ETV Bharat / state

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..‌ ಕಾಮುಕನನ್ನ ಕಂಬಕ್ಕೆ ಕಟ್ಟಿ ಥಳಿಸಿದ ಜನರು

author img

By

Published : Nov 25, 2020, 8:38 PM IST

ರವಿವಾರ ಪೇಟೆಯಲ್ಲಿ ಕಳೆದ ಹಲವು ವರ್ಷಗಳಿಂದ ಹಮಾಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಮಾರ್ಕೇಟ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಠಾಣಾ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದಲ್ಲಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ..

rape-victim
ಅತ್ಯಾಚಾರ ಆರೋಪಿ

ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕಣ್ಮರೆಯಾಗಿದ್ದ ಕಾಮುಕ ಗ್ರಾಮ ಪಂಚಾಯತ್ ಸದಸ್ಯನೋರ್ವನನ್ನು ಸ್ಥಳೀಯರು ಥಳಿಸಿ ಮಾರ್ಕೇಟ್ ಠಾಣೆಗೆ ಇಂದು ಒಪ್ಪಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮಾಳಾ ಗ್ರಾಮದ ಪರಶುರಾಮ್ ದೇಮಾನಿ ಮಡಿವಾಳ (53) ಬಂಧಿತ ಆರೋಪಿ. ಈತ ಕಳೆದ ಎರಡು ದಿನಗಳ ಹಿಂದೆ ಪುಲ್‌ಬಾಗ್ ಗಲ್ಲಿಯಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಆದ್ರೆ, ಈ ಘಟನೆ ನಡೆದು ಎರಡು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯರು ಕಾಮುಕನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ತಳಿಸಿ ಠಾಣೆಗೆ ಎಳೆದು ತಂದಿದ್ದು, ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಅತ್ಯಾಚಾರ‌ ಎಸಗಿದ ಆರೋಪಿ ಬಂಧನ

ಘಟನೆ ಹಿನ್ನೆಲೆ: ಕಾಮುಕ ಆರೋಪಿ ಪರಶುರಾಮ, ಸೋಮವಾರ ಮಧ್ಯಾಹ್ನ ವೇಳೆಯಲ್ಲಿ ಬಾಲಕಿ ಆಟವಾಡುವ ಸಂದರ್ಭದಲ್ಲಿ ಕರೆತಂದು ಅತ್ಯಾಚಾರ ಮಾಡಿದ್ದಾನೆ. ಇದಾದ ಬಳಿಕ ಬಾಲಕಿ ಚಲನ-ವಲನ ಹಾಗೂ ಮೈಮೇಲಿನ ಗಾಯಗಳನ್ನು ಗುರುತಿಸಿದ ಕುಟುಂಬಸ್ಥರು, ವಿಚಾರಿಸಿದಾಗ ಬಾಲಕಿ ತನಗಾದ ನೋವನ್ನು ಹೇಳಿಕೊಂಡಿದ್ದಾಳೆ.

ರವಿವಾರ ಪೇಟೆಯಲ್ಲಿ ಕಳೆದ ಹಲವು ವರ್ಷಗಳಿಂದ ಹಮಾಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಮಾರ್ಕೇಟ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಠಾಣಾ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದಲ್ಲಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕಣ್ಮರೆಯಾಗಿದ್ದ ಕಾಮುಕ ಗ್ರಾಮ ಪಂಚಾಯತ್ ಸದಸ್ಯನೋರ್ವನನ್ನು ಸ್ಥಳೀಯರು ಥಳಿಸಿ ಮಾರ್ಕೇಟ್ ಠಾಣೆಗೆ ಇಂದು ಒಪ್ಪಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮಾಳಾ ಗ್ರಾಮದ ಪರಶುರಾಮ್ ದೇಮಾನಿ ಮಡಿವಾಳ (53) ಬಂಧಿತ ಆರೋಪಿ. ಈತ ಕಳೆದ ಎರಡು ದಿನಗಳ ಹಿಂದೆ ಪುಲ್‌ಬಾಗ್ ಗಲ್ಲಿಯಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಆದ್ರೆ, ಈ ಘಟನೆ ನಡೆದು ಎರಡು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯರು ಕಾಮುಕನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ತಳಿಸಿ ಠಾಣೆಗೆ ಎಳೆದು ತಂದಿದ್ದು, ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಅತ್ಯಾಚಾರ‌ ಎಸಗಿದ ಆರೋಪಿ ಬಂಧನ

ಘಟನೆ ಹಿನ್ನೆಲೆ: ಕಾಮುಕ ಆರೋಪಿ ಪರಶುರಾಮ, ಸೋಮವಾರ ಮಧ್ಯಾಹ್ನ ವೇಳೆಯಲ್ಲಿ ಬಾಲಕಿ ಆಟವಾಡುವ ಸಂದರ್ಭದಲ್ಲಿ ಕರೆತಂದು ಅತ್ಯಾಚಾರ ಮಾಡಿದ್ದಾನೆ. ಇದಾದ ಬಳಿಕ ಬಾಲಕಿ ಚಲನ-ವಲನ ಹಾಗೂ ಮೈಮೇಲಿನ ಗಾಯಗಳನ್ನು ಗುರುತಿಸಿದ ಕುಟುಂಬಸ್ಥರು, ವಿಚಾರಿಸಿದಾಗ ಬಾಲಕಿ ತನಗಾದ ನೋವನ್ನು ಹೇಳಿಕೊಂಡಿದ್ದಾಳೆ.

ರವಿವಾರ ಪೇಟೆಯಲ್ಲಿ ಕಳೆದ ಹಲವು ವರ್ಷಗಳಿಂದ ಹಮಾಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಮಾರ್ಕೇಟ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಠಾಣಾ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದಲ್ಲಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.