ETV Bharat / state

ಪ್ರಕಾಶ ಹುಕ್ಕೇರಿಗೆ ಕೊನೆಗೂ ಸಿಗದ ಕಾಗವಾಡ ಕಾಂಗ್ರೆಸ್ ಟಿಕೆಟ್ - Latest news for prakash hukkeri in Kagavada constuency

ಕಳೆದ ವಿಧಾನಸಭಾ ಚುನಾವಣೆಯಿಂದಲೂ ಕಾಗವಾಡ ಮತಕ್ಷೇತ್ರದ ಮೇಲೆ‌ ಕಣ್ಣಿಟ್ಟಿದ್ದ ಮಾಜಿ‌ ಸಂಸದ ಪ್ರಕಾಶ ಹುಕ್ಕೇರಿ ಅವರಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗಬಹುದು ಎನ್ನುವ ನಿರೀಕ್ಷೆ ಹೊಂದಿದ್ದರು. ಆದರೆ ಮತ್ತೆ ಅವರಿಗೆ ನಿರಾಸೆಯಾಗಿದೆ.

ಪ್ರಕಾಶ ಹುಕ್ಕೇರಿ
author img

By

Published : Nov 17, 2019, 5:55 PM IST

ಬೆಳಗಾವಿ : ಕಳೆದ ವಿಧಾನಸಭಾ ಚುನಾವಣೆಯಿಂದಲೂ ಕಾಗವಾಡ ಮತಕ್ಷೇತ್ರದ ಮೇಲೆ‌ ಕಣ್ಣಿಟ್ಟಿದ್ದ ಮಾಜಿ‌ ಸಂಸದ ಪ್ರಕಾಶ ಹುಕ್ಕೇರಿ ಅವರಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗಬಹುದು ಎನ್ನುವ ನಿರೀಕ್ಷೆ ಹೊಂದಿದ್ದರು. ಆದರೆ ಮತ್ತೆ ಅವರಿಗೆ ನಿರಾಸೆಯಾಗಿದೆ.
ಅಚ್ಚರಿಯ ಬೆಳವಣಿಗೆಯಲ್ಲಿ ಪ್ರಕಾಶ್​ ಹುಕ್ಕೇರಿ ಚುನಾವಣಾ ಕಣದಿಂದ ದೂರ ಸರಿದಿದ್ದು, ಕಾಂಗ್ರೆಸ್ ಪಕ್ಷ ರಾಜು ಕಾಗೆಗೆ ಕಾಗವಾಡ ಕ್ಷೇತ್ರದಲ್ಲಿ ಮಣೆ ಹಾಕಿದೆ. ನಿನ್ನೆ ತಡರಾತ್ರಿ ಪ್ರಕಟಗೊಂಡ ಅಭ್ಯರ್ಥಿಗಳ ಪಟ್ಟಿಯಲ್ಲಿ, ರಾಜು ಕಾಗೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಅಥಣಿ ಕ್ಷೇತ್ರದಲ್ಲಿ ಉದ್ಯಮಿ ಗಜಾನನ ಮಂಗಸೂಳಿ ಎಂಬ ಹೊಸ ಮುಖಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬಿಜೆಪಿಯಿಂದ ನಾಲ್ಕು ಬಾರಿ ಶಾಸಕರಾಗಿದ್ದ ರಾಜು ಕಾಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಸೇರಿದ್ದಾರೆ. ಕ್ಷೇತ್ರದಲ್ಲಿ ಅವರು ತಮ್ಮದೇ ಆದ ಕಾರ್ಯಕರ್ತರ ಪಡೆ ಹೊಂದಿರುವುದರಿಂದ ರಾಜು ಕಾಗೆ ಅವರಿಗೆ ಟಿಕೆಟ್​ ನೀಡಲಾಗಿದೆ ಎನ್ನಲಾಗದೆ.

ಬೆಳಗಾವಿ : ಕಳೆದ ವಿಧಾನಸಭಾ ಚುನಾವಣೆಯಿಂದಲೂ ಕಾಗವಾಡ ಮತಕ್ಷೇತ್ರದ ಮೇಲೆ‌ ಕಣ್ಣಿಟ್ಟಿದ್ದ ಮಾಜಿ‌ ಸಂಸದ ಪ್ರಕಾಶ ಹುಕ್ಕೇರಿ ಅವರಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗಬಹುದು ಎನ್ನುವ ನಿರೀಕ್ಷೆ ಹೊಂದಿದ್ದರು. ಆದರೆ ಮತ್ತೆ ಅವರಿಗೆ ನಿರಾಸೆಯಾಗಿದೆ.
ಅಚ್ಚರಿಯ ಬೆಳವಣಿಗೆಯಲ್ಲಿ ಪ್ರಕಾಶ್​ ಹುಕ್ಕೇರಿ ಚುನಾವಣಾ ಕಣದಿಂದ ದೂರ ಸರಿದಿದ್ದು, ಕಾಂಗ್ರೆಸ್ ಪಕ್ಷ ರಾಜು ಕಾಗೆಗೆ ಕಾಗವಾಡ ಕ್ಷೇತ್ರದಲ್ಲಿ ಮಣೆ ಹಾಕಿದೆ. ನಿನ್ನೆ ತಡರಾತ್ರಿ ಪ್ರಕಟಗೊಂಡ ಅಭ್ಯರ್ಥಿಗಳ ಪಟ್ಟಿಯಲ್ಲಿ, ರಾಜು ಕಾಗೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಅಥಣಿ ಕ್ಷೇತ್ರದಲ್ಲಿ ಉದ್ಯಮಿ ಗಜಾನನ ಮಂಗಸೂಳಿ ಎಂಬ ಹೊಸ ಮುಖಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬಿಜೆಪಿಯಿಂದ ನಾಲ್ಕು ಬಾರಿ ಶಾಸಕರಾಗಿದ್ದ ರಾಜು ಕಾಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಸೇರಿದ್ದಾರೆ. ಕ್ಷೇತ್ರದಲ್ಲಿ ಅವರು ತಮ್ಮದೇ ಆದ ಕಾರ್ಯಕರ್ತರ ಪಡೆ ಹೊಂದಿರುವುದರಿಂದ ರಾಜು ಕಾಗೆ ಅವರಿಗೆ ಟಿಕೆಟ್​ ನೀಡಲಾಗಿದೆ ಎನ್ನಲಾಗದೆ.

Intro:ಪ್ರಕಾಶ ಹುಕ್ಕೇರಿ ಅವರಿಗೆ ಕೊನೆಗೂ ಸಿಗದ ಕಾಗವಾಡ ಕಾಂಗ್ರೆಸ್ ಟಿಕೇಟ್
Body:
ಚಿಕ್ಕೋಡಿ :
ಸ್ಟೋರಿ

ಕಳೆದ ವಿಧಾನಸಭಾ ಚುನಾವಣೆಯಿಂದ ಕಾಗವಾಡ ಮತಕ್ಷೇತ್ರದ ಮೇಲೆ‌ ಕಣ್ಣು ಇಟ್ಟಿದ್ದ ಮಾಜಿ‌ ಸಂಸದ ಪ್ರಕಾಶ ಹುಕ್ಕೇರಿ ಅವರಿಗೆ ಈ ಉಪ ಚುನಾವಣೆಯಲ್ಲಿ ಟಿಕೇಟ್ ಸಿಗಬಹುದು ಎನ್ನುವ ನೀರಿಕ್ಷೇಯಲ್ಲಿದ ಪ್ರಕಾಶ ಹುಕ್ಕೇರಿಗೆ ಮತ್ತೆ ನಿರಾಸೆಯಾಗಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ ಪ್ರಕಾಶ ಹುಕ್ಕೇರಿ ಚುನಾವಣಾ ಕಣದಿಂದ ಔಟ್ ಆಗಿದ್ದು, ಕಾಂಗ್ರೆಸ್ ಪಕ್ಷವು ರಾಜು ಕಾಗೆ ಅವರಿಗೆ ಕಾಗವಾಡ ಕ್ಷೇತ್ರದಲ್ಲಿ ಮಣೆ ಹಾಕಿದೆ.
ನಿನ್ನೆ ತಡರಾತ್ರಿ ಪ್ರಕಟಗೊಂಡ ಕಾಂಗ್ರೆಸ್ ಪಟ್ಟಿಯಲ್ಲಿ, ರಾಜು ಕಾಗೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಅಥಣಿ ಕ್ಷೇತ್ರದಲ್ಲಿ ಉದ್ಯಮಿ ಗಜಾನನ ಮಂಗಸೂಳಿ ಎಂಬ ಹೊಸ ಮುಖಕ್ಕೆ ಅವಕಾಶ ಕೊಡಲಾಗಿದೆ.

ಈ ಮೊದಲು ರಾಜು ಕಾಗೆ ಅವರು ಅಥಣಿ ಅಥವಾ ಕಾಗವಾಡ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಹೀಗಾಗಿ ಅವರಿಗೆ ಅಥಣಿಯಲ್ಲಿ ಅವಕಾಶ ಕೊಟ್ಟು, ಹಿಂದಿನಿಂದಲೂ ಕಾಗವಾಡ ಮೇಲೆ ಕಣ್ಣಿಟ್ಟಿರುವ ಪ್ರಕಾಶ ಹುಕ್ಕೇರಿಯವರಿಗೆ ಆ ಕ್ಷೇತ್ರದ  ಟಿಕೆಟ್ ನೀಡಲಾಗುವುದು ಎಂದು ಅಂದಾಜಿಸಲಾಗಿತ್ತು. ಈಗ ಲೆಕ್ಕಾಚಾರವೆಲ್ಲವೂ ಉಲ್ಟಾ ಆಗಿದೆ.

ಬಿಜೆಪಿಯಿಂದ ನಾಲ್ಕು ಬಾರಿ ಶಾಸಕರಾಗಿದ್ದ ರಾಜು ಕಾಗೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಸೇರಿದ್ದಾರೆ. ಹಳೆ ಹುಲಿ ಆಗಿದ್ದರಿಂದ ಕ್ಷೇತ್ರದಲ್ಲಿ ತಮ್ಮದೆ ಆದ ಕಾರ್ಯಕರ್ತರ ಪಡೆಯನ್ನು ದೊಡ್ಡ ಹೊಂದಿದ್ದಾರೆ. 

ಪ್ರಕಾಶ ಹುಕ್ಕೇರಿ ಅವರಿಗೆ ಟಿಕೆಟ್ ನೀಡಿದಲ್ಲಿ ಬೇರು ಮಟ್ಟದಲ್ಲಿ ಹೊಸದಾಗಿ ಕಾರ್ಯಕರ್ತರ ಪಡೆಯನ್ನು ಕಟ್ಟಬೇಕಾಗುತ್ತದೆ. ಇದು ಬಹುತ್ತೇಕ ಸ್ವಲ್ಪ ಕಷ್ಟ ಆಗಬಹುದು ಎನ್ನುವ ಮಾತುಗಳು ಕ್ಷೇತ್ರದ ತುಂಬೆಲ್ಲ ಕೇಳಿ ಬರುವಂತಹದ್ದು,

ಅಥಣಿಯಲ್ಲಿ ಬಂಡಾಯದ ಬಿಸಿ :

ಕಾಗವಾಡದಲ್ಲಿ ಸಮಸ್ಯೆ ಬಗೆಹರಿದಿದ್ದರೂ,  ಕಾಂಗ್ರೆಸ್ ಪಕ್ಷಕ್ಕೆ ಅಥಣಿಯಲ್ಲಿ ಬಂಡಾಯದ ಬಿಸಿ ತಾಗುವ ಸಾಧ್ಯತೆ ಇದೆ. ಗಜಾನನ ಮಂಗಸೂಳಿ ಎಂಬ ಹೊಸ ಮುಖಕ್ಕೆ ಮನೆ ಹಾಕಿದ್ದರಿಂದ, ಟಿಕೇಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಅವರಿಗೆ ನಿರಾಸೆಯಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.