ಅಥಣಿ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಕೆನರಾ ಬ್ಯಾಂಕ್ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಸಾರ್ವಜನಿಕರು ಹಾಗೂ ಸಿಬ್ಬಂದಿ ವ್ಯವಹಾರ ನಡೆಸುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ 15,000 ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ. ಅಥಣಿ ತಾಲೂಕಿಗೆ ಗಡಿ ಹೊಂದಿರುವ ಮಹಾರಾಷ್ಟ್ರ ರಾಜ್ಯ, ತಾಲೂಕಿನ ಭಾಗದ ಜನರ ತುಂಬಾ ಎಚ್ಚರಿಕೆಯಿಂದ ಇರಬೇಕು. ಆದರೆ ಸಾರ್ವಜನಿಕರು ಇದ್ಯಾವುದಕ್ಕೂ ಕೇರ್ ಮಾಡದೆ ಗುಂಪು, ಗುಂಪಾಗಿ ಸೇರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಸಾಮಾಜಿಕ ಅಂತರ ವಿಷಯಕ್ಕೆ ಸಂಬಂಧಿಸಿದಂತೆ ಕೆನರಾ ಬ್ಯಾಂಕ್ ಸಿಬ್ಬಂದಿ ಕೇಳಿದರೆ, ನಾವು ಏನು ಮಾಡಿದರೂ ಜನ ಕೇಳುತ್ತಿಲ್ಲ ಎಂದು ತಮ್ಮ ಅಸಹಾಯಕತೆ ಜೊತೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.