ETV Bharat / state

ಶಿವಸೇನೆ ವಿರುದ್ಧ ಅಥಣಿಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ - several kannada organisations held protest agianst shivsene

ಶಿವಸೇನೆ ಉದ್ಧಟತನ ತೋರುತ್ತಿದೆ ಎಂದು ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

protest
ಶಿವಸೇನೆ ವಿರುದ್ಧ ಪ್ರತಿಭಟನೆ
author img

By

Published : Dec 30, 2019, 7:23 PM IST

ಅಥಣಿ/ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರ ಉದ್ಧಟತನ ಖಂಡಿಸಿ ಹಾಗೂ ಕನ್ನಡ ಚಿತ್ರ ಅವನೇ ಶ್ರೀಮನ್ನಾರಾಯಣ ಪ್ರದರ್ಶನಕ್ಕೆ ಅಡ್ಡಿಪಡಿಸಿ ಕನ್ನಡಿಗರ ಭಾವನೆಗೆ ನೋವುಂಟು ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕದಲ್ಲಿ ಶಿವಸೇನೆಗೆ ಬಹಿಷ್ಕಾರ ಹಾಕುವಂತೆ ಮತ್ತು ಗಡಿ ವಿವಾದ ವಿಚಾರದಲ್ಲಿ ಕರ್ನಾಟಕದ ರಾಜಕಾರಣಿಗಳು ಕನ್ನಡಪರ ಧ್ವನಿ ಎತ್ತುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಅಂಬೇಡ್ಕರ್ ಸರ್ಕಲ್​​ನಲ್ಲಿ ಸೇರಿದ ಪ್ರತಿಭಟನಾಕಾರರು, ಮಹಾರಾಷ್ಟ್ರ ಸರ್ಕಾರ, ಶಿವಸೇನೆ, ಎಂಇಎಸ್ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಶಿವಸೇನೆ ವಿರುದ್ಧ ಪ್ರತಿಭಟನೆ

ಈ ವೇಳೆ ಮಾತನಾಡಿದ ಸಾಹಿತಿ, ಪತ್ರಕರ್ತ ದೀಪಕ ಶಿಂಧೆ, ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜಕಾರಣಿಗಳು ಗಡಿ ವಿಷಯ ಹಾಗೂ ಭಾಷಾ ಬಾಂಧವ್ಯದ ಮೇಲೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದು, ಸದ್ಯ ಗಡಿವಿವಾದ ಸುಪ್ರೀಂ ಕೋರ್ಟ್​ನಲ್ಲಿ ಇರುವುದರಿಂದ ಯಾರೂ ಈ ಈ ಬಗ್ಗೆ ಉದ್ಧಟತನದ ಮಾತನಾಡಬಾರದು ಎಂದರು.

ಅಥಣಿ/ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರ ಉದ್ಧಟತನ ಖಂಡಿಸಿ ಹಾಗೂ ಕನ್ನಡ ಚಿತ್ರ ಅವನೇ ಶ್ರೀಮನ್ನಾರಾಯಣ ಪ್ರದರ್ಶನಕ್ಕೆ ಅಡ್ಡಿಪಡಿಸಿ ಕನ್ನಡಿಗರ ಭಾವನೆಗೆ ನೋವುಂಟು ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕದಲ್ಲಿ ಶಿವಸೇನೆಗೆ ಬಹಿಷ್ಕಾರ ಹಾಕುವಂತೆ ಮತ್ತು ಗಡಿ ವಿವಾದ ವಿಚಾರದಲ್ಲಿ ಕರ್ನಾಟಕದ ರಾಜಕಾರಣಿಗಳು ಕನ್ನಡಪರ ಧ್ವನಿ ಎತ್ತುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಅಂಬೇಡ್ಕರ್ ಸರ್ಕಲ್​​ನಲ್ಲಿ ಸೇರಿದ ಪ್ರತಿಭಟನಾಕಾರರು, ಮಹಾರಾಷ್ಟ್ರ ಸರ್ಕಾರ, ಶಿವಸೇನೆ, ಎಂಇಎಸ್ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಶಿವಸೇನೆ ವಿರುದ್ಧ ಪ್ರತಿಭಟನೆ

ಈ ವೇಳೆ ಮಾತನಾಡಿದ ಸಾಹಿತಿ, ಪತ್ರಕರ್ತ ದೀಪಕ ಶಿಂಧೆ, ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜಕಾರಣಿಗಳು ಗಡಿ ವಿಷಯ ಹಾಗೂ ಭಾಷಾ ಬಾಂಧವ್ಯದ ಮೇಲೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದು, ಸದ್ಯ ಗಡಿವಿವಾದ ಸುಪ್ರೀಂ ಕೋರ್ಟ್​ನಲ್ಲಿ ಇರುವುದರಿಂದ ಯಾರೂ ಈ ಈ ಬಗ್ಗೆ ಉದ್ಧಟತನದ ಮಾತನಾಡಬಾರದು ಎಂದರು.

Intro:
ಶಿವಸೇನೆ ಉದ್ದಟತನ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.Body:ಅಥಣಿ ವರದಿ:
ಫಾರ್ಮೇಟ್_AVB
ಸ್ಥಳ_ಅಥಣಿ
ಸ್ಲಗ್_ಶಿವಸೇನೆ ಕೃತ್ಯಕ್ಕೆ ಅಥಣಿಯಲ್ಲಿ ಕನ್ನಡ ಹೋರಾಟಗಾರಿಂದ ಖಂಡನೆ

Ancher
ಶಿವಸೇನೆ ಉದ್ದಟತನ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಕೃತ್ಯ ಖಂಡಿಸಿ ಹಾಗೂ ಕನ್ನಡಚಿತ್ರ ಅವನೇ ಶ್ರೀಮನ್ನಾರಾಯಣ ಪ್ರದರ್ಶನಕ್ಕೆ ಅಡ್ಡಿಪಡಿಸಿ ಕನ್ನಡಿಗರ ಭಾವನೆಗೆ ನೋವುಂಟು ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕದಲ್ಲಿ ಶಿವಸೇನೆಗೆ ಬಹಿಷ್ಕಾರ ಹಾಕುವಂತೆ ಮತ್ತು ಗಡಿವಿವಾದ ವಿಚಾರದಲ್ಲಿ ಕರ್ನಾಟಕದ ರಾಜಕಾರಣಿಗಳು ಕನ್ನಡಪರ ಧ್ವನಿ ಎತ್ತುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.ಈ ವೇಳೆ ಅಂಬೇಡ್ಕರ್ ಸರ್ಕಲ್ ನಲ್ಲಿ ಜಮೆಯಾದ ಪ್ರತಿಭಟನಾಕಾರರು ಮಹಾರಾಷ್ಟ್ರ ಸರ್ಕಾರ,ಶಿವಸೇನೆ, ಎಮ್ ಇ ಎಸ್,ಹಾಗೂ ಮಹಾರಾಷ್ಟ್ರ ಮುಖ್ಯ ಮಂತ್ರಿ ಉದ್ದವ ಠಾಕ್ರೆ ವಿರುದ್ದ ಘೋಷಣೆ ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಾಹಿತಿ, ಪತ್ರಕರ್ತ ದೀಪಕ ಶಿಂಧೇ ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜಕಾರಣಿಗಳು ಗಡಿ ವಿಷಯ ಹಾಗೂ ಭಾಷಾ ಭಾಂದವ್ಯದ ಮೇಲೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದು ಸದ್ಯ ಗಡಿವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇರುವದರಿಂದ ಯಾರೂ ಈ ಈ ಬಗ್ಗೆ ಉದ್ದಟತನದ ಮಾತನಾಡಬಾರದು ಭಾಷಾ ಬಾಂದವ್ಯ ಕದಡಲು ಅವಕಾಶ ಕೊಡಬಾರದು ಎಂದು ಆಗ್ರಹಿಸಿ ದರು

ಬೈಟ್: ದೀಪಕ ಶಿಂಧೇ ಕನ್ನಡಪರ ಹೋರಾಟಗಾರ
(ಗುರುತು ಫ್ರೆಂಚ್ ದಾಡಿ )

ನಂತರದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಕನಶೆಟ್ಟಿ ಕರ್ನಾಟಕದ ಜನರು ಶಾಂತಿ ಸೌಹಾರ್ದತೆಗೆ ಬೆಲೆ ಕೊಡುವವರು ಆದ್ರೆ ರಣಹೇಡಿಗಳಲ್ಲ ನಮಗೂ ಧ್ವಜ ಸುಡುವ,ಬ್ಯಾನರ್ ಗಳಿಗೆ ಮಸಿ ಬಳಿಯಲು ಬರುತ್ತದೆ,ಮಹಾಜನ್ ವರದಿಯೆ ಅಂತಿಮ ವರದಿ ಆಗಿದೆ ಆದ್ದರಿಂದ ಯಾರೂ ಕನ್ನಡಿಗರ ಭಾವನೆಗಳನ್ನು ಕೆಣಕುವ ಕೆಲಸ ಮಾಡಬಾರದು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಬೈಟ್: ಮಲ್ಲಿಕಾರ್ಜುನ ಕನಶೆಟ್ಟಿ
(ಗುರುತು ಕಪ್ಪಗೆ ಕೈಯಲ್ಲಿ ಬುಕ್ ಪೇಪರ್)

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಕುಮಾರ್ ಶೆಟ್ಟಿ ಬಣದ ಅಣ್ಣಾಸಾಬ ತೆಲಸಂಗ,ಜಗನ್ನಾಥ ಬಾಮನೆ,
ಕರ್ನಾಟಕ ವಿಜಯಸೇನೆಯ ಚಿದಾನಂದ ಶೇಗುಣಸಿ,
ಸಾಹಿತಿಗಳಾದ ಮಲ್ಲಿಕಾರ್ಜುನ ಕನಶೆಟ್ಟಿ,ಉದಯ ಕುಲಕರ್ಣಿ, ದೀಪಕ ಶಿಂಧೇ ಮತ್ತು

ಕನ್ನಡಪರ ಹೋರಾಟಗಾರರಾದ
ಪ್ರಕಾಶ ಕಾಂಬಳೆ ,ರಮೇಶ್ ಬಾದವಾಡಗಿ, ಯು ಬಿ ಪೂಜಾರಿ,ಪ್ರಶಾಂತ ಹಿರೇಮಣಿ,ಉದಯ ಮಾಖಾಣಿ,ಸಚೀನ ಕಾಂಬಳೆ,ವಿದ್ಯಾ ಮರಡಿ,ಪುಷ್ಪ ಹೋಳಿಕಟ್ಟಿ,ಮಹದೇವಿ ಹೊಳಿಕಟ್ಟಿ,
ಹಣಮವ್ವ ದಂಡಗಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.Conclusion:ಅಥಣಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.