ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿದ ಅಧಿಕಾರಿಗಳ ಮೇಲೆ ದಂಧೆಕೋರರು ಕಲ್ಲು ತೂರಿದ್ದಾರೆ.
![Officials raid on Illegal sand mining in Belagavi](https://etvbharatimages.akamaized.net/etvbharat/prod-images/12095187_965_12095187_1623402173825.png)
ಗುರುವಾರ ಸಂಜೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಅಧಿಕಾರಿಗಳ ಕಾರಿನ ಮೇಲೆ 20 ಜನರು ಕಲ್ಲು ತೂರಾಟ ನಡೆಸಿದ್ದಾರೆ.
![Officials raid on Illegal sand mining in Belagavi](https://etvbharatimages.akamaized.net/etvbharat/prod-images/12095187_154_12095187_1623402137586.png)
ಇಲಾಖೆಗೆ ಸೇರಿದ ಒಂದು ಟಾಟಾ ಸುಮೋ ವಾಹನದ ಗಾಜುಗಳು ಪುಡಿಪುಡಿಯಾಗಿವೆ. ಡ್ರೈವರ್ ಸೇರಿ ಮೂರು ಜನ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗವೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.