ETV Bharat / state

ಕರ್ನಾಟಕ-ಮಹಾರಾಷ್ಟ್ರ ತಾಯಿ-ಚಿಕ್ಕಮ್ಮ ಇದ್ದಂತೆ: ಸಂಸದ ಅಮೋಲ್ ಕೋಲ್ಹೆ - ಅಮೋಲ್ ಕೋಲ್ಹೆ

ಕರ್ನಾಟಕ-ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ರಾಷ್ಟ್ರದ ಪ್ರತೀಕ. ಮಾತೃಭಾಷೆಯ ಅಭಿಮಾನ ಇರಬೇಕು. ಅದು ಅತಿರೇಕಕ್ಕೆ ಹೋಗಬಾರದು- ಮಹಾರಾಷ್ಟ್ರ ಸಂಸದ ಡಾ.ಅಮೋಲ್ ಕೋಲ್ಹೆ.

'Swaraj Sankalpa' convention
ಸ್ವರಾಜ ಸಂಕಲ್ಪ ಸಮಾವೇಶ ಉದ್ಘಾಟಿಸಿದ ಸಂಸದ ಅಮೋಲ್ ಕೋಲ್ಹೆ
author img

By

Published : Jan 15, 2023, 12:37 PM IST

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ತಾಯಿ-ಚಿಕ್ಕಮ್ಮ ಇದ್ದಂತೆ. ಈ ಪ್ರದೇಶದಲ್ಲಿರುವ ಪ್ರತಿಯೊಬ್ಬರಿಗೆ ತಾಯಿ ಪ್ರೀತಿ ಇದ್ದಷ್ಟು ಚಿಕ್ಕಮ್ಮನ ಪ್ರೀತಿಯೂ ಸಿಗುತ್ತದೆ ಎಂದು ನಟ, ಮಹಾರಾಷ್ಟ್ರ ಸಂಸದ ಡಾ. ಅಮೋಲ್ ಕೋಲ್ಹೆ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಬಹುಜನ ಸಮಾಜ, ಕಡೋಲಿಯ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಹಾಗೂ ಕಡೋಲಿ ಗ್ರಾಮ ಪಂಚಾಯತ್‌ ವತಿಯಿಂದ ಹಮ್ಮಿಕೊಂಡಿದ್ದ 'ಸ್ವರಾಜ ಸಂಕಲ್ಪ' ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರೀತಿ ಹಾಗೂ ಶಿವ ಭಕ್ತಿಗೆ ಗಡಿ ಇರುವುದಿಲ್ಲ. ಇಂಥ ಒಂದು ಬಾಂಧವ್ಯ, ಅನ್ಯೋನ್ಯತೆಯ ಪ್ರದೇಶ ಇದು. ಇವು ಗಡಿ ಮೀರಿ ವ್ಯಾಪಿಸಿಕೊಂಡಿವೆ. ಈ ಎರಡೂ ರಾಜ್ಯಗಳು ರಾಷ್ಟ್ರದ ಪ್ರತೀಕ. ಮಾತೃಭಾಷೆಯ ಅಭಿಮಾನ ಇರಬೇಕು. ಅದು ಅತಿರೇಕಕ್ಕೆ ಹೋಗಬಾರದು. ಎಲ್ಲರೂ ಪ್ರೀತಿ ಸಹಬಾಳ್ವೆಯಿಂದ ಭಾಷೆಯನ್ನು ಗೌರವಿಸಬೇಕು ಮತ್ತು ಪ್ರೀತಿಸಬೇಕು ಎಂದು ಸಲಹೆ ನೀಡಿದರು.

ಅನ್ಯ ಭಾಷೆಯ ದ್ವೇಷ ಬೇಡ: ಮಾತೃಭಾಷೆಯ ಮೇಲೆ ಪ್ರತಿಯೊಬ್ಬರಿಗೆ ಅಭಿಮಾನ ಹಾಗೂ ಪ್ರೀತಿ ಇರಬೇಕು. ಆದರೆ ಅನ್ಯ ಭಾಷೆಯನ್ನು ದ್ವೇಷಿಸುವ ಮನಸ್ಥಿತಿ ಇರಬಾರದು. ಜಾತಿ ಮತ್ತು ಧರ್ಮ ಎರಡೂ ಕಲ್ಲುಗಳಿದ್ದಂತೆ. ಈ ಕಲ್ಲಿನಿಂದ ಗೋಡೆ ಕಟ್ಟಿದರೆ ಪರಸ್ಪರ ಮನುಷ್ಯ ಪ್ರತ್ಯೇಕವಾಗುತ್ತಾನೆ. ಇದೇ ಕಲ್ಲಿನಿಂದ ಸೇತುವೆ ನಿರ್ಮಿಸಿದರೆ ಪರಸ್ಪರರು ಸಂಪರ್ಕ ಸಾಧಿಸಲು ಸಾಧ್ಯ. ಈ ಕಲ್ಲುಗಳನ್ನು ಯುವಕರು ಕೈ ಯಲ್ಲಿ ಕೊಟ್ಟು ಬೇರೆಯವರು ತಲೆ ಒಡೆಯಲು ಹೇಳಿ ದ್ವೇಷ ಭಾವನೆ ಹುಟ್ಟಿಸಿ ಪ್ರಚೋದಿಸುವ ಮನಸ್ಥಿತಿಯವರೂ ಇದ್ದಾರೆ. ಆದರೆ ಈ ಕಲ್ಲುಗಳನ್ನು ಮೂರ್ತಿಯಾಗಿ ಪರಿವರ್ತಿಸುವ ಮನಸ್ಥಿತಿ ನಮ್ಮದಾಗಬೇಕೆಂದು ಹೇಳಿದರು.

ರಾಷ್ಟ ಮೊದಲು ಎಂಬ ಮನಸ್ಥಿತಿ ನಮ್ಮದಾಗಲಿ: ನಾವೆಲ್ಲರೂ ದೇಶ ಮೊದಲು ಎಂಬ ಭಾವನೆಯಿಂದ ಇದ್ದೇವೆ. ಭಾರತೀಯ ಕ್ರಿಕೆಟ್‌ ತಂಡದಲ್ಲಿ ರಾಹುಲ್‌ ದ್ರಾವಿಡ್‌, ಸಚಿನ್‌ ತೆಂಡೂಲ್ಕರ್‌, ವಿ.ವಿ.ಎಸ್.‌ಲಕ್ಷ್ಮಣ್‌, ಮಹಮದ್‌ ಶಮಿ ಹೀಗೆ ಅನೇಕ ಕ್ರೀಡಾಪಟುಗಳು ಆಡುವಾಗ ಅವರನ್ನು ನಾವು ಯಾವಾಗಲೂ ಒಂದು ರಾಜ್ಯ, ಜಾತಿಗೆ ಸೀಮಿತಗೊಳಿಸುವುದಿಲ್ಲ. ಅವರ ಆಟವನ್ನು ಮೆಚ್ಚಿ, ಪ್ರತಿಯೊಬ್ಬ ಭಾರತೀಯರು ಹುರಿದುಂಬಿಸುತ್ತಾರೆ. ನಾವೆಲ್ಲರೂ ಭಾರತೀಯ ಎಂಬ ಭಾವನೆ ಇರುತ್ತದೆ. ಜಾತಿ, ಧರ್ಮ,ಭಾಷೆ ಹೆಸರಿನಲ್ಲಿ ಪ್ರತೇಕವಾಗುವ ಬದಲು ರಾಷ್ಟ ಮೊದಲು ಎಂಬ ಮನಸ್ಥಿತಿ ನಮ್ಮದಾಗಬೇಕು ಎಂದು ಕರೆ ಕೊಟ್ಟರು.

ಶಿವಾಜಿ ಅಜರಾಮರ: ಛತ್ರಪತಿ ಶಿವಾಜಿ ಮಹಾರಾಜರನ್ನು 350 ವರ್ಷಗಳ ನಂತರವೂ ನಾವು ನೆನಪಿಸಿಕೊಳ್ಳುತ್ತೇವೆ. ಇನ್ನೂ ಅವರು ಜೀವಂತವಾಗಿ ಉಳಿದುಕೊಂಡಿದ್ದಾರೆ. ಜಗತ್ತಿನ ಯಾವ ಪ್ರದೇಶದಲ್ಲಿಯೂ ಶಿವಾಜಿ ಮಹಾರಾಜರಂತೆ ಪರಾಕ್ರಮಿ, ಧೈರ್ಯ ಶಾಲಿ ರಾಜನಿಲ್ಲ. ರಾಜನಾಗಿ ಜನಸಿಲ್ಲ. ಅವರು ಯಾರ ಬೆನ್ನಿಗೆ ಚೂರಿಹಾಕಿ ಸಾಮ್ರಾಜ್ಯ ಕಟ್ಟಲಿಲ್ಲ. ರಾಜನಾಗಿ ಮೆರೆದು ಹಿಂದವಿ ಸ್ವರಾಜ್ಯ ಸಂಕಲ್ಪ ಮಾಡಿದ ಮಹರಾಜ ನಮ್ಮ ಛತ್ರಪತಿ ಶಿವಾಜಿ ಮಹಾರಾಜರು. ದೇವರು ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ಶಿವಾಜಿ ಮಹಾರಾಜರು ಮಾನವೀಯತೆಯ ಕಾರ್ಯದಿಂದ ಅವರು ನಮ್ಮಲ್ಲಿ ದೇವರಾಗಿ ಉಳಿದುಕೊಂಡಿದ್ದಾರೆ. ಜಾತಿ, ಧರ್ಮ, ಭಾಷೆಗಿಂತ ಅವರ ಕಾರ್ಯದಿಂದ ಅಜರಾಮರಾಗಿದ್ದಾರೆ ಎಂದು ಹೇಳಿದರು.

ಮನುಷ್ಯನಿಗಾಗಿ ಧರ್ಮ ಇಲ್ಲ. ಧರ್ಮಕ್ಕಾಗಿ ಮನುಷ್ಯ ಇದ್ದಾನೆ. ಮಾನವೀಯತೆಯ ಆಧಾರದ ಮೇಲೆ ಬದುಕಬೇಕು. ರಾಷ್ಟ್ರ ಜೀವಂತವಾಗಿದ್ದರೆ ನಾವೆಲ್ಲರೂ ಇರಲು ಸಾಧ್ಯ. ಮಣ್ಣು, ಮಾತೆಯನ್ನು ಪ್ರೀತಿಸಬೇಕು. ಪ್ರಚೋದನೆ ಮಾಡುವುದುಕ್ಕಿಂತ ಬಾಂಧವ್ಯ, ಸೌಹಾರ್ದತೆ ಬೆಳೆಸಬೇಕು ಎಂದರು.

ಕಸಾಬಾ ನೂಲ ರಾಮನಾಥ ಗಿರಿ ಸಮಾಧಿ ಮಠದ ಶ್ರೀ ಭಗವಾನ್‌ ಗಿರಿ ಮಹರಾಜ ಮಾತನಾಡಿ, ತಾಯಿ ಜೀಜಾಮಾತಾ ಆಶೀರ್ವಾದದಿಂದ ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯ ಸ್ಥಾಪಿಸಿದರು. ಶಿವಾಜಿ ಮಹಾರಾಜರ ಧೈರ್ಯ, ಸ್ಥೈರ್ಯ ನಾವೆಲ್ಲರೂ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ನಾವು ಧರ್ಮ ಸಹಿಷ್ಣುಗಳು: ದುರದುಂಡೀಶ್ವರ ವಿರಕ್ತಮಠದ ಶ್ರೀ ಗುರುಬಸವಲಿಂ ಸ್ವಾಮೀಜಿ ಮಾತನಾಡಿ, ಭಾರತದಲ್ಲಿ ನಾವೆಲ್ಲ ಜನಿಸಿದ್ದೇ ಸುದೈವ. ಅನೇಕ ಧರ್ಮ, ಜಾತಿಗಳಿದ್ದರೂ ಅನ್ಯೋನ್ಯತೆಯಿಂದ ಬದುಕುತ್ತಿರುವುದು ಹೆಮ್ಮೆಯ ವಿಷಯ. ಭಾರತೀಯರಾದ ನಾವು ಧರ್ಮ ಸಹಿಷ್ಣುಗಳು. ಬದುಕಿನಲ್ಲಿ ನಾವೇನೂ ಗಳಿಸಿದರೂ ನಮ್ಮೊಂದಿಗೆ ಇರುವುದು ಧರ್ಮ ಮಾತ್ರ. ಈ ಭಾಗದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿರುವ ಶಾಸಕ ಸತೀಶ್‌ ಜಾರಕಿಹೊಳಿ ಹಾಗೂ ತಂದೆಯಂತೆ ಸಾಮಾಜಿಕ ಕಾರ್ಯದಲ್ಲಿ ತೊಡಗಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿ ಎಂದು ಕರೆ ನೀಡಿದರು.

ಇದನ್ನೂ ಓದಿ: ಗಡಿ ವಿಚಾರ: 'ರಾಜಕಾರಣಿಗಳು ದೊಡ್ಡ ಮನಸ್ಸು ಮಾಡಿ ವ್ಯವಸ್ಥೆ ಸರಿಪಡಿಸಬೇಕು'- ಶಿವಣ್ಣ

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ತಾಯಿ-ಚಿಕ್ಕಮ್ಮ ಇದ್ದಂತೆ. ಈ ಪ್ರದೇಶದಲ್ಲಿರುವ ಪ್ರತಿಯೊಬ್ಬರಿಗೆ ತಾಯಿ ಪ್ರೀತಿ ಇದ್ದಷ್ಟು ಚಿಕ್ಕಮ್ಮನ ಪ್ರೀತಿಯೂ ಸಿಗುತ್ತದೆ ಎಂದು ನಟ, ಮಹಾರಾಷ್ಟ್ರ ಸಂಸದ ಡಾ. ಅಮೋಲ್ ಕೋಲ್ಹೆ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಬಹುಜನ ಸಮಾಜ, ಕಡೋಲಿಯ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಹಾಗೂ ಕಡೋಲಿ ಗ್ರಾಮ ಪಂಚಾಯತ್‌ ವತಿಯಿಂದ ಹಮ್ಮಿಕೊಂಡಿದ್ದ 'ಸ್ವರಾಜ ಸಂಕಲ್ಪ' ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರೀತಿ ಹಾಗೂ ಶಿವ ಭಕ್ತಿಗೆ ಗಡಿ ಇರುವುದಿಲ್ಲ. ಇಂಥ ಒಂದು ಬಾಂಧವ್ಯ, ಅನ್ಯೋನ್ಯತೆಯ ಪ್ರದೇಶ ಇದು. ಇವು ಗಡಿ ಮೀರಿ ವ್ಯಾಪಿಸಿಕೊಂಡಿವೆ. ಈ ಎರಡೂ ರಾಜ್ಯಗಳು ರಾಷ್ಟ್ರದ ಪ್ರತೀಕ. ಮಾತೃಭಾಷೆಯ ಅಭಿಮಾನ ಇರಬೇಕು. ಅದು ಅತಿರೇಕಕ್ಕೆ ಹೋಗಬಾರದು. ಎಲ್ಲರೂ ಪ್ರೀತಿ ಸಹಬಾಳ್ವೆಯಿಂದ ಭಾಷೆಯನ್ನು ಗೌರವಿಸಬೇಕು ಮತ್ತು ಪ್ರೀತಿಸಬೇಕು ಎಂದು ಸಲಹೆ ನೀಡಿದರು.

ಅನ್ಯ ಭಾಷೆಯ ದ್ವೇಷ ಬೇಡ: ಮಾತೃಭಾಷೆಯ ಮೇಲೆ ಪ್ರತಿಯೊಬ್ಬರಿಗೆ ಅಭಿಮಾನ ಹಾಗೂ ಪ್ರೀತಿ ಇರಬೇಕು. ಆದರೆ ಅನ್ಯ ಭಾಷೆಯನ್ನು ದ್ವೇಷಿಸುವ ಮನಸ್ಥಿತಿ ಇರಬಾರದು. ಜಾತಿ ಮತ್ತು ಧರ್ಮ ಎರಡೂ ಕಲ್ಲುಗಳಿದ್ದಂತೆ. ಈ ಕಲ್ಲಿನಿಂದ ಗೋಡೆ ಕಟ್ಟಿದರೆ ಪರಸ್ಪರ ಮನುಷ್ಯ ಪ್ರತ್ಯೇಕವಾಗುತ್ತಾನೆ. ಇದೇ ಕಲ್ಲಿನಿಂದ ಸೇತುವೆ ನಿರ್ಮಿಸಿದರೆ ಪರಸ್ಪರರು ಸಂಪರ್ಕ ಸಾಧಿಸಲು ಸಾಧ್ಯ. ಈ ಕಲ್ಲುಗಳನ್ನು ಯುವಕರು ಕೈ ಯಲ್ಲಿ ಕೊಟ್ಟು ಬೇರೆಯವರು ತಲೆ ಒಡೆಯಲು ಹೇಳಿ ದ್ವೇಷ ಭಾವನೆ ಹುಟ್ಟಿಸಿ ಪ್ರಚೋದಿಸುವ ಮನಸ್ಥಿತಿಯವರೂ ಇದ್ದಾರೆ. ಆದರೆ ಈ ಕಲ್ಲುಗಳನ್ನು ಮೂರ್ತಿಯಾಗಿ ಪರಿವರ್ತಿಸುವ ಮನಸ್ಥಿತಿ ನಮ್ಮದಾಗಬೇಕೆಂದು ಹೇಳಿದರು.

ರಾಷ್ಟ ಮೊದಲು ಎಂಬ ಮನಸ್ಥಿತಿ ನಮ್ಮದಾಗಲಿ: ನಾವೆಲ್ಲರೂ ದೇಶ ಮೊದಲು ಎಂಬ ಭಾವನೆಯಿಂದ ಇದ್ದೇವೆ. ಭಾರತೀಯ ಕ್ರಿಕೆಟ್‌ ತಂಡದಲ್ಲಿ ರಾಹುಲ್‌ ದ್ರಾವಿಡ್‌, ಸಚಿನ್‌ ತೆಂಡೂಲ್ಕರ್‌, ವಿ.ವಿ.ಎಸ್.‌ಲಕ್ಷ್ಮಣ್‌, ಮಹಮದ್‌ ಶಮಿ ಹೀಗೆ ಅನೇಕ ಕ್ರೀಡಾಪಟುಗಳು ಆಡುವಾಗ ಅವರನ್ನು ನಾವು ಯಾವಾಗಲೂ ಒಂದು ರಾಜ್ಯ, ಜಾತಿಗೆ ಸೀಮಿತಗೊಳಿಸುವುದಿಲ್ಲ. ಅವರ ಆಟವನ್ನು ಮೆಚ್ಚಿ, ಪ್ರತಿಯೊಬ್ಬ ಭಾರತೀಯರು ಹುರಿದುಂಬಿಸುತ್ತಾರೆ. ನಾವೆಲ್ಲರೂ ಭಾರತೀಯ ಎಂಬ ಭಾವನೆ ಇರುತ್ತದೆ. ಜಾತಿ, ಧರ್ಮ,ಭಾಷೆ ಹೆಸರಿನಲ್ಲಿ ಪ್ರತೇಕವಾಗುವ ಬದಲು ರಾಷ್ಟ ಮೊದಲು ಎಂಬ ಮನಸ್ಥಿತಿ ನಮ್ಮದಾಗಬೇಕು ಎಂದು ಕರೆ ಕೊಟ್ಟರು.

ಶಿವಾಜಿ ಅಜರಾಮರ: ಛತ್ರಪತಿ ಶಿವಾಜಿ ಮಹಾರಾಜರನ್ನು 350 ವರ್ಷಗಳ ನಂತರವೂ ನಾವು ನೆನಪಿಸಿಕೊಳ್ಳುತ್ತೇವೆ. ಇನ್ನೂ ಅವರು ಜೀವಂತವಾಗಿ ಉಳಿದುಕೊಂಡಿದ್ದಾರೆ. ಜಗತ್ತಿನ ಯಾವ ಪ್ರದೇಶದಲ್ಲಿಯೂ ಶಿವಾಜಿ ಮಹಾರಾಜರಂತೆ ಪರಾಕ್ರಮಿ, ಧೈರ್ಯ ಶಾಲಿ ರಾಜನಿಲ್ಲ. ರಾಜನಾಗಿ ಜನಸಿಲ್ಲ. ಅವರು ಯಾರ ಬೆನ್ನಿಗೆ ಚೂರಿಹಾಕಿ ಸಾಮ್ರಾಜ್ಯ ಕಟ್ಟಲಿಲ್ಲ. ರಾಜನಾಗಿ ಮೆರೆದು ಹಿಂದವಿ ಸ್ವರಾಜ್ಯ ಸಂಕಲ್ಪ ಮಾಡಿದ ಮಹರಾಜ ನಮ್ಮ ಛತ್ರಪತಿ ಶಿವಾಜಿ ಮಹಾರಾಜರು. ದೇವರು ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ಶಿವಾಜಿ ಮಹಾರಾಜರು ಮಾನವೀಯತೆಯ ಕಾರ್ಯದಿಂದ ಅವರು ನಮ್ಮಲ್ಲಿ ದೇವರಾಗಿ ಉಳಿದುಕೊಂಡಿದ್ದಾರೆ. ಜಾತಿ, ಧರ್ಮ, ಭಾಷೆಗಿಂತ ಅವರ ಕಾರ್ಯದಿಂದ ಅಜರಾಮರಾಗಿದ್ದಾರೆ ಎಂದು ಹೇಳಿದರು.

ಮನುಷ್ಯನಿಗಾಗಿ ಧರ್ಮ ಇಲ್ಲ. ಧರ್ಮಕ್ಕಾಗಿ ಮನುಷ್ಯ ಇದ್ದಾನೆ. ಮಾನವೀಯತೆಯ ಆಧಾರದ ಮೇಲೆ ಬದುಕಬೇಕು. ರಾಷ್ಟ್ರ ಜೀವಂತವಾಗಿದ್ದರೆ ನಾವೆಲ್ಲರೂ ಇರಲು ಸಾಧ್ಯ. ಮಣ್ಣು, ಮಾತೆಯನ್ನು ಪ್ರೀತಿಸಬೇಕು. ಪ್ರಚೋದನೆ ಮಾಡುವುದುಕ್ಕಿಂತ ಬಾಂಧವ್ಯ, ಸೌಹಾರ್ದತೆ ಬೆಳೆಸಬೇಕು ಎಂದರು.

ಕಸಾಬಾ ನೂಲ ರಾಮನಾಥ ಗಿರಿ ಸಮಾಧಿ ಮಠದ ಶ್ರೀ ಭಗವಾನ್‌ ಗಿರಿ ಮಹರಾಜ ಮಾತನಾಡಿ, ತಾಯಿ ಜೀಜಾಮಾತಾ ಆಶೀರ್ವಾದದಿಂದ ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯ ಸ್ಥಾಪಿಸಿದರು. ಶಿವಾಜಿ ಮಹಾರಾಜರ ಧೈರ್ಯ, ಸ್ಥೈರ್ಯ ನಾವೆಲ್ಲರೂ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ನಾವು ಧರ್ಮ ಸಹಿಷ್ಣುಗಳು: ದುರದುಂಡೀಶ್ವರ ವಿರಕ್ತಮಠದ ಶ್ರೀ ಗುರುಬಸವಲಿಂ ಸ್ವಾಮೀಜಿ ಮಾತನಾಡಿ, ಭಾರತದಲ್ಲಿ ನಾವೆಲ್ಲ ಜನಿಸಿದ್ದೇ ಸುದೈವ. ಅನೇಕ ಧರ್ಮ, ಜಾತಿಗಳಿದ್ದರೂ ಅನ್ಯೋನ್ಯತೆಯಿಂದ ಬದುಕುತ್ತಿರುವುದು ಹೆಮ್ಮೆಯ ವಿಷಯ. ಭಾರತೀಯರಾದ ನಾವು ಧರ್ಮ ಸಹಿಷ್ಣುಗಳು. ಬದುಕಿನಲ್ಲಿ ನಾವೇನೂ ಗಳಿಸಿದರೂ ನಮ್ಮೊಂದಿಗೆ ಇರುವುದು ಧರ್ಮ ಮಾತ್ರ. ಈ ಭಾಗದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿರುವ ಶಾಸಕ ಸತೀಶ್‌ ಜಾರಕಿಹೊಳಿ ಹಾಗೂ ತಂದೆಯಂತೆ ಸಾಮಾಜಿಕ ಕಾರ್ಯದಲ್ಲಿ ತೊಡಗಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿ ಎಂದು ಕರೆ ನೀಡಿದರು.

ಇದನ್ನೂ ಓದಿ: ಗಡಿ ವಿಚಾರ: 'ರಾಜಕಾರಣಿಗಳು ದೊಡ್ಡ ಮನಸ್ಸು ಮಾಡಿ ವ್ಯವಸ್ಥೆ ಸರಿಪಡಿಸಬೇಕು'- ಶಿವಣ್ಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.