ETV Bharat / state

ಅಂಗಡಿ ಅವರ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ವರಿಷ್ಠರಿಂದ ತೀರ್ಮಾನ- ರಮೇಶ್ ಜಾರಕಿಹೊಳಿ - ಬೆಳಗಾವಿ ಸುದ್ದಿ

ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಎಲ್ಲಾ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಕಚೇರಿ ಸ್ಥಳಾಂತರ ಬಗ್ಗೆ ಕೇಳಿದ್ದಾರೆ. ಮೊದಲು ಅದನ್ನ ಮಾಡ್ತೀವಿ, ಗೋಕಾಕ್, ಚಿಕ್ಕೋಡಿ ಜಿಲ್ಲೆಯ ಕೂಗು ಇದೆ..

Ramesh Jarkiholi
ರಮೇಶ್ ಜಾರಕಿಹೊಳಿ
author img

By

Published : Oct 3, 2020, 3:33 PM IST

ಚಿಕ್ಕೋಡಿ: ದಿ. ಸುರೇಶ್ ಅಂಗಡಿಯವರ ಪತ್ನಿಗೆ ಲೋಕಸಭಾ ಟಿಕೆಟ್ ಕೊಡುವ ವಿಚಾರ ನನಗೆ ಗೊತ್ತಿಲ್ಲ. ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಏನ್ ತೀರ್ಮಾನ ತೆಗೆದುಕೊಳ್ತಾರೋ ಅದಕ್ಕೆ ನಾವು ಬದ್ಧ. ನಾವು ಪಕ್ಷದ ಸಿದ್ಧಾಂತದ ಮೇಲೆ ಕೆಲಸ ಮಾಡುತ್ತೇವೆ. ಲೋಕಸಭಾ ಟಿಕೆಟ್ ವಿಚಾರ ನಮ್ಮ ವರಿಷ್ಠರು ಅಂತಿಮ ತೀರ್ಮಾನ ಮಾಡ್ತಾರೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಸುರೇಶ ಅಂಗಡಿಯವರು ಬಹಳ ಒಳ್ಳೆಯ ಮನುಷ್ಯ, ಅವರ ಸಾವು ನಮಗೆಲ್ಲರಿಗೂ ಸೇರಿದಂತೆ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು.

ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಎಲ್ಲಾ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಕಚೇರಿ ಸ್ಥಳಾಂತರ ಬಗ್ಗೆ ಕೇಳಿದ್ದಾರೆ. ಮೊದಲು ಅದನ್ನ ಮಾಡ್ತೀವಿ, ಗೋಕಾಕ್, ಚಿಕ್ಕೋಡಿ ಜಿಲ್ಲೆಯ ಕೂಗು ಇದೆ. ಅದರ ಬಗ್ಗೆ ಚರ್ಚೆ ಆಗಬೇಕಿದೆ. ಗಡಿ ವಿಚಾರ ಕೋರ್ಟ್‌ನಲ್ಲಿ ಪ್ರಕರಣ ಇರೋದ್ರಿಂದ ಸಮಸ್ಯೆ ಇದೆ. ಚಿಕ್ಕೋಡಿ, ಗೋಕಾಕ್ ಜಿಲ್ಲೆ ಆಗಬೇಕೆಂದು ನಮ್ಮದು ಆಗ್ರಹ ಇದೆ ಎಂದು ಹೇಳಿದರು.

ಉತ್ತರಪ್ರದೇಶ ಹಥ್ರಾಸ್ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ಪೂರ್ಣ ಮಾಹಿತಿ ಇಲ್ಲ. ಸ್ಥಳೀಯ ಸರ್ಕಾರ ತನಿಖೆ ಮಾಡುತ್ತಿದೆ. ತನಿಖೆಯ ವರದಿ ಬಂದ ನಂತರ ಮಾತನಾಡಿದ್ರೆ ಒಳ್ಳೆಯದು ಎಂದರು.

11 ನೀರಾವರಿ ಯೋಜನೆಗಳ ಸರ್ವೇ‌ಗೆ ಆದೇಶ ಮಾಡಿದ್ದೇನೆ. ಅದರ ವರದಿ ಬಂದ ನಂತರ ತಾಂತ್ರಿಕ ಸೇರಿ ಎಲ್ಲಾ ವಿಚಾರಗಳನ್ನ ನೋಡಿ ನಿರ್ಣಯ ತೆಗೆದುಕೊಳ್ಳಲಾಗುವುದು. ಬರುವ ದಿನಗಳಲ್ಲಿ ಎಲ್ಲಾ ಯೋಜನೆಗಳನ್ನ ಮಾಡಬೇಕೆಂದು ದೃಢ ಸಂಕಲ್ಪ ಮಾಡಿದ್ದೇನೆ. ದೇವರು ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತೆ ಎಂದರು.

ಡಿ ಕೆ ಶಿವಕುಮಾರ್ ಬೆಳಗಾವಿ ಮೇಲೆ ವಿಶೇಷ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಡಿ ಕೆ ಶಿವಕುಮಾರ್​ ಅವರ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ. ಅವರ ಬಗ್ಗೆ ವೈಯಕ್ತಿಕ ಮಾತು ಬೇಡ. ಅವರು ಏನಾದ್ರೂ ಮಾಡಿಕೊಳ್ಳಲಿ. ನಾವು ನಮ್ಮ ಪಕ್ಷದ, ಕೆಲಸದ ಬಗ್ಗೆ ಅಷ್ಟೇ ನೋಡುವುದು ಒಳ್ಳೆಯದು. ಹೈಕಮಾಂಡಿನ ಯಾವುದೇ ನಿರ್ಣಾಯಕ್ಕೆ ನಾವು ಬದ್ಧ. ರಾಜಕೀಯ ಸೇರಿ ಪಕ್ಷದ ಯಾವುದೇ ನಿರ್ಣಯಕ್ಕೆ ಬದ್ಧ ಎಂದು ಹೇಳಿದರು.

ಚಿಕ್ಕೋಡಿ: ದಿ. ಸುರೇಶ್ ಅಂಗಡಿಯವರ ಪತ್ನಿಗೆ ಲೋಕಸಭಾ ಟಿಕೆಟ್ ಕೊಡುವ ವಿಚಾರ ನನಗೆ ಗೊತ್ತಿಲ್ಲ. ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಏನ್ ತೀರ್ಮಾನ ತೆಗೆದುಕೊಳ್ತಾರೋ ಅದಕ್ಕೆ ನಾವು ಬದ್ಧ. ನಾವು ಪಕ್ಷದ ಸಿದ್ಧಾಂತದ ಮೇಲೆ ಕೆಲಸ ಮಾಡುತ್ತೇವೆ. ಲೋಕಸಭಾ ಟಿಕೆಟ್ ವಿಚಾರ ನಮ್ಮ ವರಿಷ್ಠರು ಅಂತಿಮ ತೀರ್ಮಾನ ಮಾಡ್ತಾರೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಸುರೇಶ ಅಂಗಡಿಯವರು ಬಹಳ ಒಳ್ಳೆಯ ಮನುಷ್ಯ, ಅವರ ಸಾವು ನಮಗೆಲ್ಲರಿಗೂ ಸೇರಿದಂತೆ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು.

ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಎಲ್ಲಾ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಕಚೇರಿ ಸ್ಥಳಾಂತರ ಬಗ್ಗೆ ಕೇಳಿದ್ದಾರೆ. ಮೊದಲು ಅದನ್ನ ಮಾಡ್ತೀವಿ, ಗೋಕಾಕ್, ಚಿಕ್ಕೋಡಿ ಜಿಲ್ಲೆಯ ಕೂಗು ಇದೆ. ಅದರ ಬಗ್ಗೆ ಚರ್ಚೆ ಆಗಬೇಕಿದೆ. ಗಡಿ ವಿಚಾರ ಕೋರ್ಟ್‌ನಲ್ಲಿ ಪ್ರಕರಣ ಇರೋದ್ರಿಂದ ಸಮಸ್ಯೆ ಇದೆ. ಚಿಕ್ಕೋಡಿ, ಗೋಕಾಕ್ ಜಿಲ್ಲೆ ಆಗಬೇಕೆಂದು ನಮ್ಮದು ಆಗ್ರಹ ಇದೆ ಎಂದು ಹೇಳಿದರು.

ಉತ್ತರಪ್ರದೇಶ ಹಥ್ರಾಸ್ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ಪೂರ್ಣ ಮಾಹಿತಿ ಇಲ್ಲ. ಸ್ಥಳೀಯ ಸರ್ಕಾರ ತನಿಖೆ ಮಾಡುತ್ತಿದೆ. ತನಿಖೆಯ ವರದಿ ಬಂದ ನಂತರ ಮಾತನಾಡಿದ್ರೆ ಒಳ್ಳೆಯದು ಎಂದರು.

11 ನೀರಾವರಿ ಯೋಜನೆಗಳ ಸರ್ವೇ‌ಗೆ ಆದೇಶ ಮಾಡಿದ್ದೇನೆ. ಅದರ ವರದಿ ಬಂದ ನಂತರ ತಾಂತ್ರಿಕ ಸೇರಿ ಎಲ್ಲಾ ವಿಚಾರಗಳನ್ನ ನೋಡಿ ನಿರ್ಣಯ ತೆಗೆದುಕೊಳ್ಳಲಾಗುವುದು. ಬರುವ ದಿನಗಳಲ್ಲಿ ಎಲ್ಲಾ ಯೋಜನೆಗಳನ್ನ ಮಾಡಬೇಕೆಂದು ದೃಢ ಸಂಕಲ್ಪ ಮಾಡಿದ್ದೇನೆ. ದೇವರು ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತೆ ಎಂದರು.

ಡಿ ಕೆ ಶಿವಕುಮಾರ್ ಬೆಳಗಾವಿ ಮೇಲೆ ವಿಶೇಷ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಡಿ ಕೆ ಶಿವಕುಮಾರ್​ ಅವರ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ. ಅವರ ಬಗ್ಗೆ ವೈಯಕ್ತಿಕ ಮಾತು ಬೇಡ. ಅವರು ಏನಾದ್ರೂ ಮಾಡಿಕೊಳ್ಳಲಿ. ನಾವು ನಮ್ಮ ಪಕ್ಷದ, ಕೆಲಸದ ಬಗ್ಗೆ ಅಷ್ಟೇ ನೋಡುವುದು ಒಳ್ಳೆಯದು. ಹೈಕಮಾಂಡಿನ ಯಾವುದೇ ನಿರ್ಣಾಯಕ್ಕೆ ನಾವು ಬದ್ಧ. ರಾಜಕೀಯ ಸೇರಿ ಪಕ್ಷದ ಯಾವುದೇ ನಿರ್ಣಯಕ್ಕೆ ಬದ್ಧ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.