ETV Bharat / state

ಬಿಜೆಪಿಯಿಂದ ಗೆದ್ದವರ ತಂಟೆಗೆ ಬಂದ್ರೆ ಹುಷಾರ್​: ಕಾಂಗ್ರೆಸ್​ ವಿರುದ್ಧ ಶಾಸಕ ರಾಜೀವ್ ಗುಡುಗು

ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕ ಸ್ಥಾನಗಳನ್ನು ಪಡೆದಿದ್ದು, ಕಾಂಗ್ರೆಸ್​ ಬಿಜೆಪಿ ಅಭ್ಯರ್ಥಿಗಳನ್ನು ತನ್ನತ್ತ ಸೆಳೆಯಲು ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕುಡಚಿ ಶಾಸಕ ಪಿ.ರಾಜೀವ್ ಕಾಂಗ್ರೆಸ್​ ವಿರುದ್ಧ ಗುಡುಗಿದ್ದಾರೆ.

author img

By

Published : Jan 2, 2022, 4:04 PM IST

Updated : Jan 2, 2022, 5:24 PM IST

MLA Rajeev outrage against Congress
ಕಾಂಗ್ರೆಸ್​ ವಿರುದ್ಧ ಶಾಸಕ ರಾಜೀವ್​ ಆಕ್ರೋಶ

ಬೆಳಗಾವಿ: ಚುನಾವಣೆಯಲ್ಲಿ ಬಿಜೆಪಿಯ ಬಿ ಫಾರ್ಮ್​​​ ಪಡೆದು ಚುನಾಯಿತರಾದ ಅಭ್ಯರ್ಥಿಗಳ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ. ಅವರ ಮನೆತನವನ್ನೇ ಒಳಗೆ ಹಾಕಿಸುತ್ತೇನೆ ಎಂದು ಕಾಂಗ್ರೆಸ್​ಗೆ ಕುಡಚಿ ಶಾಸಕ ಪಿ.ರಾಜೀವ್ ಎಚ್ಚರಿಕೆ ನೀಡಿದರು.

ಕಾಂಗ್ರೆಸ್​ ವಿರುದ್ಧ ಗುಡುಗಿದ ಶಾಸಕ ರಾಜೀವ್​

ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಕೋಡ ಗ್ರಾಮದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಬಿ ಫಾರ್ಮ್ ಪಡೆದುಕೊಂಡು ಚುನಾಯಿತರಾಗಿರುವ ಅಭ್ಯರ್ಥಿಗಳ ತಂಟೆಗೆ ಯಾರಾದರೂ ಬಂದ್ರೆ ಹುಷಾರ್​. ನಮ್ಮ ಪಕ್ಷದ ಸದಸ್ಯರನ್ನು ಸೆಳೆಯುವವರ ಮನೆತನವನ್ನೇ ಒಳಗೆ ಹಾಕಿಸಲಿಲ್ಲ ಅಂದ್ರೆ ನಾನು ಎಂಎಲ್ಎನೇ ಅಲ್ಲ ಎಂದು ಓಪನ್ ಚಾಲೆಂಜ್ ಹಾಕಿದರು.

ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಪುರಸಭೆ ಚುನಾವಣೆಯಲ್ಲಿ 13 ಸೀಟುಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತ ಸಾಧಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಆದರೆ ಕೇವಲ 4 ಸ್ಥಾನಗಳನ್ನು ಪಡೆದುಕೊಂಡಿರುವ ಕಾಂಗ್ರೆಸ್ 6 ಜನ ಪಕ್ಷೇತರರನ್ನು ಸೇರಿಸಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನು ತನ್ನತ್ತ ಸೆಳೆಯುವ ತಂತ್ರಗಾರಿಕೆ ಆರಂಭಿಸಿದೆ ಎಂದು ಅವರು ಆರೋಪಿಸಿದರು.

ಬೆಳಗಾವಿ: ಚುನಾವಣೆಯಲ್ಲಿ ಬಿಜೆಪಿಯ ಬಿ ಫಾರ್ಮ್​​​ ಪಡೆದು ಚುನಾಯಿತರಾದ ಅಭ್ಯರ್ಥಿಗಳ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ. ಅವರ ಮನೆತನವನ್ನೇ ಒಳಗೆ ಹಾಕಿಸುತ್ತೇನೆ ಎಂದು ಕಾಂಗ್ರೆಸ್​ಗೆ ಕುಡಚಿ ಶಾಸಕ ಪಿ.ರಾಜೀವ್ ಎಚ್ಚರಿಕೆ ನೀಡಿದರು.

ಕಾಂಗ್ರೆಸ್​ ವಿರುದ್ಧ ಗುಡುಗಿದ ಶಾಸಕ ರಾಜೀವ್​

ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಕೋಡ ಗ್ರಾಮದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಬಿ ಫಾರ್ಮ್ ಪಡೆದುಕೊಂಡು ಚುನಾಯಿತರಾಗಿರುವ ಅಭ್ಯರ್ಥಿಗಳ ತಂಟೆಗೆ ಯಾರಾದರೂ ಬಂದ್ರೆ ಹುಷಾರ್​. ನಮ್ಮ ಪಕ್ಷದ ಸದಸ್ಯರನ್ನು ಸೆಳೆಯುವವರ ಮನೆತನವನ್ನೇ ಒಳಗೆ ಹಾಕಿಸಲಿಲ್ಲ ಅಂದ್ರೆ ನಾನು ಎಂಎಲ್ಎನೇ ಅಲ್ಲ ಎಂದು ಓಪನ್ ಚಾಲೆಂಜ್ ಹಾಕಿದರು.

ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಪುರಸಭೆ ಚುನಾವಣೆಯಲ್ಲಿ 13 ಸೀಟುಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತ ಸಾಧಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಆದರೆ ಕೇವಲ 4 ಸ್ಥಾನಗಳನ್ನು ಪಡೆದುಕೊಂಡಿರುವ ಕಾಂಗ್ರೆಸ್ 6 ಜನ ಪಕ್ಷೇತರರನ್ನು ಸೇರಿಸಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನು ತನ್ನತ್ತ ಸೆಳೆಯುವ ತಂತ್ರಗಾರಿಕೆ ಆರಂಭಿಸಿದೆ ಎಂದು ಅವರು ಆರೋಪಿಸಿದರು.

Last Updated : Jan 2, 2022, 5:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.