ETV Bharat / state

ಕೃಷ್ಣಾ ನದಿ ದಡದ ಗ್ರಾಮ, ಶಾಲೆಗಳಲ್ಲಿ ಮುಂಜಾಗೃತ ಕ್ರಮಕ್ಕೆ ಶಾಸಕರ ಸೂಚನೆ

author img

By

Published : Aug 3, 2019, 9:10 AM IST

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿನ ಕೃಷ್ಣಾ ನದಿ ದಡದ ಗ್ರಾಮ, ಶಾಲೆಗಳಿಗೆ ಭೇಟಿ ನೀಡಿ, ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ಪಡೆದ ಶಾಸಕ ಗಣೇಶ ಹುಕ್ಕೇರಿ. ಸೂಕ್ತ ಮುಂಜಾಗೃತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ.

ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಶಾಸಕ ಗಣೇಶ ಹುಕ್ಕೇರಿ

ಚಿಕ್ಕೋಡಿ: ಶಾಸಕ ಗಣೇಶ ಹುಕ್ಕೇರಿ ಇಲ್ಲಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.

ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಶಾಸಕ ಗಣೇಶ ಹುಕ್ಕೇರಿ

ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸತಾರಾ ಜಿಲ್ಲೆಯ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಲಾಗಿದೆ. ಇದರಿಂದ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು. ನದಿಯ ಸುತ್ತಲಿನ ಗ್ರಾಮಸ್ಥರು ಪರದಾಡುವಂತಾಗಿದೆ.

ಚಿಕ್ಕೋಡಿ ತಾಲೂಕಿನ ಇಂಗಳಿ, ಯಡೂರ, ಯಡುರವಾಡಿ ಮತ್ತು ಕಲ್ಲೋಳ ಗ್ರಾಮಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಯಾವುದೇ ಸಮಸ್ಯೆಗಳು ತಲೆದೂರದಂತೆ ಸೂಕ್ತ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು. ನದಿ ದಡದ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಕರಿಗೆ ಹೇಳಿದರು.

ಚಿಕ್ಕೋಡಿ ಎಸಿ ರವೀಂದ್ರ ಹಾಗೂ ತಹಸೀಲ್ದಾರ ಸಂತೋಷ ಬಿರಾದರ್ ಶಾಸಕರಿಗೆ ಪ್ರವಾಹ ಪ್ರದೇಶಗಳ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಚಿಕ್ಕೋಡಿ: ಶಾಸಕ ಗಣೇಶ ಹುಕ್ಕೇರಿ ಇಲ್ಲಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.

ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಶಾಸಕ ಗಣೇಶ ಹುಕ್ಕೇರಿ

ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸತಾರಾ ಜಿಲ್ಲೆಯ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಲಾಗಿದೆ. ಇದರಿಂದ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು. ನದಿಯ ಸುತ್ತಲಿನ ಗ್ರಾಮಸ್ಥರು ಪರದಾಡುವಂತಾಗಿದೆ.

ಚಿಕ್ಕೋಡಿ ತಾಲೂಕಿನ ಇಂಗಳಿ, ಯಡೂರ, ಯಡುರವಾಡಿ ಮತ್ತು ಕಲ್ಲೋಳ ಗ್ರಾಮಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಯಾವುದೇ ಸಮಸ್ಯೆಗಳು ತಲೆದೂರದಂತೆ ಸೂಕ್ತ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು. ನದಿ ದಡದ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಕರಿಗೆ ಹೇಳಿದರು.

ಚಿಕ್ಕೋಡಿ ಎಸಿ ರವೀಂದ್ರ ಹಾಗೂ ತಹಸೀಲ್ದಾರ ಸಂತೋಷ ಬಿರಾದರ್ ಶಾಸಕರಿಗೆ ಪ್ರವಾಹ ಪ್ರದೇಶಗಳ ಸಂಪೂರ್ಣ ಮಾಹಿತಿಯನ್ನು ನೀಡಿದರು.

Intro:ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಶಾಸಕ ಗಣೇಶ ಹುಕ್ಕೇರಿBody:

ಚಿಕ್ಕೋಡಿ :

ಚಿಕ್ಕೋಡಿ - ಸದಲಗಾ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕ ಗಣೇಶ ಹುಕ್ಕೇರಿ

ಮಹಾ ಘಟ್ಟಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಮಹಾ ಸಾತಾರ ಜಿಲ್ಲೆಯ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಕೃಷ್ಣಾ ನದಿಯ‌ ಮಟ್ಟ ಏರಿಕೆಯಾಗುತ್ತಿದ್ದು ಪ್ರವಾಹ ಪರಿಸರ ವೀಕ್ಷಣೆ ಮಾಡಿ ಸಾಂತ್ವಾನ ಹೇಳಿದ ಶಾಸಕ‌ ಗಣೇಶ ಹುಕ್ಕೇರಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ , ಯಡೂರ, ಯಡುರವಾಡಿ ಮತ್ತು ಕಲ್ಲೋಳ ಗ್ರಾಮಗಳ ಕೃಷ್ಣಾ ನದಿಯ ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡಿದ ಗಣೇಶ ಹುಕ್ಕೇರಿ,
ಕೃಷ್ಣಾ ನದಿಗೆ ಹೊಂದಿಕೊಂಡ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸ್ಥಿತಿ ಗತಿ ವೀಕ್ಷಣೆ ಮಾಡಿ ಜಾಗೃತೆಯಿಂದ ಇರಲು ಶಾಲಾ ಶಿಕ್ಷಕರಿಗೆ ಸೂಚನೆ ನೀಡಿದರು. ಶಾಸಕರಿಗೆ ಚಿಕ್ಕೋಡಿ ಎಸಿ ರವೀಂದ್ರ ಹಾಗೂ ತಹಶೀಲ್ದಾರ ಸಂತೋಷ ಬಿರಾದರ ಸಾಥ ನೀಡಿದರು.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.