿಲ್ಲ. ಮಹಾರಾಷ್ಟ್ರಕ್ಕೆ ಹೋಗಲು 10 ವರ್ಷ ಬೇಕು. ತಕ್ಷಣ ಹೋಗೋಕೆ ಅದೇನು ಡಬ್ಬಾ ಅಂಗಡಿ, ಚಹಾ ಅಂಗಡಿಯಾ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ‌ ಪ್ರಶ್ನಿಸಿದರು. ವಿದ್ಯುತ್ ದರ ಇಳಿಸದಿದ್ದರೆ ಮಹಾರಾಷ್ಟ್ರಕ್ಕೆ ವಲಸೆ ಹೋಗುವುದಾಗಿ ಬೆಳಗಾವಿ ಕೈಗಾರಿಕೋದ್ಯಮಿಗಳು ನೀಡಿರುವ ಎಚ್ಚರಿಕೆ ಬಗ್ಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.

ಒಂದು ಕೈಗಾರಿಕೆ ಆಗಲು ಹತ್ತು ವರ್ಷ ಬೇಕಾಗುತ್ತದೆ. ಅದಕ್ಕೆ ಎಷ್ಟು ಶ್ರಮ, ಎಷ್ಟು ದುಡ್ಡು ಆಗುತ್ತೆ, ಹಾಗೇ ಹೋಗಲು ಆಗಲ್ಲ. ನೋಡೋಣ ವಿದ್ಯುತ್ ದರ ಏರಿಕೆ ಬಗ್ಗೆ ನಮಗೂ ಗೊಂದಲ ಇದೆ. ಮೂರು ಪಟ್ಟು ವಿದ್ಯುತ್ ಬಿಲ್ ಹೆಚ್ಚಾಗಿದೆ. ಏಕೆ ಹೆಚ್ಚಾಗಿದೆ ಎಂದು ಸಂಜೆಯೊಳಗೆ ತಿಳಿದುಕೊಂಡು ಹೇಳುತ್ತೇವೆ. ಕೆಇಆರ್‌ಸಿಯವರು 10 ಪರ್ಸೆಂಟ್ ಮಾತ್ರ ಹೆಚ್ಚು ಮಾಡಿದ್ದಾರೆ ಎಂದರು.

ಹಿಂದಿನ ಸರ್ಕಾರ ಮುಂದಿನ ಸರ್ಕಾರ ಅನ್ನೋ ಪ್ರಶ್ನೆ ಇಲ್ಲ, ಸರ್ಕಾರ ಸರ್ಕಾರವೇ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವೇ ಬೇರೆ ಇದೆ, ಅದಕ್ಕೂ ಪಕ್ಷಕ್ಕೂ ಏನೂ ಸಂಬಂಧ ಇಲ್ಲ. ಏಪ್ರಿಲ್ 1ರಂದು ಆದೇಶ ಆಗಿರಬಹುದು. ಚುನಾವಣೆ ಹಿನ್ನೆಲೆ ಜಾರಿಯಾಗಿಲ್ಲ ಅನಿಸುತ್ತೆ. ಈಗ ಎರಡ್ಮೂರು ತಿಂಗಳು ಸೇರಿಸಿ ವಿದ್ಯುತ್​ ಬಿಲ್​ ಕೊಟ್ಟಿರಬೇಕು ಅಂತಾ ನನ್ನ ಅಂದಾಜು. ಏಪ್ರಿಲ್, ಮೇ ತಿಂಗಳದ್ದು ಸೇರಿಸಿ ಬಿಲ್ ಕೊಟ್ಟಿರಬೇಕು ಎಂಬುದು ನನ್ನ ಭಾವನೆ. ನಾನು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಸಚಿವರು ಹೇಳಿದರು.

1980ರಿಂದ ಈಚೆಗೆ ಫೌಂಡ್ರಿ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ವಿಚಾರ ವಿದ್ಯುತ್ ದರ ಏರಿಕೆಯಿಂದ ಹಾಗೆಲ್ಲ ಆಗಲ್ಲ, ಇದು ತಾತ್ಕಾಲಿಕ ಸಮಸ್ಯೆ ಅಷ್ಟೇ. ವಿದ್ಯುತ್ ದರ ಏರಿಕೆ ಕೇವಲ ಕರ್ನಾಟಕದ ಸಮಸ್ಯೆ ಅಲ್ಲ, ವಿದ್ಯುತ್ ದರ ಏರಿಕೆ ಇಡೀ ದೇಶದ ಆಯಾ ರಾಜ್ಯಗಳಲ್ಲಿ ಕಾಲಕ್ಕೆ ತಕ್ಕಂತೆ ಏರಿಸುತ್ತಾರೆ. ಇದು ಹೊಸದೇನಲ್ಲ, ಪ್ರತಿ ವರ್ಷ ಪರಿಷ್ಕರಣೆ ಮಾಡುತ್ತಾರೆ ಎಂದು ತಿಳಿಸಿದರು.

ವಿದ್ಯುತ್ ದರ ಏರಿಕೆ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡುತ್ತಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ, ಹೌದು ಸ್ಪಷ್ಟನೆ ಕೊಡಬೇಕು. ನೀವು ಮಾಧ್ಯಮದವರು ಸ್ವಲ್ಪ ಸರ್ಚ್ ಮಾಡಿ ಎಂದ ಸತೀಶ್​ ಜಾರಕಿಹೊಳಿ, ಎಲ್ಲಿ ಆಯ್ತು, ಏನ್ ಆಯ್ತು, ಇದರ ಬಗ್ಗೆ ಪ್ಯಾನಲ್​ ಡಿಸ್ಕಷನ್ ಆಗಬೇಕು‌. ಇದೆಲ್ಲ ಪ್ಯಾನಲ್​ ಡಿಸ್ಕಷನ್‌ನಲ್ಲಿ ಎಲ್ಲಾ ಎಕ್ಸ್ಪರ್ಟ್ಸ್ ಬಂದ್ರೆ ಹೇಳುತ್ತಾರೆ. ಪ್ಯಾನಲ್ ಡಿಸ್ಕಷನ್ ಆದ್ರೆ ಅದರ ಮೇಲೆ ಬೆಳಕು ಚೆಲ್ಲಬಹುದು ಅಷ್ಟೇ ಎಂದು ಹೇಳಿದರು.

ಕೆಇಆರ್‌ಸಿ ಆದೇಶ ಏಕೆ ತಡೆ ಹಿಡಿಯಬಾರದು ಎಂಬ ವಿಪಕ್ಷಗಳ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ನಮ್ಮ ಕಡೆ ಇಲ್ಲ, ಅದು ಅಥಾರಿಟಿ. ಕೆಇಆರ್​ಸಿ ಸಪರೇಟ್ ಇದೆ ಎಂದರು. ಇನ್ನು ಮುಂಗಾರು ಮಳೆ ಒಂದು ವಾರ ತಡವಾಗಿದೆ. ಆದರೆ, ಬರಗಾಲವಿಲ್ಲ. ಇನ್ನೊಂದು ವಾರದೊಳಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗಾಗಿ, ರೈತರು ಆತಂಕ ಪಡಬಾರದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮ ವಹಿಸಲಾಗಿದೆ‌ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಹಳೆಯ ಬಸ್‌ಗಳನ್ನೂ ಓಡಿಸಲಾಗುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಎಲ್ಲ ನಿಗಮಗಳು ಮೊದಲೇ ನಷ್ಟದಲ್ಲಿದ್ದವು. ಈ ಸ್ತ್ರೀ ಶಕ್ತಿಯಿಂದ ಲಾಭ ಬರುತ್ತದೆ. ಲಾಭ ಬಂದರೆ ಹೊಸ ಬಸ್ ಖರೀದಿ ಮಾಡುತ್ತಾರೆ. ವೇತನ ಹೆಚ್ಚಾಗುತ್ತದೆ, ಸ್ವಚ್ಛತೆ ಇಡುವ ಮೂಲಕ ಎಲ್ಲವೂ‌ ಬದಲಾಗುತ್ತದೆ. ಈಗ ಒಂದಿಷ್ಟು ಬಸ್​ಗಳನ್ನು ಸರ್ಕಾರ ಖರೀದಿ‌ ಮಾಡಿ ಅವರಿಗೆ ಕೊಡುತ್ತದೆ ಎಂದರು.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗೆ ಜನ ಬರಬೇಕೋ ಬೇಡ್ವೋ: ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸುವಂತೆ ಸಿಎಂ ಸೂಚನೆ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ‌

ಬೆಳಗಾವಿ: ಒಂದು ದಿನದಲ್ಲಿ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ಹೋಗಲು ಆಗುವುದಿಲ್ಲ. ಮಹಾರಾಷ್ಟ್ರಕ್ಕೆ ಹೋಗಲು 10 ವರ್ಷ ಬೇಕು. ತಕ್ಷಣ ಹೋಗೋಕೆ ಅದೇನು ಡಬ್ಬಾ ಅಂಗಡಿ, ಚಹಾ ಅಂಗಡಿಯಾ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ‌ ಪ್ರಶ್ನಿಸಿದರು. ವಿದ್ಯುತ್ ದರ ಇಳಿಸದಿದ್ದರೆ ಮಹಾರಾಷ್ಟ್ರಕ್ಕೆ ವಲಸೆ ಹೋಗುವುದಾಗಿ ಬೆಳಗಾವಿ ಕೈಗಾರಿಕೋದ್ಯಮಿಗಳು ನೀಡಿರುವ ಎಚ್ಚರಿಕೆ ಬಗ್ಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.

ಒಂದು ಕೈಗಾರಿಕೆ ಆಗಲು ಹತ್ತು ವರ್ಷ ಬೇಕಾಗುತ್ತದೆ. ಅದಕ್ಕೆ ಎಷ್ಟು ಶ್ರಮ, ಎಷ್ಟು ದುಡ್ಡು ಆಗುತ್ತೆ, ಹಾಗೇ ಹೋಗಲು ಆಗಲ್ಲ. ನೋಡೋಣ ವಿದ್ಯುತ್ ದರ ಏರಿಕೆ ಬಗ್ಗೆ ನಮಗೂ ಗೊಂದಲ ಇದೆ. ಮೂರು ಪಟ್ಟು ವಿದ್ಯುತ್ ಬಿಲ್ ಹೆಚ್ಚಾಗಿದೆ. ಏಕೆ ಹೆಚ್ಚಾಗಿದೆ ಎಂದು ಸಂಜೆಯೊಳಗೆ ತಿಳಿದುಕೊಂಡು ಹೇಳುತ್ತೇವೆ. ಕೆಇಆರ್‌ಸಿಯವರು 10 ಪರ್ಸೆಂಟ್ ಮಾತ್ರ ಹೆಚ್ಚು ಮಾಡಿದ್ದಾರೆ ಎಂದರು.

ಹಿಂದಿನ ಸರ್ಕಾರ ಮುಂದಿನ ಸರ್ಕಾರ ಅನ್ನೋ ಪ್ರಶ್ನೆ ಇಲ್ಲ, ಸರ್ಕಾರ ಸರ್ಕಾರವೇ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವೇ ಬೇರೆ ಇದೆ, ಅದಕ್ಕೂ ಪಕ್ಷಕ್ಕೂ ಏನೂ ಸಂಬಂಧ ಇಲ್ಲ. ಏಪ್ರಿಲ್ 1ರಂದು ಆದೇಶ ಆಗಿರಬಹುದು. ಚುನಾವಣೆ ಹಿನ್ನೆಲೆ ಜಾರಿಯಾಗಿಲ್ಲ ಅನಿಸುತ್ತೆ. ಈಗ ಎರಡ್ಮೂರು ತಿಂಗಳು ಸೇರಿಸಿ ವಿದ್ಯುತ್​ ಬಿಲ್​ ಕೊಟ್ಟಿರಬೇಕು ಅಂತಾ ನನ್ನ ಅಂದಾಜು. ಏಪ್ರಿಲ್, ಮೇ ತಿಂಗಳದ್ದು ಸೇರಿಸಿ ಬಿಲ್ ಕೊಟ್ಟಿರಬೇಕು ಎಂಬುದು ನನ್ನ ಭಾವನೆ. ನಾನು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಸಚಿವರು ಹೇಳಿದರು.

1980ರಿಂದ ಈಚೆಗೆ ಫೌಂಡ್ರಿ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ವಿಚಾರ ವಿದ್ಯುತ್ ದರ ಏರಿಕೆಯಿಂದ ಹಾಗೆಲ್ಲ ಆಗಲ್ಲ, ಇದು ತಾತ್ಕಾಲಿಕ ಸಮಸ್ಯೆ ಅಷ್ಟೇ. ವಿದ್ಯುತ್ ದರ ಏರಿಕೆ ಕೇವಲ ಕರ್ನಾಟಕದ ಸಮಸ್ಯೆ ಅಲ್ಲ, ವಿದ್ಯುತ್ ದರ ಏರಿಕೆ ಇಡೀ ದೇಶದ ಆಯಾ ರಾಜ್ಯಗಳಲ್ಲಿ ಕಾಲಕ್ಕೆ ತಕ್ಕಂತೆ ಏರಿಸುತ್ತಾರೆ. ಇದು ಹೊಸದೇನಲ್ಲ, ಪ್ರತಿ ವರ್ಷ ಪರಿಷ್ಕರಣೆ ಮಾಡುತ್ತಾರೆ ಎಂದು ತಿಳಿಸಿದರು.

ವಿದ್ಯುತ್ ದರ ಏರಿಕೆ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡುತ್ತಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ, ಹೌದು ಸ್ಪಷ್ಟನೆ ಕೊಡಬೇಕು. ನೀವು ಮಾಧ್ಯಮದವರು ಸ್ವಲ್ಪ ಸರ್ಚ್ ಮಾಡಿ ಎಂದ ಸತೀಶ್​ ಜಾರಕಿಹೊಳಿ, ಎಲ್ಲಿ ಆಯ್ತು, ಏನ್ ಆಯ್ತು, ಇದರ ಬಗ್ಗೆ ಪ್ಯಾನಲ್​ ಡಿಸ್ಕಷನ್ ಆಗಬೇಕು‌. ಇದೆಲ್ಲ ಪ್ಯಾನಲ್​ ಡಿಸ್ಕಷನ್‌ನಲ್ಲಿ ಎಲ್ಲಾ ಎಕ್ಸ್ಪರ್ಟ್ಸ್ ಬಂದ್ರೆ ಹೇಳುತ್ತಾರೆ. ಪ್ಯಾನಲ್ ಡಿಸ್ಕಷನ್ ಆದ್ರೆ ಅದರ ಮೇಲೆ ಬೆಳಕು ಚೆಲ್ಲಬಹುದು ಅಷ್ಟೇ ಎಂದು ಹೇಳಿದರು.

ಕೆಇಆರ್‌ಸಿ ಆದೇಶ ಏಕೆ ತಡೆ ಹಿಡಿಯಬಾರದು ಎಂಬ ವಿಪಕ್ಷಗಳ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ನಮ್ಮ ಕಡೆ ಇಲ್ಲ, ಅದು ಅಥಾರಿಟಿ. ಕೆಇಆರ್​ಸಿ ಸಪರೇಟ್ ಇದೆ ಎಂದರು. ಇನ್ನು ಮುಂಗಾರು ಮಳೆ ಒಂದು ವಾರ ತಡವಾಗಿದೆ. ಆದರೆ, ಬರಗಾಲವಿಲ್ಲ. ಇನ್ನೊಂದು ವಾರದೊಳಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗಾಗಿ, ರೈತರು ಆತಂಕ ಪಡಬಾರದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮ ವಹಿಸಲಾಗಿದೆ‌ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಹಳೆಯ ಬಸ್‌ಗಳನ್ನೂ ಓಡಿಸಲಾಗುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಎಲ್ಲ ನಿಗಮಗಳು ಮೊದಲೇ ನಷ್ಟದಲ್ಲಿದ್ದವು. ಈ ಸ್ತ್ರೀ ಶಕ್ತಿಯಿಂದ ಲಾಭ ಬರುತ್ತದೆ. ಲಾಭ ಬಂದರೆ ಹೊಸ ಬಸ್ ಖರೀದಿ ಮಾಡುತ್ತಾರೆ. ವೇತನ ಹೆಚ್ಚಾಗುತ್ತದೆ, ಸ್ವಚ್ಛತೆ ಇಡುವ ಮೂಲಕ ಎಲ್ಲವೂ‌ ಬದಲಾಗುತ್ತದೆ. ಈಗ ಒಂದಿಷ್ಟು ಬಸ್​ಗಳನ್ನು ಸರ್ಕಾರ ಖರೀದಿ‌ ಮಾಡಿ ಅವರಿಗೆ ಕೊಡುತ್ತದೆ ಎಂದರು.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗೆ ಜನ ಬರಬೇಕೋ ಬೇಡ್ವೋ: ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸುವಂತೆ ಸಿಎಂ ಸೂಚನೆ

Last Updated : Jun 13, 2023, 5:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.