ETV Bharat / state

ಪ್ಯಾಕೇಜ್​​​ ಆಧಾರಿತ ಗುತ್ತಿಗೆ ರದ್ದುಪಡಿಸುವಂತೆ ಗುತ್ತಿಗೆದಾರರ ಪ್ರತಿಭಟನೆ

ಪ್ಯಾಕೇಜ್ ಆಧಾರಿತ ಗುತ್ತಿಗೆ ರದ್ದಿಗಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಸ್.ಸಿ ಎಸ್.ಟಿ ಗುತ್ತಿಗೆದಾರರ ಸಂಘ ಪ್ರತಿಭಟನೆ ನಡೆಸಿದೆ.

author img

By

Published : Jul 29, 2019, 9:51 PM IST

ಮನವಿ ಸಲ್ಲಿಕೆ

ಬೆಳಗಾವಿ: ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಗುತ್ತಿಗೆಯನ್ನು ಪ್ಯಾಕೇಜ್​ ಆಧಾರಿತವಾಗಿ ನೀಡುವುದರಿಂದ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದ್ದು, ಇದನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿ ಜಿಲ್ಲಾ ಎಸ್​ಸಿ, ಎಸ್​ಟಿ ಗುತ್ತಿಗೆದಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪ್ಯಾಕೇಜ್ ಆಧಾರಿತ ಗುತ್ತಿಗೆ ರದ್ದುಪಡಿಸುವಂತೆ ಗುತ್ತಿಗೆದಾರರ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಎಸ್​​ಸಿ, ಎಸ್​ಟಿ ಗುತ್ತಿಗೆದಾರರ ಸಂಘದ ಸದಸ್ಯರು, ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳನ್ನು ಪ್ಯಾಕೇಜ್ ಮಾಡಬೇಕೆಂದು ಸರ್ಕಾರದ ಆದೇಶ ಇಲ್ಲದಿದ್ದರೂ 50 ಲಕ್ಷ ರೂ. ಒಳಗಿನ ಮೀಸಲಾತಿ ಕಾಮಗಾರಿಗಳನ್ನು ಕ್ರೋಢೀಕರಣಗೊಳಿಸಿ 1 ಕೋಟಿಯಿಂದ 5 ಕೋಟಿ ರೂಪಾಯಿಯವರೆಗೆ ಪ್ಯಾಕೇಜ್ ರೀತಿಯಲ್ಲಿ ನೀಡಲಾಗುತ್ತಿದೆ. ಇದರಿಂದ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಇದನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿಂಧೂರ ವಲ್ಲೇಪೂರಕರ ಮಾತನಾಡಿ, ಬೆಳಗಾವಿಯಲ್ಲಿ ಜಾರಿಯಲ್ಲಿರುವ ಸರ್ಕಾರಿ ಕಾಮಗಾರಿಗಳನ್ನು ಪ್ಯಾಕೇಜ್​ ರೀತಿಯಲ್ಲಿ ಗುತ್ತಿಗೆ ನೀಡುತ್ತಿರುವುದರಿಂದ ಹೊರ ರಾಜ್ಯದವರು ಕೋಟಿ ಲೆಕ್ಕದಲ್ಲಿ ಹಣ ಹೂಡಿಕೆ ಮಾಡಿ ಗುತ್ತಿಗೆ ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿರುವ ಕಿರು ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದ್ದು, ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿ: ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಗುತ್ತಿಗೆಯನ್ನು ಪ್ಯಾಕೇಜ್​ ಆಧಾರಿತವಾಗಿ ನೀಡುವುದರಿಂದ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದ್ದು, ಇದನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿ ಜಿಲ್ಲಾ ಎಸ್​ಸಿ, ಎಸ್​ಟಿ ಗುತ್ತಿಗೆದಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪ್ಯಾಕೇಜ್ ಆಧಾರಿತ ಗುತ್ತಿಗೆ ರದ್ದುಪಡಿಸುವಂತೆ ಗುತ್ತಿಗೆದಾರರ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಎಸ್​​ಸಿ, ಎಸ್​ಟಿ ಗುತ್ತಿಗೆದಾರರ ಸಂಘದ ಸದಸ್ಯರು, ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳನ್ನು ಪ್ಯಾಕೇಜ್ ಮಾಡಬೇಕೆಂದು ಸರ್ಕಾರದ ಆದೇಶ ಇಲ್ಲದಿದ್ದರೂ 50 ಲಕ್ಷ ರೂ. ಒಳಗಿನ ಮೀಸಲಾತಿ ಕಾಮಗಾರಿಗಳನ್ನು ಕ್ರೋಢೀಕರಣಗೊಳಿಸಿ 1 ಕೋಟಿಯಿಂದ 5 ಕೋಟಿ ರೂಪಾಯಿಯವರೆಗೆ ಪ್ಯಾಕೇಜ್ ರೀತಿಯಲ್ಲಿ ನೀಡಲಾಗುತ್ತಿದೆ. ಇದರಿಂದ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಇದನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿಂಧೂರ ವಲ್ಲೇಪೂರಕರ ಮಾತನಾಡಿ, ಬೆಳಗಾವಿಯಲ್ಲಿ ಜಾರಿಯಲ್ಲಿರುವ ಸರ್ಕಾರಿ ಕಾಮಗಾರಿಗಳನ್ನು ಪ್ಯಾಕೇಜ್​ ರೀತಿಯಲ್ಲಿ ಗುತ್ತಿಗೆ ನೀಡುತ್ತಿರುವುದರಿಂದ ಹೊರ ರಾಜ್ಯದವರು ಕೋಟಿ ಲೆಕ್ಕದಲ್ಲಿ ಹಣ ಹೂಡಿಕೆ ಮಾಡಿ ಗುತ್ತಿಗೆ ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿರುವ ಕಿರು ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದ್ದು, ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Intro:ಪ್ಯಾಕೇಜ್ ಆಧಾರಿತ ಗುತ್ತಿಗೆ ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಬೆಳಗಾವಿ : ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಗುತ್ತಿಗೆಯನ್ನು ಪ್ಯಾಕೇಜ ಆಧಾರಿತವಾಗಿ ನೀಡುವುದರಿಂದ, ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದ್ದು ಇದನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ. ಬೆಳಗಾವಿ ಜಿಲ್ಲಾ ಎಸ್.ಸಿ ಎಸ್.ಟಿ ಗುತ್ತಿಗೆದಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Body:ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಎಸ್.ಸಿ ಎಸ್.ಟಿ ಗುತ್ತಿಗೆದಾರರ ಸಂಘದ ಸದಸ್ಯರು. ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳನ್ನು ಪ್ಯಾಕೇಜ್ ಮಾಡಬೇಕೆಂದು ಸರಕಾರದ ಆದೇಶ ಇಲ್ಲದಿದ್ದರೂ. 50 ಲಕ್ಷ ರೂ ಒಳಗಿನ ಮೀಸಲಾತಿ ಕಾಮಗಾರಿಗಳನ್ನು ಕ್ರೂಡಿಕರಣಗೊಳಿಸಿ, 1 ಕೋಟಿಯಿಂದ 5 ಕೋಟಿ ರೂಪಾಯಿಯ ವರೆಗೆ ಪ್ಯಾಕೇಜ್ ರೀತಿಯಲ್ಲಿ ನೀಡಲಾಗುತ್ತಿದೆ. ಇದರಿಂದ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದ್ದು. ಇದನ್ನು ಕೂಡಲೆ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Conclusion:ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿಂದೂರ ವಲ್ಲೇಪೂರಕರ ಮಾತನಾಡಿ. ಬೆಳಗಾವಿಯಲ್ಲಿ ಜಾರಿಯಲ್ಲಿರುವ ಸರಕಾರಿ ಕಾಮಗಾರಿಗಳನ್ನು ಪ್ಯಾಕೇಜ ರೀತಿಯಲ್ಲಿ ಗುತ್ತಿಗೆ ನೀಡುತ್ತಿರುವುದರಿಂದ ಹೊರ ರಾಜ್ಯದವರು ಕೋಟಿ ಲೆಕ್ಕದಲ್ಲಿ ಹಣ ಹೂಡಿಕೆ ಮಾಡಿ ಗುತ್ತಿಗೆ ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿರುವ ಕಿರು ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದ್ದು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.