ETV Bharat / state

ರಮೇಶ್​​ ಜಾರಕಿಹೊಳಿ ರಾಜೀನಾಮೆ ವಿಚಾರ... ಕುತೂಹಲ ಮೂಡಿಸಿದ ಲಕ್ಷ್ಮಿ ಹೆಬ್ಬಾಳ್ಕರ್​​​ ಹೇಳಿಕೆ - undefined

ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡುವ ವಿಚಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಬಿಜೆಪಿಗೆ ಹೋಗುವುದರ ಬಗ್ಗೆ ಗೊತ್ತಿಲ್ಲ. ಅವರು ಮೊದಲು ಪಕ್ಷ ಬಿಟ್ಟು ಹೋಗಲಿ. ಆ ಮೇಲೆ ಅವರ ಬಗ್ಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವುದಿದೆ ಎಂದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್​​​
author img

By

Published : Apr 23, 2019, 3:38 PM IST

ಬೆಳಗಾವಿ: ರೆಬೆಲ್ ಶಾಸಕ‌ ರಮೇಶ್​ ಜಾರಕಿಹೊಳಿ ಕಾಂಗ್ರೆಸ್ ತೊರೆದ ಬಳಿಕವಷ್ಟೇ ಅವರ ಬಗ್ಗೆ ಮಾತನಾಡುತ್ತೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​​​ ಕುತೂಹಲದ ಹೇಳಿಕೆ ನೀಡಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡೋದಿದೆ. ಅವರು ಪಕ್ಷ ಬಿಟ್ಟು ಹೋದ ಮೇಲೆ ಅದನ್ನು ಹೊರ ಹಾಕುವೆ. ಅವರು ಬಿಜೆಪಿಗೆ ಹೋಗುವುದರ ಬಗ್ಗೆ ಗೊತ್ತಿಲ್ಲ. ಅವರ ವಿರುದ್ಧ ಹೈಕಮಾಂಡ್​​ಗೆ ದೂರು ಕೊಟ್ಟಿರುವುದು ಗೊತ್ತಿಲ್ಲ. ಅವರು ಮೊದಲು ಪಕ್ಷ ಬಿಟ್ಟು ಹೋಗಲಿ. ಆ ಮೇಲೆ ಅವರ ಬಗ್ಗೆ ಮಾತನಾಡುವುದಿದೆ ಎನ್ನುವ ಮೂಲಕ ಬಂಡಾಯ ಶಾಸಕ ರಮೇಶ್ ಬಗ್ಗೆ ಯಾರಿಗೂ ಗೊತ್ತಿಲ್ಲದ ವಿಚಾರವನ್ನು ಸ್ಫೋಟಿಸುವ ಸುಳಿವು ಬಿಟ್ಟುಕೊಟ್ರು. ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮಿ, ಆ ಸಂದರ್ಭ ಇನ್ನೂ ಬಂದಿಲ್ಲ. ಆದರೆ, ಕಡಲ ಮಂಥನವಾದಾಗ ಅಮೃತವೂ ಬರುತ್ತೆ ವಿಷಾವೂ ಬರುತ್ತೆ. ಎರಡನ್ನೂ ಸೇವಿಸಲು ತಯಾರಿರಬೇಕು ಎಂದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​

ಮುಂದುವರೆದು ಮಾತನಾಡಿದ ಶಾಸಕಿ ಲಕ್ಷ್ಮಿ, ಗೋಕಾಕ್​ಗೆ ಲಖನ್ ಜಾರಕಿಹೊಳಿ ಅವರನ್ನು ಉತ್ತರಾಧಿಕಾರಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಇಂತಹ ವಿಚಾರಗಳು ಅತೀ ಸೂಕ್ಷ್ಮ. ನಮ್ಮ ರಾಜ್ಯನಾಯಕರು ಮತ್ತು ಹೈಕಮಾಂಡ್ ನಾಯಕತ್ವ ನಿರ್ಧಾರ ಮಾಡುತ್ತೆ. ನಮ್ಮ ಅನಿಸಿಕೆ ಮೇಲೆ ಅವಲಂಬನೆ ಇರುವುದಿಲ್ಲ. ಎಲ್ಲರನ್ನು ಗಣನೆಗೆ ತೆಗೆದುಕೊಳ್ಳುತ್ತಾರೆ. ಸಾಧಕ‌-ಬಾಧಕಗಳ ಬಗ್ಗೆ ವಿಚಾರ ಮಾಡುತ್ತಾರೆ. ಅಷ್ಟು ಸುಲಭವಾಗಿ ಕಾಂಗ್ರೆಸ್ ಪಕ್ಷವನ್ನು ಯಾರೂ ರೈಡ್ ಮಾಡಲು ಆಗಲ್ಲ. ಒಂದು ವೇಳೆ ಅಂತಹ ಸಾಹಸಕ್ಕೆ ಕೈ ಹಾಕಿದ್ರು ಅದು ಮೂರ್ಖತನದ ಪರಮಾವಧಿ. ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳಬೇಕೊ ಅದನ್ನ ಮಾಡುತ್ತೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ತಿರುಗೇಟು ನೀಡಿದರು.

ಬೆಳಗಾವಿ: ರೆಬೆಲ್ ಶಾಸಕ‌ ರಮೇಶ್​ ಜಾರಕಿಹೊಳಿ ಕಾಂಗ್ರೆಸ್ ತೊರೆದ ಬಳಿಕವಷ್ಟೇ ಅವರ ಬಗ್ಗೆ ಮಾತನಾಡುತ್ತೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​​​ ಕುತೂಹಲದ ಹೇಳಿಕೆ ನೀಡಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡೋದಿದೆ. ಅವರು ಪಕ್ಷ ಬಿಟ್ಟು ಹೋದ ಮೇಲೆ ಅದನ್ನು ಹೊರ ಹಾಕುವೆ. ಅವರು ಬಿಜೆಪಿಗೆ ಹೋಗುವುದರ ಬಗ್ಗೆ ಗೊತ್ತಿಲ್ಲ. ಅವರ ವಿರುದ್ಧ ಹೈಕಮಾಂಡ್​​ಗೆ ದೂರು ಕೊಟ್ಟಿರುವುದು ಗೊತ್ತಿಲ್ಲ. ಅವರು ಮೊದಲು ಪಕ್ಷ ಬಿಟ್ಟು ಹೋಗಲಿ. ಆ ಮೇಲೆ ಅವರ ಬಗ್ಗೆ ಮಾತನಾಡುವುದಿದೆ ಎನ್ನುವ ಮೂಲಕ ಬಂಡಾಯ ಶಾಸಕ ರಮೇಶ್ ಬಗ್ಗೆ ಯಾರಿಗೂ ಗೊತ್ತಿಲ್ಲದ ವಿಚಾರವನ್ನು ಸ್ಫೋಟಿಸುವ ಸುಳಿವು ಬಿಟ್ಟುಕೊಟ್ರು. ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮಿ, ಆ ಸಂದರ್ಭ ಇನ್ನೂ ಬಂದಿಲ್ಲ. ಆದರೆ, ಕಡಲ ಮಂಥನವಾದಾಗ ಅಮೃತವೂ ಬರುತ್ತೆ ವಿಷಾವೂ ಬರುತ್ತೆ. ಎರಡನ್ನೂ ಸೇವಿಸಲು ತಯಾರಿರಬೇಕು ಎಂದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​

ಮುಂದುವರೆದು ಮಾತನಾಡಿದ ಶಾಸಕಿ ಲಕ್ಷ್ಮಿ, ಗೋಕಾಕ್​ಗೆ ಲಖನ್ ಜಾರಕಿಹೊಳಿ ಅವರನ್ನು ಉತ್ತರಾಧಿಕಾರಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಇಂತಹ ವಿಚಾರಗಳು ಅತೀ ಸೂಕ್ಷ್ಮ. ನಮ್ಮ ರಾಜ್ಯನಾಯಕರು ಮತ್ತು ಹೈಕಮಾಂಡ್ ನಾಯಕತ್ವ ನಿರ್ಧಾರ ಮಾಡುತ್ತೆ. ನಮ್ಮ ಅನಿಸಿಕೆ ಮೇಲೆ ಅವಲಂಬನೆ ಇರುವುದಿಲ್ಲ. ಎಲ್ಲರನ್ನು ಗಣನೆಗೆ ತೆಗೆದುಕೊಳ್ಳುತ್ತಾರೆ. ಸಾಧಕ‌-ಬಾಧಕಗಳ ಬಗ್ಗೆ ವಿಚಾರ ಮಾಡುತ್ತಾರೆ. ಅಷ್ಟು ಸುಲಭವಾಗಿ ಕಾಂಗ್ರೆಸ್ ಪಕ್ಷವನ್ನು ಯಾರೂ ರೈಡ್ ಮಾಡಲು ಆಗಲ್ಲ. ಒಂದು ವೇಳೆ ಅಂತಹ ಸಾಹಸಕ್ಕೆ ಕೈ ಹಾಕಿದ್ರು ಅದು ಮೂರ್ಖತನದ ಪರಮಾವಧಿ. ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳಬೇಕೊ ಅದನ್ನ ಮಾಡುತ್ತೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ತಿರುಗೇಟು ನೀಡಿದರು.

Intro:Body:



ಬೆಳಗಾವಿ:

ರೆಬಲ್ ಶಾಸಕ‌ ರಮೇಶ ಜಾರಕಿಹೊಳಿ ಕಾಂಗ್ರೆಸ್ ತೊರೆದ ಬಳಿಕವಷ್ಟೇ ಅವರ ಬಗ್ಗೆ ಮಾತನಾಡುತ್ತೇನೆ. ಮಾತನಾಡುವುದೂ ಇದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅಚ್ಛರಿಯ ಸುಳಿವು ನೀಡಿದ್ದಾರೆ.

ಬೆಳಗಾವಿಯಲ್ಲಿ ಮತದಾನ ಬಳಿಕ ಮಾತನಾಡಿದ ಅವರು ರಮೇಶ್ ಜಾರಕಿಹೊಳಿ ಬಗ್ಗೆ ವಿಚಾರ ಶೀಘ್ರವೇ ಹೊರ ಹಾಕುವೆ. ಬಿಜೆಪಿಗೆ ರಮೇಶ್ ಜಾರಕಿಹೊಳಿ ಹೋಗ್ತಾರೆ ಎಂಬುವುದು ಗೊತ್ತಿಲ್ಲ.  ರಮೇಶ್ ವಿರುದ್ಧ ಹೈಕಮಾಂಡ್ ಗೆ ದೂರು ಕೊಟ್ಟಿರುವುದು ಗೊತ್ತಿಲ್ಲ. ಅವರು ಮೊದಲು ಪಕ್ಷ ಬಿಟ್ಟು ಹೋಗಲಿ. ಆ ಮೇಲೆ ಅವರ ಬಗ್ಗೆ ನಂತರ ನಮ್ಮ ಪಕ್ಷದ ಬಗ್ಗೆ ಮಾತನಾಡುವುದಿದೆ. ರಮೇಶ್ ಜಾರಕಿಹೊಳಿ‌ಗೆ ಸಂಬಂಧಿಸಿದ ಹಲವು ವಿಚಾರ ಹೊರ ಹಾಕುವ ಸುಳಿವನ್ನು  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದರು.

ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆಯೇ ಎಂಬ ಪ್ರಶ್ನೆಗೆ 

ಆ ಸಂದರ್ಭ ಇನ್ನೂ ಬಂದಿಲ್ಲ.

ಆದರೆ ಕಡಲ ಮಂಥನ ಆದಾಗ ಅಮೃತನೂ ಬರುತ್ತೆ ವಿಷಾವೂ ಬರುತ್ತೆ ಎರಡನ್ನೂ ಸೇವಿಸಲು ತಯಾರಿರಬೇಕು ಎಂದರು.

ಗೋಕಾಕ್ ಗೆ ಲಖನ್ ಜಾರಕಿಹೊಳಿ ಉತ್ತರಾಧಿಕಾರಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ.ಇಂತಹ ವಿಚಾರಗಳು ಅತೀ ಸೂಕ್ಷ್ಮ.

ನಮ್ಮ ರಾಜ್ಯನಾಯಕರು ಮತ್ತು ಹೈಕಮಾಂಡ್ ನಾಯಕತ್ವ ನಿರ್ಧಾರ ಮಾಡುತ್ತೆ. ನಮ್ಮ ಅನಸಿಕೆ ಮೇಲೆ ಅವಲಂಬನೆ ಇರುವುದಿಲ್ಲ.

ಎಲ್ಲರನ್ನು ಗನನೆಗೆ ತೆಗೆದುಕೊಳ್ಳುತ್ತಾರೆ.

ಸಾಧಕ‌ ಬಾದಕಗಳ ಬಗ್ಗೆ ವಿಚಾರ ಮಾಡುತ್ತಾರೆ.

ಅಷ್ಟು ಸುಲಭವಾಗಿ ಕಾಂಗ್ರೆಸ್ ಪಕ್ಷವನ್ನು ಯಾರು ರೈಡ್ ಮಾಡಲು ಆಗಲ್ಲ.

ಕಾಂಗ್ರೆಸ್ ಪಕ್ಷ ಸುಲಭವಾಗಿ ರೈಡ್ ಮಾಡ್ತೇನಿ‌ ಅಂದ್ರೆ ಅದು ಮೂರ್ಖತನದ ಪರಮಾವಧಿ.

ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳಬೇಕೊ ಅದನ್ನ ಮಾಡುತ್ತೆ.

ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ತಿರುಗೇಟು ನೀಡಿದ ಅವರು ಲಖನ್ ಜಾರಕಿಹೊಳಿ ಗೋಕಾಕ್ ನಲ್ಲಿ ಉತ್ತರಾಧಿಕಾರಿ ಎಂದು ಘೋಷಿಸಿದ್ದು ಆತುರದ ನಿರ್ಧಾರ ಎಂದರು.


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.