ETV Bharat / state

ನಿರಾಣಿ ಶುಗರ್ಸ್ ಸೇರಿ 21 ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಿಢೀರ್ ದಾಳಿ

author img

By

Published : Dec 14, 2022, 2:53 PM IST

ಸಚಿವ ಮುರುಗೇಶ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್ ಸೇರಿ ಒಟ್ಟು 21 ಕಾರ್ಖಾನೆಗಳ ಮೇಲೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತರ ತಂಡದಿಂದ ದಾಳಿ ನಡೆದಿದೆ.

Attack on 21 factories including Nirani Sugars
ಶುಗರ್ಸ್ ಕಾರ್ಖಾನೆಗಳ ಮೇಲೆ ದಾಳಿ

ಬೆಳಗಾವಿ: ಉತ್ತರ ಕರ್ನಾಟಕದ 21 ಸಕ್ಕರೆ ಕಾರ್ಖಾನೆಗಳ ಮೇಲೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತ ಶಿವಾನಂದ ಕಲಕೇರಿ ನೇತೃತ್ವದಲ್ಲಿ ದಿಢೀರ್ ದಾಳಿ ನಡೆದಿದೆ. ಕಬ್ಬು ಬೆಳೆಯುವ ರೈತರಿಗೆ ತೂಕದಲ್ಲಿ ಕಾರ್ಖಾನೆಗಳಿಂದ ಮೋಸವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.

ಬೆಳಗಾವಿ ಜಿಲ್ಲೆಯ 8, ಬಾಗಲಕೋಟೆ 4, ವಿಜಯಪುರ 4, ಕಲಬುರಗಿ, ಬೀದರ್​ ಜಿಲ್ಲೆಯ 2, ಕಾರವಾರದ ಒಂದು ಕಾರ್ಖಾನೆಯ ಮೇಲೆ ಬೆಳಗ್ಗೆ 7 ಗಂಟೆಯಿಂದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ಮಾಲೀಕತ್ವದ ಬೆಳಗಾಂ ಶುಗರ್ಸ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾಲೀಕತ್ವದ ಹರ್ಷ ಶುಗರ್ಸ್, ಕತ್ತಿ ಸಹೋದರ ಮಾಲೀಕತ್ವದ ವಿಶ್ವರಾಜ್ ಶುಗರ್ಸ್, ಸಚಿವ ಮುರುಗೇಶ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್ ಸೇರಿದಂತೆ ಹಲವು ಕಾರ್ಖಾನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಬೆಳಗಾವಿ: ಉತ್ತರ ಕರ್ನಾಟಕದ 21 ಸಕ್ಕರೆ ಕಾರ್ಖಾನೆಗಳ ಮೇಲೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತ ಶಿವಾನಂದ ಕಲಕೇರಿ ನೇತೃತ್ವದಲ್ಲಿ ದಿಢೀರ್ ದಾಳಿ ನಡೆದಿದೆ. ಕಬ್ಬು ಬೆಳೆಯುವ ರೈತರಿಗೆ ತೂಕದಲ್ಲಿ ಕಾರ್ಖಾನೆಗಳಿಂದ ಮೋಸವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.

ಬೆಳಗಾವಿ ಜಿಲ್ಲೆಯ 8, ಬಾಗಲಕೋಟೆ 4, ವಿಜಯಪುರ 4, ಕಲಬುರಗಿ, ಬೀದರ್​ ಜಿಲ್ಲೆಯ 2, ಕಾರವಾರದ ಒಂದು ಕಾರ್ಖಾನೆಯ ಮೇಲೆ ಬೆಳಗ್ಗೆ 7 ಗಂಟೆಯಿಂದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ಮಾಲೀಕತ್ವದ ಬೆಳಗಾಂ ಶುಗರ್ಸ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾಲೀಕತ್ವದ ಹರ್ಷ ಶುಗರ್ಸ್, ಕತ್ತಿ ಸಹೋದರ ಮಾಲೀಕತ್ವದ ವಿಶ್ವರಾಜ್ ಶುಗರ್ಸ್, ಸಚಿವ ಮುರುಗೇಶ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್ ಸೇರಿದಂತೆ ಹಲವು ಕಾರ್ಖಾನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಇದನ್ನೂ ಓದಿ: ಜನವರಿ 15ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.