ETV Bharat / state

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್: ನಿಲುವಳಿ ಸೂಚನೆ ಮಂಡನೆಗೆ ಪಟ್ಟು ಹಿಡಿದ ಆರ್.ಅಶೋಕ್

author img

By ETV Bharat Karnataka Team

Published : Dec 15, 2023, 5:49 PM IST

D.K.Shivakumar CBI investigation case: ಸದ್ಯ ಕೋರ್ಟ್‌ನಲ್ಲಿ ಡಿಕೆಶಿ ಪ್ರಕರಣದ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್​ ಯು.ಟಿ.ಖಾದರ್​ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನಿರಾಕರಿಸಿದರು.

R Ashok and Speaker U T Khadar
ಆರ್​ ಅಶೋಕ್​ ಹಾಗೂ ಸ್ಪೀಕರ್​ ಯು ಟಿ ಖಾದರ್​

ಬೆಳಗಾವಿ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಸರ್ಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿ ಇಂದು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಕ್ರಮವನ್ನು ವಿರೋಧಿಸಿ ನಿಲುವಳಿ ಸೂಚನೆ ಮಂಡನೆಗೆ ಅವರು ಪ್ರಯತ್ನಿಸಿದರು. ಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವಕಾಶ ನಿರಾಕರಿಸಿದರು.

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್, ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ಈ ನಿರ್ಧಾರ ಸಂವಿಧಾನಬಾಹಿರ. ರಾಜಕೀಯ ದುರುದ್ದೇಶಗಳಿಂದ ಕೂಡಿದೆ ಎಂದು ಹರಿಹಾಯ್ದರು. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಡಿ.ಕೆ.ಶಿವಕುಮಾರ್ ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಗಳ ಮೇರೆಗೆ 2019ರ ಸೆಪ್ಟೆಂಬರ್ 25ರಂದು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಒಮ್ಮೆ ತನಿಖೆಗೆ ನೀಡಿದ್ದ ಪ್ರಕರಣವನ್ನು ಹಿಂದೆ ಪಡೆಯಲು ಬರುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.

ಕಾಂಗ್ರೆಸ್ ಸರ್ಕಾರ ಇದೇ ರೀತಿ ಯಡಿಯೂರಪ್ಪ ಮತ್ತು ಜನಾರ್ದನ ರೆಡ್ಡಿ ಅವರುಗಳ ವಿರುದ್ಧದ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿತ್ತು. ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ಪ್ರಕರಣಗಳನ್ನು ಹಿಂಪಡೆಯುವ ಕೆಲಸ ಮಾಡಲಿಲ್ಲ. ಈ ಸರ್ಕಾರ ತಮಗೆ ತೋಚಿದಂತೆ ನಿರ್ಣಯವನ್ನು ಕೈಗೊಳ್ಳುವ ಮೂಲಕ ನ್ಯಾಯಾಂಗದ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದೆ ಎಂದೂ ಆರೋಪಿಸಿದರು.

ಇದಕ್ಕೆ ಬಿಜೆಪಿಯ ಎಲ್ಲಾ ಶಾಸಕರು ದನಿಗೂಡಿಸಿ ಈ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು. ಆದರೆ ಇದಕ್ಕೊಪ್ಪದ ಸ್ಪೀಕರ್ ಯು.ಟಿ.ಖಾದರ್ ಪ್ರಕರಣದ ವಿಚಾರಣೆ ನ್ಯಾಯಾಲಯದ ಮುಂದೆ ಇದೆ ಎಂದು ಅವಕಾಶ ನಿರಾಕರಿಸಿದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಪ್ರಕರಣ: ಬಿಜೆಪಿಯಿಂದ ನಿಲುವಳಿ ಸೂಚನೆ, ಚರ್ಚೆಗೆ ಅವಕಾಶ ನಿರಾಕರಿಸಿದ ಸಭಾಪತಿ

ಬೆಳಗಾವಿ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಸರ್ಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿ ಇಂದು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಕ್ರಮವನ್ನು ವಿರೋಧಿಸಿ ನಿಲುವಳಿ ಸೂಚನೆ ಮಂಡನೆಗೆ ಅವರು ಪ್ರಯತ್ನಿಸಿದರು. ಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವಕಾಶ ನಿರಾಕರಿಸಿದರು.

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್, ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ಈ ನಿರ್ಧಾರ ಸಂವಿಧಾನಬಾಹಿರ. ರಾಜಕೀಯ ದುರುದ್ದೇಶಗಳಿಂದ ಕೂಡಿದೆ ಎಂದು ಹರಿಹಾಯ್ದರು. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಡಿ.ಕೆ.ಶಿವಕುಮಾರ್ ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಗಳ ಮೇರೆಗೆ 2019ರ ಸೆಪ್ಟೆಂಬರ್ 25ರಂದು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಒಮ್ಮೆ ತನಿಖೆಗೆ ನೀಡಿದ್ದ ಪ್ರಕರಣವನ್ನು ಹಿಂದೆ ಪಡೆಯಲು ಬರುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.

ಕಾಂಗ್ರೆಸ್ ಸರ್ಕಾರ ಇದೇ ರೀತಿ ಯಡಿಯೂರಪ್ಪ ಮತ್ತು ಜನಾರ್ದನ ರೆಡ್ಡಿ ಅವರುಗಳ ವಿರುದ್ಧದ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿತ್ತು. ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ಪ್ರಕರಣಗಳನ್ನು ಹಿಂಪಡೆಯುವ ಕೆಲಸ ಮಾಡಲಿಲ್ಲ. ಈ ಸರ್ಕಾರ ತಮಗೆ ತೋಚಿದಂತೆ ನಿರ್ಣಯವನ್ನು ಕೈಗೊಳ್ಳುವ ಮೂಲಕ ನ್ಯಾಯಾಂಗದ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದೆ ಎಂದೂ ಆರೋಪಿಸಿದರು.

ಇದಕ್ಕೆ ಬಿಜೆಪಿಯ ಎಲ್ಲಾ ಶಾಸಕರು ದನಿಗೂಡಿಸಿ ಈ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು. ಆದರೆ ಇದಕ್ಕೊಪ್ಪದ ಸ್ಪೀಕರ್ ಯು.ಟಿ.ಖಾದರ್ ಪ್ರಕರಣದ ವಿಚಾರಣೆ ನ್ಯಾಯಾಲಯದ ಮುಂದೆ ಇದೆ ಎಂದು ಅವಕಾಶ ನಿರಾಕರಿಸಿದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಪ್ರಕರಣ: ಬಿಜೆಪಿಯಿಂದ ನಿಲುವಳಿ ಸೂಚನೆ, ಚರ್ಚೆಗೆ ಅವಕಾಶ ನಿರಾಕರಿಸಿದ ಸಭಾಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.