ETV Bharat / state

ಚಿಕ್ಕೋಡಿಯಲ್ಲಿ ಅನುದಾನ ಹಂಚಿಕೆಯ ತಾರತಮ್ಯ ಆರೋಪಿಸಿ, ಪ್ರತಿಭಟನೆ

author img

By

Published : Jul 26, 2019, 9:02 PM IST

ಪುರಸಭೆಯ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾಗುವ ಅನುದಾನ‌ ಹಂಚಿಕೆಯಲ್ಲಿ ಜೆಡಿಎಸ್ ಸದಸ್ಯರಿರುವ ವಾರ್ಡ್‌ಗಳಿಗೆ ತಾರತಮ್ಯ ಮಾಡಲಾಗುತ್ತಿದೆಯೆಂದು ಆರೋಪಿಸಿ  ಬೆಳಗಾವಿ‌ ಜೆಲ್ಲೆಯ ಮೂಡಲಗಿ ತಾಲೂಕಿನಲ್ಲಿ ಜೆಡಿಎಸ್‌ ಮುಖಂಡರು ಧರಣಿ ನಡೆಸಿದರು.

ಚಿಕ್ಕೋಡಿಯಲ್ಲಿ ಅನುದಾನ ಹಂಚಿಕೆಯ ತಾರತಮ್ಯ ಆರೋಪಿಸಿ, ಪ್ರತಿಭಟನೆ

ಚಿಕ್ಕೋಡಿ: ಪುರಸಭೆಯ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾಗುವ ಅನುದಾನ‌ ಹಂಚಿಕೆಯಲ್ಲಿ ಜೆಡಿಎಸ್ ಸದಸ್ಯರಿರುವ ವಾರ್ಡ್‌ಗಳಿಗೆ ತಾರತಮ್ಯ ಮಾಡಲಾಗುತ್ತಿದೆಯೆಂದು ಆರೋಪಿಸಿ ಬೆಳಗಾವಿ‌ ಜೆಲ್ಲೆಯ ಮೂಡಲಗಿ ತಾಲೂಕಿನಲ್ಲಿ ಜೆಡಿಎಸ್‌ ಮುಖಂಡರು ಧರಣಿ ನಡೆಸಿದರು.

ಚಿಕ್ಕೋಡಿಯಲ್ಲಿ ಅನುದಾನ ಹಂಚಿಕೆಯ ತಾರತಮ್ಯ ಆರೋಪಿಸಿ, ಪ್ರತಿಭಟನೆ

ಪ್ರತಿಭಟನಾಕಾರರನ್ನು ಉದ್ದೇಶಿಸಿ ಜೆಡಿಎಸ್‌ ಮುಖಂಡ ಭೀಮಪ್ಪ ಗಡಾದ ಮಾತನಾಡಿ, 2018 ರಲ್ಲಿ ಅನುಮೋದನೆಯಾಗಿರುವ ಅನುದಾನದಲ್ಲಿ ಕೇವಲ ಬಿಜೆಪಿ ಸದಸ್ಯರಿರುವ ವಾರ್ಡ್‌ಗಳಿಗೆ ಮಾತ್ರ ಅನುದಾನ ನೀಡಲಾಗಿದೆ. ಈ ಬಗ್ಗೆ ಪುರಸಭೆ ಅಧಿಕಾರಿಗಳನ್ನು ವಿಚಾರಿಸಿದರೆ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆದೇಶವಾಗಿದೆಯೆಂದು ಸಬೂಬು ಹೇಳುತ್ತಿದ್ದಾರೆ ಎಂದು ದೂರಿದರು.

ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ, ತಾರತಮ್ಯ ಸರಿಪಡಿಸುವ ತನಕ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲವೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಮಧ್ಯಾಹ್ನದ ವೇಳೆಗೆ ಪ್ರತಿಭಟನಾ ಸ್ಥಳಕ್ಕೆ ಬಂದ ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಇನ್ನು ಮುಂದೆ ಕ್ರಿಯಾ ಯೋಜನೆಗಳಲ್ಲಿ ತಾರತಮ್ಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಜೆಡಿಎಸ್‌ ಮುಖಂಡರು ಪ್ರತಿಭಟನೆ ಹಿಂಪಡೆದಿದ್ದಾರೆ.

ಚಿಕ್ಕೋಡಿ: ಪುರಸಭೆಯ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾಗುವ ಅನುದಾನ‌ ಹಂಚಿಕೆಯಲ್ಲಿ ಜೆಡಿಎಸ್ ಸದಸ್ಯರಿರುವ ವಾರ್ಡ್‌ಗಳಿಗೆ ತಾರತಮ್ಯ ಮಾಡಲಾಗುತ್ತಿದೆಯೆಂದು ಆರೋಪಿಸಿ ಬೆಳಗಾವಿ‌ ಜೆಲ್ಲೆಯ ಮೂಡಲಗಿ ತಾಲೂಕಿನಲ್ಲಿ ಜೆಡಿಎಸ್‌ ಮುಖಂಡರು ಧರಣಿ ನಡೆಸಿದರು.

ಚಿಕ್ಕೋಡಿಯಲ್ಲಿ ಅನುದಾನ ಹಂಚಿಕೆಯ ತಾರತಮ್ಯ ಆರೋಪಿಸಿ, ಪ್ರತಿಭಟನೆ

ಪ್ರತಿಭಟನಾಕಾರರನ್ನು ಉದ್ದೇಶಿಸಿ ಜೆಡಿಎಸ್‌ ಮುಖಂಡ ಭೀಮಪ್ಪ ಗಡಾದ ಮಾತನಾಡಿ, 2018 ರಲ್ಲಿ ಅನುಮೋದನೆಯಾಗಿರುವ ಅನುದಾನದಲ್ಲಿ ಕೇವಲ ಬಿಜೆಪಿ ಸದಸ್ಯರಿರುವ ವಾರ್ಡ್‌ಗಳಿಗೆ ಮಾತ್ರ ಅನುದಾನ ನೀಡಲಾಗಿದೆ. ಈ ಬಗ್ಗೆ ಪುರಸಭೆ ಅಧಿಕಾರಿಗಳನ್ನು ವಿಚಾರಿಸಿದರೆ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆದೇಶವಾಗಿದೆಯೆಂದು ಸಬೂಬು ಹೇಳುತ್ತಿದ್ದಾರೆ ಎಂದು ದೂರಿದರು.

ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ, ತಾರತಮ್ಯ ಸರಿಪಡಿಸುವ ತನಕ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲವೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಮಧ್ಯಾಹ್ನದ ವೇಳೆಗೆ ಪ್ರತಿಭಟನಾ ಸ್ಥಳಕ್ಕೆ ಬಂದ ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಇನ್ನು ಮುಂದೆ ಕ್ರಿಯಾ ಯೋಜನೆಗಳಲ್ಲಿ ತಾರತಮ್ಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಜೆಡಿಎಸ್‌ ಮುಖಂಡರು ಪ್ರತಿಭಟನೆ ಹಿಂಪಡೆದಿದ್ದಾರೆ.

Intro:ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ : ಉಪವಿಭಾಗಾಧಿಕಾರಿ ಭೇಟಿ
Body:
ಚಿಕ್ಕೋಡಿ :

ಪುರಸಭೆಯ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾಗುವ ಅನುದಾನ‌ ಹಂಚಿಕೆಯಲ್ಲಿ ಜೆಡಿಎಸ್ ಸದಸ್ಯರಿರುವ ವಾರ್ಡ್‌ಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಮುಖಂಡರು ಧರಣಿ ಮಾಡಿರುವ ಘಟನೆ ಬೆಳಗಾವಿ‌ ಜೆಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ.

ತಾರತಮ್ಯ ಸರಿಪಡಿಸುವ ತನಕ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು. ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು. ಮಧ್ಯಾಹ್ನದ ವೇಳೆಗೆ ಪ್ರತಿಭಟನಾ ಸ್ಥಳಕ್ಕೆ ಬಂದ ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಇನ್ನು ಮುಂದೆ ಕ್ರಿಯಾ ಯೋಜನೆಗಳಲ್ಲಿ ತಾರತಮ್ಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಜೆಡಿಎಸ್‌ ಮುಖಂಡರು ಪ್ರತಿಭಟನೆ ಹಿಂಪಡೆದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಜೆಡಿಎಸ್‌ ಮುಖಂಡ ಭೀಮಪ್ಪ ಗಡಾದ ಮಾತನಾಡಿ
2018 ರಲ್ಲಿ ಅನುಮೋದನೆ ಆಗಿರುವ ಅನುದಾನದಲ್ಲಿ ಕೇವಲ ಬಿಜೆಪಿ ಸದಸ್ಯರಿರುವ ವಾರ್ಡ್‌ಗಳಿಗೆ ಮಾತ್ರ ಅನುದಾನ ನೀಡಲಾಗಿದೆ. ಈ ಬಗ್ಗೆ ಪುರಸಭೆ ಅಧಿಕಾರಿಗಳನ್ನು ವಿಚಾರಿಸಿದರೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆದೇಶವಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ ಎಂದು ದೂರಿದರು.


Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.