ಬೆಳಗಾವಿ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಜಾರಕಿಹೊಳಿ, ದೆಹಲಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ನಡೆಸುತ್ತಿರುವ ರೈತರ ಹೋರಾಟ ನಿಜವಾಗಲೂ ನ್ಯಾಯಸಮ್ಮತವಾಗಿದೆ. ರೈತರ ಜೊತೆ ನಮ್ಮ ಕಾಂಗ್ರೆಸ್ ಪಕ್ಷ ಇರುತ್ತದೆ. ಹೀಗಾಗಿ ತಕ್ಷಣವೇ ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಗಳನ್ನು ಕೈ ಬಿಡುವಂತೆ ಒತ್ತಾಯಿಸಿದರು.