ETV Bharat / state

ಬಣಗುಡುತ್ತಿರುವ ಕೃಷ್ಣಾ ನದಿಯಲ್ಲಿ ರೈತರ ಅಹೋರಾತ್ರಿ ಧರಣಿ: ನೀರಿಗಾಗಿ ವಿನೂತನ ಪ್ರತಿಭಟನೆ - undefined

ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸುವಂತೆ ರೈತರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಥಣಿ ತಾಲೂಕಿನ ದರೂರ ಗ್ರಾಮದ ಕೃಷ್ಣಾ ನದಿಯಲ್ಲಿ ಅನ್ನದಾತರು ಅಹೋರಾತ್ರಿ ಧರಣಿ ಮಾಡಿದರು.

ಕೃಷ್ಣಾ ನದಿ ದಂಡೆಯಲ್ಲಿ ರೈತರು ಅಹೋರಾತ್ರಿ ಧರಣಿ ಮಾಡಿದರು
author img

By

Published : May 3, 2019, 1:17 PM IST

ಚಿಕ್ಕೋಡಿ: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸಲು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಥಣಿ ತಾಲೂಕಿನ ದರೂರ ಗ್ರಾಮದ ಕೃಷ್ಣಾ ನದಿ ದಂಡೆಯಲ್ಲಿ ರೈತರು ಅಹೋರಾತ್ರಿ ಧರಣಿ ಮಾಡಿದರು.

ಬತ್ತುತ್ತಿರುವ ಕೃಷ್ಣಾ ನದಿಗಿಳಿದು ಉರುಳುಸೇವೆ ಮಾಡಿ, ಬಾಯಿ ಬಡಿದುಕೊಂಡು, ಮರಳು ಎರಚಿ ಹಿಡಿಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಅಥಣಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಜಾನುವಾರುಗಳು ನೀರಿಲ್ಲದೇ ಸಾಯುವ ಸ್ಥಿತಿಯಲ್ಲಿವೆ. ರೈತರು ಕೆಲಸವಿಲ್ಲದೇ ಗುಳೇ ಹೋಗುವಂತಾಗಿದೆ.

ಕೃಷ್ಣಾ ನದಿ ದಂಡೆಯಲ್ಲಿ ರೈತರು ಅಹೋರಾತ್ರಿ ಧರಣಿ ಮಾಡಿದರು

ಚುನಾವಣೆಯ ಸಂದರ್ಭವಾದ್ದರಿಂದ ಇದುವರೆಗೂ ಯಾವ ಜನಪ್ರತಿನಿಧಿಗಳು ಬಂದಿಲ್ಲ ಎಂದು ಭಾವಿಸಿದ್ದೆವು. ಚುನಾವಣೆ ಮುಗಿದ ಬಳಿಕವಾದರೂ ಗಮನಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಕೃಷ್ಣಾ ನದಿಗೆ ನೀರು ಬಿಡುವ ಸಲುವಾಗಿ ಎರಡು ದಿನಗಳ ಕಾಲ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಎರಡು ದಿನಗಳ ಒಳಗೆ ಸ್ಪಂದನೆ ದೊರೆಯದಿದ್ದಲ್ಲಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮರಳಿನಲ್ಲಿ ಸ್ನಾನ ಮಾಡಿ, ಬತ್ತಿದ ನದಿಯಲ್ಲಿ ದೀರ್ಘ ದಂಡ ನಮಸ್ಕಾರ ಹಾಕಿ ವಿಶಿಷ್ಟ ರೀತಿಯಲ್ಲಿ ರೈತರು ಪ್ರತಿಭಟನೆ ಮಾಡಿದರು


.

ಚಿಕ್ಕೋಡಿ: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸಲು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಥಣಿ ತಾಲೂಕಿನ ದರೂರ ಗ್ರಾಮದ ಕೃಷ್ಣಾ ನದಿ ದಂಡೆಯಲ್ಲಿ ರೈತರು ಅಹೋರಾತ್ರಿ ಧರಣಿ ಮಾಡಿದರು.

ಬತ್ತುತ್ತಿರುವ ಕೃಷ್ಣಾ ನದಿಗಿಳಿದು ಉರುಳುಸೇವೆ ಮಾಡಿ, ಬಾಯಿ ಬಡಿದುಕೊಂಡು, ಮರಳು ಎರಚಿ ಹಿಡಿಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಅಥಣಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಜಾನುವಾರುಗಳು ನೀರಿಲ್ಲದೇ ಸಾಯುವ ಸ್ಥಿತಿಯಲ್ಲಿವೆ. ರೈತರು ಕೆಲಸವಿಲ್ಲದೇ ಗುಳೇ ಹೋಗುವಂತಾಗಿದೆ.

ಕೃಷ್ಣಾ ನದಿ ದಂಡೆಯಲ್ಲಿ ರೈತರು ಅಹೋರಾತ್ರಿ ಧರಣಿ ಮಾಡಿದರು

ಚುನಾವಣೆಯ ಸಂದರ್ಭವಾದ್ದರಿಂದ ಇದುವರೆಗೂ ಯಾವ ಜನಪ್ರತಿನಿಧಿಗಳು ಬಂದಿಲ್ಲ ಎಂದು ಭಾವಿಸಿದ್ದೆವು. ಚುನಾವಣೆ ಮುಗಿದ ಬಳಿಕವಾದರೂ ಗಮನಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಕೃಷ್ಣಾ ನದಿಗೆ ನೀರು ಬಿಡುವ ಸಲುವಾಗಿ ಎರಡು ದಿನಗಳ ಕಾಲ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಎರಡು ದಿನಗಳ ಒಳಗೆ ಸ್ಪಂದನೆ ದೊರೆಯದಿದ್ದಲ್ಲಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮರಳಿನಲ್ಲಿ ಸ್ನಾನ ಮಾಡಿ, ಬತ್ತಿದ ನದಿಯಲ್ಲಿ ದೀರ್ಘ ದಂಡ ನಮಸ್ಕಾರ ಹಾಕಿ ವಿಶಿಷ್ಟ ರೀತಿಯಲ್ಲಿ ರೈತರು ಪ್ರತಿಭಟನೆ ಮಾಡಿದರು


.

Intro:ಕೃಷ್ಣಾ ನದಿಯಲ್ಲಿ ಕೈಯಿಂದ ಮರಳು ಅಗೆದು ಆಕ್ರೋಷ ಹೊರಹಾಕಿದ ಪ್ರತಿಭಟನಾಕಾರರುBody:

ಚಿಕ್ಕೋಡಿ :
ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸಲು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಥಣಿ ತಾಲ್ಲೂಕಿನ ದರೂರ ಗ್ರಾಮದ ಕೃಷ್ಣಾ ನದಿ ದಂಡೆಯಲ್ಲಿ ರೈತರು ಅಹೋರಾತ್ರಿ ಧರಣಿ ಮಾಡಿದರು.

ಬತ್ತಿರುವ ಕೃಷ್ಣಾ ನದಿಗಿಳಿದು ಉರುಳುಸೇವೆ ಮಾಡಿ, ಬಾಯಿ ಬಡಿದುಕೊಂಡು, ಮರಳು ಎರಚಿ ಹಿಡಿಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಅಥಣಿ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು. ಜಾನುವಾರುಗಳು ನೀರಿಲ್ಲದೇ ಸಾಯುವ ಸ್ಥಿತಿಯಲ್ಲಿವೆ. ರೈತರು ಕೆಲಸವಿಲ್ಲದೇ ಗುಳೇ ಹೋಗುವಂತಾಗಿದೆ. ಇಷ್ಟಾದರೂ ಜನ
ಪ್ರತಿನಿಧಿಗಳು ಹಾಗೂ ರಾಜಕಾರಣಿಗಳು ಲೋಕಸಭಾ ಚುನಾವಣೆಯಲ್ಲಿ ಮುಳುಗಿದ್ದರು. ಚುನಾವಣೆ ಮುಗಿದ ಬಳಿಕವಾದರೂ ಗಮನಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಕೃಷ್ಣಾ ನದಿಗೆ ನೀರು ಬರುವವರೆಗೂ ಧರಣಿ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಎರಡು ದಿನಗಳವರೆಗೆ ಧರಣಿ ನಡೆಸುತ್ತೇವೆ. ಅಲ್ಲಿವರೆಗೆ ಸ್ಪಂದನೆ ದೊರೆಯದಿದ್ದಲ್ಲಿ ಜತ್ತ– ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮರಳಿನಲ್ಲಿ ಸ್ನಾನ ಮಾಡಿ, ಬತ್ತಿದ ನದಿಯಲ್ಲಿ ದೀರ್ಘ ದಂಡ ನಮಸ್ಕಾರ ಹಾಕಿ ವಿಶಿಷ್ಟ ರೀತಿಯಲ್ಲಿ ರೈತರು ಪ್ರತಿಭಟನೆ ಮಾಡಿದರು




Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.