ETV Bharat / state

ಗೋ ಮಾಂಸ ತಿನ್ನುವ ಸಿದ್ದರಾಮಯ್ಯನವರೊಂದಿಗೆ ಆರೆಸ್ಸೆಸ್ ನಾಯಕರು ಮಾತಾಡಲ್ಲ; ಕಟೀಲ್

author img

By

Published : Jan 17, 2021, 3:21 PM IST

ಯಡಿಯೂರಪ್ಪ ಬಜೆಟ್ ಮಂಡಿಸಿದ ನಂತರ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಖಚಿತ. ಈ ವಿಚಾರ ಆರ್​ಎಸ್​ಎಸ್ ಮೂಲಗಳಿಂದಲೇ ತಿಳಿದು ಬಂದಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

Nalin Kumar Kateel
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್

ಬೆಳಗಾವಿ: ಸಿದ್ದರಾಮಯ್ಯ ಹಿಂದೆ ಏನಾದ್ರು ಆರ್​ಎಸ್​ಎಸ್ ನಲ್ಲಿ ಇದ್ರಾ? ಸಂಘದ ಜವಾಬ್ದಾರಿ ವಹಿಸಿದ್ರಾ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆ ಫೋನ್​ನಲ್ಲಿ ಮಾತನಾಡಿದ್ದಾರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್

'ಯಡಿಯೂರಪ್ಪ ಬಜೆಟ್ ಮಂಡಿಸಿದ ನಂತರ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಖಚಿತ. ಈ ವಿಚಾರ ಆರ್​ಎಸ್​ಎಸ್ ಮೂಲಗಳಿಂದಲೇ ತಿಳಿದು ಬಂದಿದೆ.' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕಟೀಲ್​, ಸಿದ್ದರಾಮಯ್ಯ ಅವರನ್ನು ರಾಹುಲ್, ಕಾಂಗ್ರೆಸ್​ನಿಂದ ಹೊರಗೆ ಇಟ್ಟಿದ್ದಾರೆ. ಗೋ ಮಾಂಸ ತಿನ್ನುವವರ ಜತೆಗೆ ಆರ್​ಎಸ್​ಎಸ್ ನಾಯಕರು ಮಾತನಾಡಲು ಸಾಧ್ಯವೇ? ಮುಖ್ಯಮಂತ್ರಿ ಬದಲಾವಣೆ ವಿಚಾರ ಎಲ್ಲೂ ಪ್ರಸ್ತಾಪವಾಗಿಲ್ಲ. ನಮ್ಮ ಪಕ್ಷದವರು ಈವರೆಗೆ ಸಿಎಂ ಬದಲಾವಣೆಯಾಗುತ್ತಾರೆ ಎಂದು ಹೇಳಿಲ್ಲ ಎಂದರು.

ಓದಿ:ಸಿಎಂ ಬದಲಾವಣೆ ಖಚಿತ; ಇದು RSS ಮೂಲದಿಂದ ದೊರೆತ ಖಚಿತ ಮಾಹಿತಿ: ಸಿದ್ದರಾಮಯ್ಯ

ಬೆಳಗಾವಿ: ಸಿದ್ದರಾಮಯ್ಯ ಹಿಂದೆ ಏನಾದ್ರು ಆರ್​ಎಸ್​ಎಸ್ ನಲ್ಲಿ ಇದ್ರಾ? ಸಂಘದ ಜವಾಬ್ದಾರಿ ವಹಿಸಿದ್ರಾ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆ ಫೋನ್​ನಲ್ಲಿ ಮಾತನಾಡಿದ್ದಾರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್

'ಯಡಿಯೂರಪ್ಪ ಬಜೆಟ್ ಮಂಡಿಸಿದ ನಂತರ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಖಚಿತ. ಈ ವಿಚಾರ ಆರ್​ಎಸ್​ಎಸ್ ಮೂಲಗಳಿಂದಲೇ ತಿಳಿದು ಬಂದಿದೆ.' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕಟೀಲ್​, ಸಿದ್ದರಾಮಯ್ಯ ಅವರನ್ನು ರಾಹುಲ್, ಕಾಂಗ್ರೆಸ್​ನಿಂದ ಹೊರಗೆ ಇಟ್ಟಿದ್ದಾರೆ. ಗೋ ಮಾಂಸ ತಿನ್ನುವವರ ಜತೆಗೆ ಆರ್​ಎಸ್​ಎಸ್ ನಾಯಕರು ಮಾತನಾಡಲು ಸಾಧ್ಯವೇ? ಮುಖ್ಯಮಂತ್ರಿ ಬದಲಾವಣೆ ವಿಚಾರ ಎಲ್ಲೂ ಪ್ರಸ್ತಾಪವಾಗಿಲ್ಲ. ನಮ್ಮ ಪಕ್ಷದವರು ಈವರೆಗೆ ಸಿಎಂ ಬದಲಾವಣೆಯಾಗುತ್ತಾರೆ ಎಂದು ಹೇಳಿಲ್ಲ ಎಂದರು.

ಓದಿ:ಸಿಎಂ ಬದಲಾವಣೆ ಖಚಿತ; ಇದು RSS ಮೂಲದಿಂದ ದೊರೆತ ಖಚಿತ ಮಾಹಿತಿ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.