ಬೆಳಗಾವಿ: ಗಣೇಶ ಮೂರ್ತಿ ತಯಾರಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು.
ನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಮನವಿ ಮಾಡಿಕೊಂಡ ಅವರು, ಗಣೇಶ ಮೂರ್ತಿಗಳನ್ನು ನಿರ್ಮಿಸುವ ತಯಾರಕರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಪ್ಯಾಕೇಜ್ ಅತೀ ಮುಖ್ಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕೊರೊನಾ ಹಿನ್ನೆಲೆ ಈ ಭಾರಿ ಗಣೇಶ ಉತ್ಸವ ಸರಳವಾಗಿ ಆಚರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಗಣೇಶ ಮೂರ್ತಿಗಳನ್ನು ನಿರ್ಮಿಸುವ ಕಾರ್ಮಿಕರು, ಗಣೇಶ ಮೂರ್ತಿ ತಯಾರಕರು, ಪೆಂಡಾಲ್ ಡೆಕೋರೇಟರ್ಸ್ಸೇರಿದಂತೆ ಇತರರು ಮತ್ತಷ್ಟು ನಷ್ಟ ಅನುಭವಿಸಲಿದ್ದಾರೆ. ಹೀಗಾಗಿ, ನಮ್ಮ ನೆರವಿಗೆ ಧಾವಿಸಬೇಕು ಎಂದು ಸಚಿವರ ಬಳಿ ಮನವಿ ಮಾಡಿಕೊಂಡರು.