ಬೆಳಗಾವಿ:ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಪ್ರಕರಣಗಳ ಹೆಚ್ಚಳ.. ಬೆಳಗಾವಿಯಲ್ಲಿ ಮೇ 24ರ ವರೆಗೆ ನಿಷೇಧಾಜ್ಞೆ
ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾದ ಹಿನ್ನೆಲೆ ಬೆಳಗಾವಿಯಲ್ಲಿ ಮೇ 24ರ ವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
![ಕೋವಿಡ್ ಪ್ರಕರಣಗಳ ಹೆಚ್ಚಳ.. ಬೆಳಗಾವಿಯಲ್ಲಿ ಮೇ 24ರ ವರೆಗೆ ನಿಷೇಧಾಜ್ಞೆ belgavi](https://etvbharatimages.akamaized.net/etvbharat/prod-images/768-512-02:46:02:1620810962-kn-bgm-03-12-curfew-extended-7201786-12052021144518-1205f-1620810918-411.jpg?imwidth=3840)
ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 26 ರ ರಾತ್ರಿ 9 ಗಂಟೆಯಿಂದ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಮೇ.12 ಬೆಳಗ್ಗೆ 6 ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಮೇ.24 ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಡಿಸಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ:ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 26 ರ ರಾತ್ರಿ 9 ಗಂಟೆಯಿಂದ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಮೇ.12 ಬೆಳಗ್ಗೆ 6 ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಮೇ.24 ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಡಿಸಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.