ETV Bharat / state

ಪಠ್ಯದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಬೆಳಗಾವಿ ಮಠಾಧೀಶರು ಗರಂ

author img

By

Published : Jun 2, 2022, 10:22 PM IST

ಬಸವಣ್ಣ ವೀರಶೈವ ಮತ ಅಭಿವೃದ್ಧಿ ಪಡಿಸಿದರು ಎಂದು ಪಠ್ಯದಲ್ಲಿ ನಮೂದು ಮಾಡಲಾಗಿದೆ. ಇದು ತಪ್ಪಾದ ಮಾಹಿತಿ ಆಗಿದೆ. ಆಗಿರುವ ತಪ್ಪನ್ನು ಕೂಡಲೇ ಸರಿಪಡಿಸಿ ಹೊಸ ಪಠ್ಯ ಮುದ್ರಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಬೆಳಗಾವಿ ಮಠಾಧೀಶರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ವಿರುದ್ಧ ಬೆಳಗಾವಿ ಮಠಾಧೀಶರು ಗರಂ
ಸರ್ಕಾರದ ವಿರುದ್ಧ ಬೆಳಗಾವಿ ಮಠಾಧೀಶರು ಗರಂ

ಬೆಳಗಾವಿ: ಪಠ್ಯ ಪುಸ್ತಕದಲ್ಲಿ ಬಣವಣ್ಣನವರ ಬಗ್ಗೆ ತಪ್ಪು ಮಾಹಿತಿ ಸೇರ್ಪಡೆ ಮಾಡಿದ್ದಕ್ಕೆ, ಬೆಳಗಾವಿಯ ‌ಲಿಂಗಾಯತ ಮಠಾಧೀಶರು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಮಠಾಧೀಶರು, ಡಿಸಿ ಮೂಲಕ ಶಿಕ್ಷಣ ಸಚಿವ ಬಿ.ಸಿ. ನಾಗೇಶಗೆ ಮನವಿ ಸಲ್ಲಿಸಿದರು.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಉಲ್ಲೇಖಿಸಲಾಗಿದೆ. ಬಸವಣ್ಣನವರಿಗೆ ಉಪನಯನವಾದ ಬಳಿಕ ಕೂಡಲಸಂಗಮಕ್ಕೆ ನಡೆದರು ಎಂದು ತಪ್ಪಾಗಿ ಬರೆಯಲಾಗಿದೆ. ಶೈವ ಗುರು ಸಾನ್ನಿಧ್ಯದಲ್ಲಿ ಲಿಂಗದೀಕ್ಷೆ ಪಡೆದರು ಎಂದು ತಪ್ಪಾಗಿ ಉಲ್ಲೇಖಿಸಲಾಗಿದೆ. ಬಸವಣ್ಣ ವೀರಶೈವ ಮತವನ್ನು ಅಭಿವೃದ್ಧಿ ಪಡಿಸಿದರು ಎಂದು ನಮೂದು ಮಾಡಲಾಗಿದೆ. ಆಗಿರುವ ತಪ್ಪನ್ನು ಕೂಡಲೇ ಸರಿಪಡಿಸಿ ಹೊಸ ಪಠ್ಯ ಮುದ್ರಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ನಾಗನೂರ ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ

ನಾಗನೂರ ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಮಠಾಧೀಶರು ಡಿಸಿ ಭೇಟಿಯಾದರು. ಕಿತ್ತೂರು ಕಲ್ಮಟ ಮಡಿವಾಳ ರಾಜಯೋಗೇಂದ್ರ ಸ್ವಾಮೀಜಿ, ಕಡೋಲಿ ದುರದುಂಡೇಶ್ವರ ಗುರು ಬಸವಲಿಂಗ ಸ್ವಾಮಿಜಿ, ಅರಳಿಕಟ್ಟಿಯ ತೋಟಂದಾರ್ಯ ಮಠದ ಶಿವಮೂರ್ತಿ ಸ್ವಾಮಿಜಿ, ಕಾರಂಜಿ ಮಠದ ಶಿವಯೋಗಿ ದೇವರು, ಕಲ್ಮಡ ಬಸವಪ್ರಭು ಸ್ವಾಮಿಜಿ, ಕಿತ್ತೂರಿನ ವಿಜಯ ಮಹಾಂತ ಸ್ವಾಮೀಜಿ, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಚಿವ ನಾಗೇಶ್ ಮನೆಗೆ ಮುತ್ತಿಗೆ: 15 ಆರೋಪಿಗಳಿಗೆ 12 ದಿನ ಪೊಲೀಸ್ ಕಸ್ಟಡಿ ನೀಡಿದ ಕೋರ್ಟ್​​

ಬೆಳಗಾವಿ: ಪಠ್ಯ ಪುಸ್ತಕದಲ್ಲಿ ಬಣವಣ್ಣನವರ ಬಗ್ಗೆ ತಪ್ಪು ಮಾಹಿತಿ ಸೇರ್ಪಡೆ ಮಾಡಿದ್ದಕ್ಕೆ, ಬೆಳಗಾವಿಯ ‌ಲಿಂಗಾಯತ ಮಠಾಧೀಶರು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಮಠಾಧೀಶರು, ಡಿಸಿ ಮೂಲಕ ಶಿಕ್ಷಣ ಸಚಿವ ಬಿ.ಸಿ. ನಾಗೇಶಗೆ ಮನವಿ ಸಲ್ಲಿಸಿದರು.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಉಲ್ಲೇಖಿಸಲಾಗಿದೆ. ಬಸವಣ್ಣನವರಿಗೆ ಉಪನಯನವಾದ ಬಳಿಕ ಕೂಡಲಸಂಗಮಕ್ಕೆ ನಡೆದರು ಎಂದು ತಪ್ಪಾಗಿ ಬರೆಯಲಾಗಿದೆ. ಶೈವ ಗುರು ಸಾನ್ನಿಧ್ಯದಲ್ಲಿ ಲಿಂಗದೀಕ್ಷೆ ಪಡೆದರು ಎಂದು ತಪ್ಪಾಗಿ ಉಲ್ಲೇಖಿಸಲಾಗಿದೆ. ಬಸವಣ್ಣ ವೀರಶೈವ ಮತವನ್ನು ಅಭಿವೃದ್ಧಿ ಪಡಿಸಿದರು ಎಂದು ನಮೂದು ಮಾಡಲಾಗಿದೆ. ಆಗಿರುವ ತಪ್ಪನ್ನು ಕೂಡಲೇ ಸರಿಪಡಿಸಿ ಹೊಸ ಪಠ್ಯ ಮುದ್ರಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ನಾಗನೂರ ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ

ನಾಗನೂರ ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಮಠಾಧೀಶರು ಡಿಸಿ ಭೇಟಿಯಾದರು. ಕಿತ್ತೂರು ಕಲ್ಮಟ ಮಡಿವಾಳ ರಾಜಯೋಗೇಂದ್ರ ಸ್ವಾಮೀಜಿ, ಕಡೋಲಿ ದುರದುಂಡೇಶ್ವರ ಗುರು ಬಸವಲಿಂಗ ಸ್ವಾಮಿಜಿ, ಅರಳಿಕಟ್ಟಿಯ ತೋಟಂದಾರ್ಯ ಮಠದ ಶಿವಮೂರ್ತಿ ಸ್ವಾಮಿಜಿ, ಕಾರಂಜಿ ಮಠದ ಶಿವಯೋಗಿ ದೇವರು, ಕಲ್ಮಡ ಬಸವಪ್ರಭು ಸ್ವಾಮಿಜಿ, ಕಿತ್ತೂರಿನ ವಿಜಯ ಮಹಾಂತ ಸ್ವಾಮೀಜಿ, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಚಿವ ನಾಗೇಶ್ ಮನೆಗೆ ಮುತ್ತಿಗೆ: 15 ಆರೋಪಿಗಳಿಗೆ 12 ದಿನ ಪೊಲೀಸ್ ಕಸ್ಟಡಿ ನೀಡಿದ ಕೋರ್ಟ್​​

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.