ETV Bharat / state

ಬೆಳಗಾವಿಯಲ್ಲಿ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ - ಬೆಳಗಾವಿಯಲ್ಲಿ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ

ಬೆಳಗಾವಿಯಲ್ಲಿ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಹಾಗೂ ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಅಮೃತ ಮಹೋತ್ಸವ ನಡೆಯುತ್ತಿದ್ದು, ನೂರಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗಿದ್ದಾರೆ.

prabhakar kore amrutha mahotsava celebration
ಮಠಾಧೀಶರ ಬೃಹತ್ ಚಿಂತನಾ ಸಮಾವೇಶ
author img

By

Published : Nov 11, 2022, 12:43 PM IST

ಬೆಳಗಾವಿ: ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಅಮೃತ ಮಹೋತ್ಸವ ನಿಮಿತ್ತ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಹಾಗೂ ಪ್ರಭಾಕರ್ ಕೋರೆ ಅಭಿನಂದನಾ ಸಮಾರಂಭ ನಡೆಯುತ್ತಿದೆ. ಇಲ್ಲಿನ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಚಿಂತನಾ ಸಮಾವೇಶ ನಡೆಯುತ್ತಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ

ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಸಿರಿಗೆರೆ ತರಳಬಾಳು ಮಹಾಸಂಸ್ಥಾನ ಮಠದ ಜಗದ್ದುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಮಹಾ ಸ್ವಾಮೀಜಿ, ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಮಹಾ ಸ್ವಾಮೀಜಿ, ಮುಂಡರಗಿ ಅನ್ನದಾನೇಶ್ವರ ಸಂಸ್ಥಾನ ಮಠದ ಜಗದ್ಗುರು ನಾಡೋಜ ಡಾ.ಅನ್ನದಾನೇಶ್ವರ ಮಹಾಸ್ವಾಮಿಗಳು, ನಿಡಸೋಸಿ ಸಿದ್ಧಸಂಸ್ಥಾನ ಮಠದ ಪಂಚಮಶಿವಲಿಂಗೇಶ್ವರ ಮಹಾಸ್ವಾಮಿಗಳು, ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಕೊಟ್ಟೂರು ಸ್ವಾಮೀಮಠದ ಬಸವಲಿಂಗ ಮಹಾಸ್ವಾಮಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಮಠಾಧೀಶರು, ಕೆಎಲ್ಇ ಸಂಸ್ಥೆಯ ಅಧ್ಯಕ್ಷ, ಶಾಸಕ ಮಹಾಂತೇಶ ಕೌಜಲಗಿ, ಕಾಡಾ ಅಧ್ಯಕ್ಷ, ಮಾಜಿ ಶಾಸಕ ವಿಶ್ವನಾಥ ಪಾಟೀಲ್, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.

ಇದನ್ನೂ ಓದಿ: ದಿಂಗಾಲೇಶ್ವರನನ್ನ ನಾವು ಸ್ವಾಮೀಜಿ‌ ಅಂತಾ ಒಪ್ಪಿಲ್ಲ.. ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ..

ಈ ವೇಳೆ ಮಾತನಾಡಿದ ಸಾಹಿತಿ ಡಾ‌.ಗೊ.ರು‌‌.ಚನ್ನಬಸಪ್ಪ, ಶಿಕ್ಷಣ ಸಂಸ್ಥೆಗಳು ಹಾಗೂ ಮಠ ಎರಡರ ಸಂಯೋಜನೆಯ ಅರ್ಥ ಒಂದೇ ಆಗಿದೆ. ಭಕ್ತರು ಗುರುಗಳನ್ನು ಗೌರವಿಸೋದು ರೂಢಿ. ಆದರೆ, ಇಲ್ಲಿ ಗುರುಗಳೇ ಭಕ್ತರನ್ನು ಗೌರವಿಸೋದು ವಿಶೇಷವಾಗಿದೆ. ಇಂದು ಗೌರವ ಸ್ವೀಕರಿಸುತ್ತಿರುವ ಪ್ರಭಾಕರ ಕೋರೆ ಒಳ್ಳೆಯ ಸಮಾಜ ಸುಧಾರಣಾ ಕಾರ್ಯ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ವೀರಶೈವ-ಲಿಂಗಾಯತ ಉಪ ಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಿ: ಪ್ರಭಾಕರ್​​ ಕೋರೆ

ಪ್ರಭಾಕರ ಕೋರೆ ಬೆಳಗಾವಿಗರ‌ಲ್ಲ, ಅವರ ಇಂದಿನ ಸಾಮಾಜಿಕ ಸೇವೆ ದೇಶದೆಲ್ಲೆಡೆ ಹರಡಿದೆ‌. ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಕೆಎಲ್ಇ ಸಂಸ್ಥೆ ಅಧ್ಯಕ್ಷ ಪ್ರಭಾಕರ್ ಕೋರೆ ಸಾಕಷ್ಟು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದಾರೆ. ಜೊತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಹಾಡಿ ಹೊಗಳಿದರು.

ಇದನ್ನೂ ಓದಿ: ಟಿಕೆಟ್ ಕೊಟ್ಟರೆ ಲೋಕಸಭೆಗೆ ಸ್ಪರ್ಧಿಸುವೆ; ಪ್ರಭಾಕರ ಕೋರೆ ಪುನರುಚ್ಚಾರ

ಬೆಳಗಾವಿ: ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಅಮೃತ ಮಹೋತ್ಸವ ನಿಮಿತ್ತ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಹಾಗೂ ಪ್ರಭಾಕರ್ ಕೋರೆ ಅಭಿನಂದನಾ ಸಮಾರಂಭ ನಡೆಯುತ್ತಿದೆ. ಇಲ್ಲಿನ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಚಿಂತನಾ ಸಮಾವೇಶ ನಡೆಯುತ್ತಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ

ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಸಿರಿಗೆರೆ ತರಳಬಾಳು ಮಹಾಸಂಸ್ಥಾನ ಮಠದ ಜಗದ್ದುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಮಹಾ ಸ್ವಾಮೀಜಿ, ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಮಹಾ ಸ್ವಾಮೀಜಿ, ಮುಂಡರಗಿ ಅನ್ನದಾನೇಶ್ವರ ಸಂಸ್ಥಾನ ಮಠದ ಜಗದ್ಗುರು ನಾಡೋಜ ಡಾ.ಅನ್ನದಾನೇಶ್ವರ ಮಹಾಸ್ವಾಮಿಗಳು, ನಿಡಸೋಸಿ ಸಿದ್ಧಸಂಸ್ಥಾನ ಮಠದ ಪಂಚಮಶಿವಲಿಂಗೇಶ್ವರ ಮಹಾಸ್ವಾಮಿಗಳು, ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಕೊಟ್ಟೂರು ಸ್ವಾಮೀಮಠದ ಬಸವಲಿಂಗ ಮಹಾಸ್ವಾಮಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಮಠಾಧೀಶರು, ಕೆಎಲ್ಇ ಸಂಸ್ಥೆಯ ಅಧ್ಯಕ್ಷ, ಶಾಸಕ ಮಹಾಂತೇಶ ಕೌಜಲಗಿ, ಕಾಡಾ ಅಧ್ಯಕ್ಷ, ಮಾಜಿ ಶಾಸಕ ವಿಶ್ವನಾಥ ಪಾಟೀಲ್, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.

ಇದನ್ನೂ ಓದಿ: ದಿಂಗಾಲೇಶ್ವರನನ್ನ ನಾವು ಸ್ವಾಮೀಜಿ‌ ಅಂತಾ ಒಪ್ಪಿಲ್ಲ.. ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ..

ಈ ವೇಳೆ ಮಾತನಾಡಿದ ಸಾಹಿತಿ ಡಾ‌.ಗೊ.ರು‌‌.ಚನ್ನಬಸಪ್ಪ, ಶಿಕ್ಷಣ ಸಂಸ್ಥೆಗಳು ಹಾಗೂ ಮಠ ಎರಡರ ಸಂಯೋಜನೆಯ ಅರ್ಥ ಒಂದೇ ಆಗಿದೆ. ಭಕ್ತರು ಗುರುಗಳನ್ನು ಗೌರವಿಸೋದು ರೂಢಿ. ಆದರೆ, ಇಲ್ಲಿ ಗುರುಗಳೇ ಭಕ್ತರನ್ನು ಗೌರವಿಸೋದು ವಿಶೇಷವಾಗಿದೆ. ಇಂದು ಗೌರವ ಸ್ವೀಕರಿಸುತ್ತಿರುವ ಪ್ರಭಾಕರ ಕೋರೆ ಒಳ್ಳೆಯ ಸಮಾಜ ಸುಧಾರಣಾ ಕಾರ್ಯ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ವೀರಶೈವ-ಲಿಂಗಾಯತ ಉಪ ಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಿ: ಪ್ರಭಾಕರ್​​ ಕೋರೆ

ಪ್ರಭಾಕರ ಕೋರೆ ಬೆಳಗಾವಿಗರ‌ಲ್ಲ, ಅವರ ಇಂದಿನ ಸಾಮಾಜಿಕ ಸೇವೆ ದೇಶದೆಲ್ಲೆಡೆ ಹರಡಿದೆ‌. ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಕೆಎಲ್ಇ ಸಂಸ್ಥೆ ಅಧ್ಯಕ್ಷ ಪ್ರಭಾಕರ್ ಕೋರೆ ಸಾಕಷ್ಟು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದಾರೆ. ಜೊತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಹಾಡಿ ಹೊಗಳಿದರು.

ಇದನ್ನೂ ಓದಿ: ಟಿಕೆಟ್ ಕೊಟ್ಟರೆ ಲೋಕಸಭೆಗೆ ಸ್ಪರ್ಧಿಸುವೆ; ಪ್ರಭಾಕರ ಕೋರೆ ಪುನರುಚ್ಚಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.