ETV Bharat / state

ಸಾವರ್ಕರ್​ಗೂ ಹಿಂಡಲಗಾ ಜೈಲಿಗೂ ಸಂಬಂಧವಿದೆ: ಸಚಿವ ಆರಗ ಜ್ಞಾನೇಂದ್ರ

author img

By

Published : Dec 29, 2022, 1:58 PM IST

ಹಿಂಡಲಗಾ ಜೈಲಿಗೆ ಆರಗ ಜ್ಞಾನೇಂದ್ರ ಭೇಟಿ- ಸಾವರ್ಕರ್​ ನೆನೆದ ಗೃಹ ಸಚಿವರು- ಸಾವರ್ಕರ್​ಗೂ ಈ ಜೈಲಿಗೂ ನಂಟಿದೆ ಎಂದ ಹೋಮ್​ ಮಿನಿಸ್ಟರ್​

ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬೆಳಗಾವಿ: ಸಾವರ್ಕರ್ ಅವರು ಹಿಂಡಲಗಾ ಜೈಲಿನಲ್ಲಿ ಇದ್ದರು. 1950ರಲ್ಲಿ ಸುಮಾರು 100 ದಿನದವರೆಗೆ ಜೈಲಿನಲ್ಲಿ ಇದ್ದರು. ಆ ಬಂಧಿಖಾನೆಗೆ ನಾನು ಭೇಟಿ ಕೊಟ್ಟು ಬಂದಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಹಿಂಡಲಗಾ ಜೈಲಿಗೆ ಗೃಹ ಸಚಿವರು ಭೇಟಿ: ಬೆಳಗಾವಿ ನಗರದ ಹಿಂಡಲಗಾ ಜೈಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಹಿಂಡಲಗಾ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಅಲ್ಲಿರುವ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ‌. ಸುಮಾರು 800 ಕೈದಿಗಳು ಅಲ್ಲಿದ್ದಾರೆ, ಅದರಲ್ಲಿ 27 ಜನ ಮಹಿಳಾ ಕೈದಿಗಳು ಇದ್ದಾರೆ. ಜೈಲಿನಲ್ಲಿ ಇರುವ ತೊಂದರೆ, ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ ಎಂದರು.

ವಿಚಾರಣಾಧೀನ ಕೈದಿಯಾಗಿದ್ದ ಸಾವರ್ಕರ್​: ಹಿಂಡಲಗಾ ಜೈಲಿಗೂ ವೀರ ಸಾವರ್ಕರ್‌ಗೂ ನಂಟಿದೆ. ಕಾರಣ ಹಿಂಡಲಗಾ ಜೈಲಿನಲ್ಲಿ 100 ದಿನ ವಿಚಾರಣಾಧೀನ ಕೈದಿಯಾಗಿ ಸಾವರ್ಕರ್ ಸೆರೆವಾಸದಲ್ಲಿದ್ದರು. 1950ರ ಏಪ್ರಿಲ್ 4 ರಿಂದ ಜುಲೈ 13 ವರೆಗೆ ವಿಚಾರಣಾಧೀನ ಕೈದಿಯಾಗಿ ಸಾವರ್ಕರ್ ಇದ್ದರು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಪಾಕಿಸ್ತಾನ ಪ್ರಧಾನಿ ಭೇಟಿ ವಿರೋಧಿಸಿದ್ದ ಸಾವರ್ಕರ್​: ಅಂದು ಪಾಕಿಸ್ತಾನ ಪ್ರಧಾನಿ ಲಿಯಾಕತ್ ಅಲಿ ಖಾನ್ ಭಾರತ ಭೇಟಿಯನ್ನು ಸಾವರ್ಕರ್ ವಿರೋಧಿಸಿದ್ದರಂತೆ. ಹಾಗಾಗಿ ಸಾವರ್ಕರ್ ಅವರನ್ನು ಬಂಧಿಸಿ ಬೆಳಗಾವಿ ಜೈಲಿಗೆ ಪೊಲೀಸರು ಕಳುಹಿಸಿದ್ದರು. 100 ದಿನ ಜೈಲು ವಾಸದ ಬಳಿಕ ಮುಂಬೈ ಕೋರ್ಟ್​ಗೆ ಹೆಬಿಯಸ್ ಕಾರ್ಪಸ್ ಅರ್ಜಿಯನ್ನು ಸಾವರ್ಕರ್ ಪುತ್ರ​ ಸಲ್ಲಿಸಿದ್ದರು. ಜುಲೈ 13, 1950ರಂದು ಅವರನ್ನು ಅಧಿಕಾರಿಗಳು ಬಿಡುಗಡೆಗೊಳಿಸಿದ್ದರು ಎಂದು ಗೃಹ ಸಚಿವರು ಹೇಳಿದರು. ಬಳಿಕ ಸಾವರ್ಕರ್‌ರನ್ನು ಅದ್ಧೂರಿಯಾಗಿ ನಾಯಕರು ಬರಮಾಡಿಕೊಂಡಿದ್ದರು ಎಂದರು.

ಉತ್ತರ ಕರ್ನಾಟಕ ಭಾಗದ ಸಮಸ್ಯೆ ವಿಚಾರ: ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಈಗಾಗಲೇ ಸರ್ಕಾರ ಸದನದಲ್ಲಿ ಚರ್ಚಿಸಿದೆ. ಇವತ್ತು ಒಂದು ದಿನ ಚರ್ಚೆಗೆ ಸ್ವೀಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಸರ್ಕಾರ ಈ ಭಾಗದ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತದೆ. ಮುಖ್ಯಮಂತ್ರಿ ಈ ಭಾಗದ ಅಭಿವೃದ್ಧಿಗೆ ತೆರೆದ ಮನಸ್ಸಿನಿಂದ ಇದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ ಅಳವಡಿಕೆ ವಿಚಾರ.. ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಗೃಹ ಸಚಿವರು

ಇತ್ತೀಚೆಗೆ ವೀರ ಸಾವರ್ಕರ್‌ ಫೋಟೋ ಬಳಕೆ ವಿಚಾರ ರಾಜ್ಯದಲ್ಲಿ ಗಲಾಟೆ, ಹೋರಾಟಕ್ಕೆ ಕಾರಣವಾಗಿತ್ತು. ಅಲ್ಲದೆ ಬಿಜೆಪಿ ಸರ್ಕಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋವನ್ನು ಸಹ ಅನಾವರಣ ಮಾಡಿತ್ತು. ಈ ಬಗ್ಗೆ ಪರೋಕ್ಷವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.

ವೀರ ಸಾವರ್ಕರ್‌ ಫೋಟೋ ಅನಾವರಣ: ಆದ್ರೆ ಈಗ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿಯೂ ಕೂಡ ಸಾವರ್ಕರ್‌ ಭಾವಚಿತ್ರವನ್ನು ಅಳವಡಿಕೆ ಮಾಡಲಾಗಿದೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬೆಳಗಾವಿ: ಸಾವರ್ಕರ್ ಅವರು ಹಿಂಡಲಗಾ ಜೈಲಿನಲ್ಲಿ ಇದ್ದರು. 1950ರಲ್ಲಿ ಸುಮಾರು 100 ದಿನದವರೆಗೆ ಜೈಲಿನಲ್ಲಿ ಇದ್ದರು. ಆ ಬಂಧಿಖಾನೆಗೆ ನಾನು ಭೇಟಿ ಕೊಟ್ಟು ಬಂದಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಹಿಂಡಲಗಾ ಜೈಲಿಗೆ ಗೃಹ ಸಚಿವರು ಭೇಟಿ: ಬೆಳಗಾವಿ ನಗರದ ಹಿಂಡಲಗಾ ಜೈಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಹಿಂಡಲಗಾ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಅಲ್ಲಿರುವ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ‌. ಸುಮಾರು 800 ಕೈದಿಗಳು ಅಲ್ಲಿದ್ದಾರೆ, ಅದರಲ್ಲಿ 27 ಜನ ಮಹಿಳಾ ಕೈದಿಗಳು ಇದ್ದಾರೆ. ಜೈಲಿನಲ್ಲಿ ಇರುವ ತೊಂದರೆ, ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ ಎಂದರು.

ವಿಚಾರಣಾಧೀನ ಕೈದಿಯಾಗಿದ್ದ ಸಾವರ್ಕರ್​: ಹಿಂಡಲಗಾ ಜೈಲಿಗೂ ವೀರ ಸಾವರ್ಕರ್‌ಗೂ ನಂಟಿದೆ. ಕಾರಣ ಹಿಂಡಲಗಾ ಜೈಲಿನಲ್ಲಿ 100 ದಿನ ವಿಚಾರಣಾಧೀನ ಕೈದಿಯಾಗಿ ಸಾವರ್ಕರ್ ಸೆರೆವಾಸದಲ್ಲಿದ್ದರು. 1950ರ ಏಪ್ರಿಲ್ 4 ರಿಂದ ಜುಲೈ 13 ವರೆಗೆ ವಿಚಾರಣಾಧೀನ ಕೈದಿಯಾಗಿ ಸಾವರ್ಕರ್ ಇದ್ದರು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಪಾಕಿಸ್ತಾನ ಪ್ರಧಾನಿ ಭೇಟಿ ವಿರೋಧಿಸಿದ್ದ ಸಾವರ್ಕರ್​: ಅಂದು ಪಾಕಿಸ್ತಾನ ಪ್ರಧಾನಿ ಲಿಯಾಕತ್ ಅಲಿ ಖಾನ್ ಭಾರತ ಭೇಟಿಯನ್ನು ಸಾವರ್ಕರ್ ವಿರೋಧಿಸಿದ್ದರಂತೆ. ಹಾಗಾಗಿ ಸಾವರ್ಕರ್ ಅವರನ್ನು ಬಂಧಿಸಿ ಬೆಳಗಾವಿ ಜೈಲಿಗೆ ಪೊಲೀಸರು ಕಳುಹಿಸಿದ್ದರು. 100 ದಿನ ಜೈಲು ವಾಸದ ಬಳಿಕ ಮುಂಬೈ ಕೋರ್ಟ್​ಗೆ ಹೆಬಿಯಸ್ ಕಾರ್ಪಸ್ ಅರ್ಜಿಯನ್ನು ಸಾವರ್ಕರ್ ಪುತ್ರ​ ಸಲ್ಲಿಸಿದ್ದರು. ಜುಲೈ 13, 1950ರಂದು ಅವರನ್ನು ಅಧಿಕಾರಿಗಳು ಬಿಡುಗಡೆಗೊಳಿಸಿದ್ದರು ಎಂದು ಗೃಹ ಸಚಿವರು ಹೇಳಿದರು. ಬಳಿಕ ಸಾವರ್ಕರ್‌ರನ್ನು ಅದ್ಧೂರಿಯಾಗಿ ನಾಯಕರು ಬರಮಾಡಿಕೊಂಡಿದ್ದರು ಎಂದರು.

ಉತ್ತರ ಕರ್ನಾಟಕ ಭಾಗದ ಸಮಸ್ಯೆ ವಿಚಾರ: ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಈಗಾಗಲೇ ಸರ್ಕಾರ ಸದನದಲ್ಲಿ ಚರ್ಚಿಸಿದೆ. ಇವತ್ತು ಒಂದು ದಿನ ಚರ್ಚೆಗೆ ಸ್ವೀಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಸರ್ಕಾರ ಈ ಭಾಗದ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತದೆ. ಮುಖ್ಯಮಂತ್ರಿ ಈ ಭಾಗದ ಅಭಿವೃದ್ಧಿಗೆ ತೆರೆದ ಮನಸ್ಸಿನಿಂದ ಇದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ ಅಳವಡಿಕೆ ವಿಚಾರ.. ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಗೃಹ ಸಚಿವರು

ಇತ್ತೀಚೆಗೆ ವೀರ ಸಾವರ್ಕರ್‌ ಫೋಟೋ ಬಳಕೆ ವಿಚಾರ ರಾಜ್ಯದಲ್ಲಿ ಗಲಾಟೆ, ಹೋರಾಟಕ್ಕೆ ಕಾರಣವಾಗಿತ್ತು. ಅಲ್ಲದೆ ಬಿಜೆಪಿ ಸರ್ಕಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋವನ್ನು ಸಹ ಅನಾವರಣ ಮಾಡಿತ್ತು. ಈ ಬಗ್ಗೆ ಪರೋಕ್ಷವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.

ವೀರ ಸಾವರ್ಕರ್‌ ಫೋಟೋ ಅನಾವರಣ: ಆದ್ರೆ ಈಗ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿಯೂ ಕೂಡ ಸಾವರ್ಕರ್‌ ಭಾವಚಿತ್ರವನ್ನು ಅಳವಡಿಕೆ ಮಾಡಲಾಗಿದೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.