ETV Bharat / state

ಬೆಳಗಾವಿ ಸ್ಮಾರ್ಟ್​ ಸಿಟಿ ಕಾಮಗಾರಿ ಕಳಪೆ: ಇಂಜಿನಿಯರ್​ಗೆ ಸಚಿವ ಖಾದರ್​ ತರಾಟೆ - undefined

ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದ ನಗರಾಭಿವೃದ್ಧಿ ಸಚಿವ ಯು.ಟಿ‌ ಖಾದರ್ ಕಳಪೆ ಕಾಮಗಾರಿ ಮಾಡಿರುವ ಅಧಿಕಾರಿಯ ವಿರುದ್ಧ ಗರಂ ಆದ ಘಟನೆ ನಡೆಯಿತು.

ಸಚಿವ ಯು.ಟಿ‌ ಖಾದರ್ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ
author img

By

Published : Jul 5, 2019, 4:08 PM IST

ಬೆಳಗಾವಿ : ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ಮಾಡಿದ ಸಚಿವ ಯು.ಟಿ‌ ಖಾದರ್ ಜಿಲ್ಲಾಡಳಿತದ ಸಹಯೋಗದಲ್ಲಿ ನಿರ್ಮಾಣವಾದ ವ್ಯಾಯಾಮ ಶಾಲೆಗೆ ಭೇಟಿ ನೀಡಿದರು. ಹೊಸದಾಗಿ ನಿರ್ಮಾಣವಾಗಿರುವ ಕಟ್ಟಡ ಸೋರುತ್ತಿದ್ದಿದ್ದನ್ನು ಗಮನಿಸಿದ‌ ಸಚಿವರು ಅಧಿಕಾರಿಗಳ‌ ವಿರುದ್ಧ ಗರಂ ಆದರು.

ಸಚಿವ ಯು.ಟಿ‌ ಖಾದರ್ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ

ಕಳಪೆ ಕಾಮಗಾರಿ ಮಾಡದಂತೆ ಸಚಿವರ ಎಚ್ಚರಿಕೆ :

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಗಳನ್ನು ಉತ್ತಮವಾಗಿ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದ್ದು, ವೇಗವಾಗಿ ಕಾಮಗಾರಿ ನಡೆಸುವಂತೆ ಎಚ್ಚರಿಸಿದ್ದಾರೆ.

ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ :

ಇನ್ನು ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ವಿದ್ಯಾರ್ಥಿನಿಗೆ ಚಾಕು ಇರಿತ ಪ್ರಕರಣಕ್ಕೆ ಸಚಿವರು ರಾಜೀನಾಮೆ ನೀಡಬೇಕು ಎಂಬ ಶೋಭಾ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಉತ್ತರ ಕೊಡಲು ಹೋಗುವುದಿಲ್ಲ.‌ ಮಂಗಳೂರು ಅಭಿವೃದ್ಧಿಗೆ ಪೂರಕವಾದ ಸಲಹೆ ಸೂಚನೆ ಕೊಡಲಿ. ಅದನ್ನ ಬಿಟ್ಟು ಯಾವುದೋ ಪ್ರಕರಣವನ್ನು ಇಟ್ಟುಕೊಂಡು ಆರೋಪ ಮಾಡುವುದಕ್ಕೆಲ್ಲ ಉತ್ತರ ಕೊಡುವುದಿಲ್ಲ ಎಂದರು.

ಪ್ರತಿಯೊಂದುಕ್ಕೂ ರಾಜಕೀಯ ಮಾಡುವ ಅವರು ಗೊಂದಲ ಸೃಷ್ಟಿಸುವ ಹೇಳಿಕೆ ನೀಡುವುದು ಸರಿಯಲ್ಲ. ಉಡುಪಿ ಜನರು ಶೋಭಾ ಕರಂದ್ಲಾಜೆ ನೋಡಿ ಮತ ಹಾಕಿಲ್ಲ. ಮೋದಿ ನೋಡಿ‌ ಮತ ಹಾಕಿದ್ದಾರೆ ಎಂದು ಜನರೇ ಹೇಳಿದ್ದಾರೆ. ಮೊದಲು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದರು.

ಬೆಳಗಾವಿ : ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ಮಾಡಿದ ಸಚಿವ ಯು.ಟಿ‌ ಖಾದರ್ ಜಿಲ್ಲಾಡಳಿತದ ಸಹಯೋಗದಲ್ಲಿ ನಿರ್ಮಾಣವಾದ ವ್ಯಾಯಾಮ ಶಾಲೆಗೆ ಭೇಟಿ ನೀಡಿದರು. ಹೊಸದಾಗಿ ನಿರ್ಮಾಣವಾಗಿರುವ ಕಟ್ಟಡ ಸೋರುತ್ತಿದ್ದಿದ್ದನ್ನು ಗಮನಿಸಿದ‌ ಸಚಿವರು ಅಧಿಕಾರಿಗಳ‌ ವಿರುದ್ಧ ಗರಂ ಆದರು.

ಸಚಿವ ಯು.ಟಿ‌ ಖಾದರ್ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ

ಕಳಪೆ ಕಾಮಗಾರಿ ಮಾಡದಂತೆ ಸಚಿವರ ಎಚ್ಚರಿಕೆ :

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಗಳನ್ನು ಉತ್ತಮವಾಗಿ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದ್ದು, ವೇಗವಾಗಿ ಕಾಮಗಾರಿ ನಡೆಸುವಂತೆ ಎಚ್ಚರಿಸಿದ್ದಾರೆ.

ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ :

ಇನ್ನು ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ವಿದ್ಯಾರ್ಥಿನಿಗೆ ಚಾಕು ಇರಿತ ಪ್ರಕರಣಕ್ಕೆ ಸಚಿವರು ರಾಜೀನಾಮೆ ನೀಡಬೇಕು ಎಂಬ ಶೋಭಾ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಉತ್ತರ ಕೊಡಲು ಹೋಗುವುದಿಲ್ಲ.‌ ಮಂಗಳೂರು ಅಭಿವೃದ್ಧಿಗೆ ಪೂರಕವಾದ ಸಲಹೆ ಸೂಚನೆ ಕೊಡಲಿ. ಅದನ್ನ ಬಿಟ್ಟು ಯಾವುದೋ ಪ್ರಕರಣವನ್ನು ಇಟ್ಟುಕೊಂಡು ಆರೋಪ ಮಾಡುವುದಕ್ಕೆಲ್ಲ ಉತ್ತರ ಕೊಡುವುದಿಲ್ಲ ಎಂದರು.

ಪ್ರತಿಯೊಂದುಕ್ಕೂ ರಾಜಕೀಯ ಮಾಡುವ ಅವರು ಗೊಂದಲ ಸೃಷ್ಟಿಸುವ ಹೇಳಿಕೆ ನೀಡುವುದು ಸರಿಯಲ್ಲ. ಉಡುಪಿ ಜನರು ಶೋಭಾ ಕರಂದ್ಲಾಜೆ ನೋಡಿ ಮತ ಹಾಕಿಲ್ಲ. ಮೋದಿ ನೋಡಿ‌ ಮತ ಹಾಕಿದ್ದಾರೆ ಎಂದು ಜನರೇ ಹೇಳಿದ್ದಾರೆ. ಮೊದಲು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದರು.

Intro:ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ : ಸಚಿವ ಯು.ಟಿ‌ ಖಾದರ್

ಬೆಳಗಾವಿ : ರಾಜಕೀಯ ಪ್ರೇರಿತವಾಗಿ ಶೋಭಾ ಅವರು ಹೇಳಿಕೆ ನೀಡುತ್ತಾರೆ ಅಂತಹ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ನಗರಾಭಿವೃದ್ದಿ ಸಚಿವ ಯು.ಟಿ ಖಾದರ್ ಹೇಳಿಕೆ ನೀಡಿದ್ದಾರೆ.

Body:ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಖಾದರ್. ಮಂಗಳೂರು ವಿದ್ಯಾರ್ಥಿನಿಗೆ ಚಾಕು ಇರಿತ ಪ್ರಕರಣಕ್ಕೆ ಸಚಿವರು ರಾಜೀನಾಮೆ ನೀಡಬೇಕು ಎಂಬ ಶೋಭಾ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವರು. ಶೋಭಾ ಕರಂದ್ಲಾಜೆ ಬಗ್ಗೆ ಹೇಳಿಕೆಗೆ ಉತ್ತರ ಕೊಡಲು ಹೋಗುವುದಿಲ್ಲ.‌ ಮಂಗಳೂರು ಅಭಿವೃದ್ಧಿಗೆ ಪೂರಕವಾದ ಸಲಹೆ ಸೂಚನೆ ಕೊಡಲಿ. ಅದನ್ನ ಬಿಟ್ಟು ಯಾವುದೋ ಪ್ರಕರಣವನ್ನು ಇಟ್ಟುಕೊಂಡು ಆರೋಪ ಮಾಡುವ ಅವರಿಗೆ ಉತ್ತರ ಕೊಡುವುದಿಲ್ಲ ಎಂದರು.

Conclusion:ಪ್ರತಿಯೊಂದುಕ್ಕೂ ರಾಜಕೀಯ ಮಾಡುವ ಅವರು ಗೊಂದಲ ಸೃಷ್ಟಿಸುವ ಹೇಳಿಕೆ ನೀಡುವುದು ಸರಿಯಲ್ಲ. ಉಡುಪಿ ಜನರು ಶೋಭಾ ಕರಂದ್ಲಾಜೆ ನೋಡಿ ಮತ ಹಾಕಿಲ್ಲ. ಮೋದಿ ನೋಡಿ‌ ಮತ ಹಾಕಿದ್ದಾರೆ ಎಂದು ಜನರೇ ಹೇಳಿದ್ದಾರೆ. ಮೊದಲು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಗೆ ಪ್ರತ್ಯುತ್ತರ ನೀಡಿದರು.

ವಿನಾಯಕ ಮಠಪತಿ
ಬೆಳಗಾವಿ


For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.