ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನಿಂದ ದರೋಡೆ ಮಾಡಿ ಲಾರಿಯನ್ನು ಕದ್ದೊಯ್ದ ಮೂವರನ್ನು ನಿಪ್ಪಾಣಿ ಗ್ರಾಮೀಣ ಠಾಣೆಯ ಪೊಲೀಸರು ಮಂಗಳವಾರ ವಿಜಯಪುರದಲ್ಲಿ ಬಂಧಿಸಿದ್ದಾರೆ.
ವಿಜಯಪುರದ ಕುಮಟಗಿಯ ಯುವರಾಜ ಉಮಲು ರಾಠೋಡ (30), ಸುರೇಶ ಉಮಲು ರಾಠೋಡ (34) ಮತ್ತು ಮುತ್ತು ಉಮಲು ರಾಠೋಡ (32) ಬಂಧಿತರು.
ಬಂಧಿತರಿಂದ ದರೋಡೆ ಮಾಡಿದ್ದ 14 ಲಕ್ಷ ಮೌಲ್ಯದ ಲಾರಿ, 3 ಲಕ್ಷ ರೂ. ಮೌಲ್ಯದ ಸ್ಕಾರ್ಪಿಯೋ ವಾಹನ ಮತ್ತು 3 ಸಾವಿರ ಮೌಲ್ಯದ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.