ETV Bharat / state

ಬೆಳಗಾವಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಲಕ್ಷಕ್ಕೂ ಅಧಿಕ ಲೀಟರ್ ಹಾಲು ರಸ್ತೆಪಾಲು

author img

By ETV Bharat Karnataka Team

Published : Nov 18, 2023, 1:52 PM IST

Updated : Nov 18, 2023, 4:12 PM IST

ಹಾಲಿನ ವಾಹನ ಪಲ್ಟಿಯಾಗಿ 1 ಲಕ್ಷಕ್ಕೂ ಅಧಿಕ ಲೀಟರ್ ಹಾಲು ವ್ಯರ್ಥವಾಗಿದೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

one lakh liter milk wasted due to accident
ಹಾಲಿನ ವಾಹನ ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 1 ಲಕ್ಷಕ್ಕೂ ಅಧಿಕ ಲೀಟರ್ ಹಾಲು ರಸ್ತೆ ಪಾಲಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

one lakh liter milk wasted due to accident
ವಾಹನ ಪಲ್ಟಿ

ಚಾಲಕ ಅಪಾಯದಿಂದ ಪಾರು: ನಗರದ ಮಿಲಿಟರಿ ಮಹಾದೇವ ಟೆಂಪಲ್ ಬಳಿಯ ಕಾಂಗ್ರೆಸ್ ರಸ್ತೆಯಲ್ಲಿ, ಎದುರಿಗೆ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಹಾಲಿನ ವಾಹನ ಪಲ್ಟಿಯಾಗಿದೆ. ಪರಿಣಾಮ ಹಾಲಿನ ಕ್ಯಾನ್​​ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಚಾಲಕನಿಗೆ ಹೆಚ್ಚೇನೂ ತೊಂದರೆಯಾಗಿಲ್ಲ. ಸಣ್ಣ-ಪುಟ್ಟ ಗಾಯಗಳಾಗಿವೆ.

one lakh liter milk wasted due to accident
ವಾಹನ ಪಲ್ಟಿ

1 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ರಸ್ತೆಪಾಲು: ನಡು ರಸ್ತೆಯಲ್ಲೇ ಹಾಲಿನ ವಾಹನ ಪಲ್ಟಿಯಾದ ಹಿನ್ನೆಲೆ 1 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ರಸ್ತೆ ತುಂಬಾ ಹರಡಿತು. ಈ ಹಾಲು ಯಾವ ಡೈರಿಗೆ ಸೇರಿದ್ದು, ಎಲ್ಲಿಗೆ ಕಳುಹಿಸಲಾಗುತ್ತಿತ್ತು ಎಂಬುದರ ಮಾಹಿತಿ ನಿರೀಕ್ಷಿಸಲಾಗಿದೆ. ಅಪಘಾದ ಸಂಭವಿಸಿದ ಹಿನ್ನೆಲೆ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಆಗಿ ವಾಹನ ಸವಾರರು ಪರದಾಡಿದರು. ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ‌.

ಮತ್ತೊಂದು ಅಪಘಾತ ಪ್ರಕರಣ: ಜಾರ್ಖಾಂಡ್​ನಲ್ಲಿ ಭೀಕರ ವಾಹನ ಅಪಘಾತ ಸಂಭವಿಸಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಮದುವೆ ಸಮಾರಂಭಕ್ಕೆ ಸಂಬಂಧಿಸಿದ ಗಾಡಿ ಅಪಘಾತಕ್ಕೊಳಗಾಗಿ 6 ಮಂದಿ ಕೊನೆಯುಸಿರೆಳೆದಿರುವ ಘಟನೆ ಜಾರ್ಖಾಂಡ್​ನ ಗಿರಿದಿಹ್​ನಲ್ಲಿ ಸಂಭವಿಸಿದೆ. ಮುಫಸಿಲ್​ ಪೊಲೀಸ್ ಸ್ಟೇಷನ್​​ ವ್ಯಾಪ್ತಿಯ ಬಾಗ್ಮಾರಾ ಪ್ರದೇಶದ ಬಳಿ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, 6 ಮಂದಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ : ಮದುವೆ ಮುಗಿಸಿ ಹಿಂತಿರುಗುವ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಕಾರು; 6 ಮಂದಿ ಸಾವು

ಕೊನೆಯುಸಿರೆಳೆದ 6 ಮಂದಿ: ಮದುವೆ ಮೆರವಣಿಗೆ ಮುಗಿಸಿ ಬರುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದಲ್ಲೇ ಐವರು ಮೃತಪಟ್ಟಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ದುರಾದೃಷ್ಟವಶಾತ್​ ಚಿಕಿತ್ಸೆ ವೇಳೆ ಓರ್ವರು ಮೃತಪಟ್ಟ ಹಿನ್ನೆಲೆ ಸಾವಿನ ಸಂಖ್ಯೆ 6ಕ್ಕೆ ಏರಿತು.

ಇದನ್ನೂ ಓದಿ : 'ದಕ್ಷಿಣ ಗಾಜಾದಿಂದ ಪಲಾಯನ ಮಾಡಿ': ಪ್ಯಾಲೆಸ್ಟೈನಿಯರಿಗೆ ಎಚ್ಚರಿಕೆ ನೀಡಿದ ಇಸ್ರೇಲ್​

ನುಜ್ಜುಗುಜ್ಜಾದ ಕಾರು: ಕಾರು ಬಹಳ ಸ್ಪೀಡ್​ನಲ್ಲಿತ್ತು. ವೇಗದ ಚಾಲನೆಯೇ ಈ ಭೀಕರ ಘಟನೆಗೆ ಕಾರಣ ಎನ್ನಲಾಗಿದೆ. ಗಾಡಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಗಾಡಿ ಮರಕ್ಕೆ ಡಿಕ್ಕಿ ಹೊಡೆದಿದೆ. ವಾಹನದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಅಪಘಾತಕ್ಕೊಳಗಾದ ಕಾರಿನಲ್ಲಿ ಸುಮಾರು 10 ಮಂದಿ ಇದ್ದರು ಎಂಬ ಮಾಹಿತಿ ಇದೆ.

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 1 ಲಕ್ಷಕ್ಕೂ ಅಧಿಕ ಲೀಟರ್ ಹಾಲು ರಸ್ತೆ ಪಾಲಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

one lakh liter milk wasted due to accident
ವಾಹನ ಪಲ್ಟಿ

ಚಾಲಕ ಅಪಾಯದಿಂದ ಪಾರು: ನಗರದ ಮಿಲಿಟರಿ ಮಹಾದೇವ ಟೆಂಪಲ್ ಬಳಿಯ ಕಾಂಗ್ರೆಸ್ ರಸ್ತೆಯಲ್ಲಿ, ಎದುರಿಗೆ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಹಾಲಿನ ವಾಹನ ಪಲ್ಟಿಯಾಗಿದೆ. ಪರಿಣಾಮ ಹಾಲಿನ ಕ್ಯಾನ್​​ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಚಾಲಕನಿಗೆ ಹೆಚ್ಚೇನೂ ತೊಂದರೆಯಾಗಿಲ್ಲ. ಸಣ್ಣ-ಪುಟ್ಟ ಗಾಯಗಳಾಗಿವೆ.

one lakh liter milk wasted due to accident
ವಾಹನ ಪಲ್ಟಿ

1 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ರಸ್ತೆಪಾಲು: ನಡು ರಸ್ತೆಯಲ್ಲೇ ಹಾಲಿನ ವಾಹನ ಪಲ್ಟಿಯಾದ ಹಿನ್ನೆಲೆ 1 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ರಸ್ತೆ ತುಂಬಾ ಹರಡಿತು. ಈ ಹಾಲು ಯಾವ ಡೈರಿಗೆ ಸೇರಿದ್ದು, ಎಲ್ಲಿಗೆ ಕಳುಹಿಸಲಾಗುತ್ತಿತ್ತು ಎಂಬುದರ ಮಾಹಿತಿ ನಿರೀಕ್ಷಿಸಲಾಗಿದೆ. ಅಪಘಾದ ಸಂಭವಿಸಿದ ಹಿನ್ನೆಲೆ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಆಗಿ ವಾಹನ ಸವಾರರು ಪರದಾಡಿದರು. ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ‌.

ಮತ್ತೊಂದು ಅಪಘಾತ ಪ್ರಕರಣ: ಜಾರ್ಖಾಂಡ್​ನಲ್ಲಿ ಭೀಕರ ವಾಹನ ಅಪಘಾತ ಸಂಭವಿಸಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಮದುವೆ ಸಮಾರಂಭಕ್ಕೆ ಸಂಬಂಧಿಸಿದ ಗಾಡಿ ಅಪಘಾತಕ್ಕೊಳಗಾಗಿ 6 ಮಂದಿ ಕೊನೆಯುಸಿರೆಳೆದಿರುವ ಘಟನೆ ಜಾರ್ಖಾಂಡ್​ನ ಗಿರಿದಿಹ್​ನಲ್ಲಿ ಸಂಭವಿಸಿದೆ. ಮುಫಸಿಲ್​ ಪೊಲೀಸ್ ಸ್ಟೇಷನ್​​ ವ್ಯಾಪ್ತಿಯ ಬಾಗ್ಮಾರಾ ಪ್ರದೇಶದ ಬಳಿ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, 6 ಮಂದಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ : ಮದುವೆ ಮುಗಿಸಿ ಹಿಂತಿರುಗುವ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಕಾರು; 6 ಮಂದಿ ಸಾವು

ಕೊನೆಯುಸಿರೆಳೆದ 6 ಮಂದಿ: ಮದುವೆ ಮೆರವಣಿಗೆ ಮುಗಿಸಿ ಬರುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದಲ್ಲೇ ಐವರು ಮೃತಪಟ್ಟಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ದುರಾದೃಷ್ಟವಶಾತ್​ ಚಿಕಿತ್ಸೆ ವೇಳೆ ಓರ್ವರು ಮೃತಪಟ್ಟ ಹಿನ್ನೆಲೆ ಸಾವಿನ ಸಂಖ್ಯೆ 6ಕ್ಕೆ ಏರಿತು.

ಇದನ್ನೂ ಓದಿ : 'ದಕ್ಷಿಣ ಗಾಜಾದಿಂದ ಪಲಾಯನ ಮಾಡಿ': ಪ್ಯಾಲೆಸ್ಟೈನಿಯರಿಗೆ ಎಚ್ಚರಿಕೆ ನೀಡಿದ ಇಸ್ರೇಲ್​

ನುಜ್ಜುಗುಜ್ಜಾದ ಕಾರು: ಕಾರು ಬಹಳ ಸ್ಪೀಡ್​ನಲ್ಲಿತ್ತು. ವೇಗದ ಚಾಲನೆಯೇ ಈ ಭೀಕರ ಘಟನೆಗೆ ಕಾರಣ ಎನ್ನಲಾಗಿದೆ. ಗಾಡಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಗಾಡಿ ಮರಕ್ಕೆ ಡಿಕ್ಕಿ ಹೊಡೆದಿದೆ. ವಾಹನದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಅಪಘಾತಕ್ಕೊಳಗಾದ ಕಾರಿನಲ್ಲಿ ಸುಮಾರು 10 ಮಂದಿ ಇದ್ದರು ಎಂಬ ಮಾಹಿತಿ ಇದೆ.

Last Updated : Nov 18, 2023, 4:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.