ETV Bharat / state

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆ ಪ್ರತಿಭಟನೆ

author img

By

Published : Aug 5, 2021, 2:05 PM IST

ಕರ್ನಾಟಕ -ಮಹಾರಾಷ್ಟ್ರ ಗಡಿಯಲ್ಲಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪರಿಸ್ಥಿತಿ ಹತೋಟಿಗೆ ತಂದರು.

Karnataka- Maharastra Border
ಶಿವಸೇನೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು

ಚಿಕ್ಕೋಡಿ: ಸದಾ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೇ ಬಂದಿರುವ ಶಿವಸೇನೆ ಸಂಘಟನೆ ಇದೀಗ ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ವಾಹನಗಳ ತಪಾಸಣೆ ನಿಲ್ಲಿಸುವಂತೆ ಹೊಸ ವರಸೆ ಶುರು ಮಾಡಿದ್ದಾರೆ.

ಶಿವಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

ಮಹಾರಾಷ್ಟ್ರದ ಕೆಲ ಹಳ್ಳಿಗಳಿಗೆ ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗಬೇಕು. ಅಂತರವನ್ನು ತಡೆದು ಆರ್‌ಟಿ-ಪಿಸಿಆರ್ (RT-PCR) ವರದಿ ಕೇಳಬಾರದು ಎಂದು ತಗಾದೆ ತೆಗೆದಿರುವ ಶಿವಸೇನೆ ಕಾರ್ಯಕರ್ತರು, ಮಹಾರಾಷ್ಟ್ರ- ಕರ್ನಾಟಕದ ಗಡಿಯಲ್ಲಿ ನಿಂತು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಸೇನೆ ಕಾರ್ಯಕರ್ತರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಪೊಲೀಸರು, ಸರ್ಕಾರದ ಆದೇಶ ಪಾಲನೆ ಮಾಡುವುದು ನಮ್ಮ ಕರ್ತವ್ಯ, ನಾವು ಅದನ್ನು ಮಾಡುತ್ತಿದ್ದೇವೆ ಎಂದಿದ್ದಾರೆ. ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಮಧ್ಯೆ ಜನಸಂದಣಿ: ದೇವಾಲಯಕ್ಕೆ ಆಗಮಿಸಿದ ಜನರನ್ನು ವಾಪಸ್​ ಕಳುಹಿಸಿದ ಚನ್ನಗಿರಿ ತಹಶೀಲ್ದಾರ್​

ಶಿವಸೇನೆ ಕಾರ್ಯಕರ್ತರಲ್ಲಿ ಒಬ್ಬನಾದ ವಿಜಯ ದೇವನೆ ಎಂಬಾತ, ಕರ್ನಾಟಕದ ಚೆಕ್​ಪೋಸ್ಟ್​ಗೆ ನುಗ್ಗಿ ಧ್ವಂಸ ಮಾಡುವುದಾಗಿ ನಿನ್ನೆ ಬೆದರಿಕೆ ಒಡ್ಡಿದ್ದ. ಇಂದು ಆತನೇ ಪೊಲೀಸರ ಬಳಿ ಮನವಿ ಮಾಡುತ್ತಿರುವ ದೃಶ್ಯ ಕಂಡು ಬಂತು.

ಮಹಾರಾಷ್ಟ್ರ ರಾಜ್ಯದವರಾದ ಸ್ಥಳೀಯ ವ್ಯಕ್ತಿಗಳ ಆಧಾರ್ ಕಾರ್ಡ್ ಪರಿಶೀಲನೆ ಮಾಡಿ, ಗಡಿ ಪ್ರವೇಶಿಸಲು ಅವಕಾಶ ನೀಡಬೇಕೆಂದು ಶಿವಸೇನೆ ಕಾರ್ಯಕರ್ತರು ಪೊಲೀಸರೊಂದಿಗೆ ಮನವಿ ಮಾಡಿದರು. ಗಲಾಟೆ ಜೋರಾಗುತ್ತಿದ್ದಂತೆ ಶಿವಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಚಿಕ್ಕೋಡಿ: ಸದಾ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೇ ಬಂದಿರುವ ಶಿವಸೇನೆ ಸಂಘಟನೆ ಇದೀಗ ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ವಾಹನಗಳ ತಪಾಸಣೆ ನಿಲ್ಲಿಸುವಂತೆ ಹೊಸ ವರಸೆ ಶುರು ಮಾಡಿದ್ದಾರೆ.

ಶಿವಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

ಮಹಾರಾಷ್ಟ್ರದ ಕೆಲ ಹಳ್ಳಿಗಳಿಗೆ ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗಬೇಕು. ಅಂತರವನ್ನು ತಡೆದು ಆರ್‌ಟಿ-ಪಿಸಿಆರ್ (RT-PCR) ವರದಿ ಕೇಳಬಾರದು ಎಂದು ತಗಾದೆ ತೆಗೆದಿರುವ ಶಿವಸೇನೆ ಕಾರ್ಯಕರ್ತರು, ಮಹಾರಾಷ್ಟ್ರ- ಕರ್ನಾಟಕದ ಗಡಿಯಲ್ಲಿ ನಿಂತು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಸೇನೆ ಕಾರ್ಯಕರ್ತರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಪೊಲೀಸರು, ಸರ್ಕಾರದ ಆದೇಶ ಪಾಲನೆ ಮಾಡುವುದು ನಮ್ಮ ಕರ್ತವ್ಯ, ನಾವು ಅದನ್ನು ಮಾಡುತ್ತಿದ್ದೇವೆ ಎಂದಿದ್ದಾರೆ. ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಮಧ್ಯೆ ಜನಸಂದಣಿ: ದೇವಾಲಯಕ್ಕೆ ಆಗಮಿಸಿದ ಜನರನ್ನು ವಾಪಸ್​ ಕಳುಹಿಸಿದ ಚನ್ನಗಿರಿ ತಹಶೀಲ್ದಾರ್​

ಶಿವಸೇನೆ ಕಾರ್ಯಕರ್ತರಲ್ಲಿ ಒಬ್ಬನಾದ ವಿಜಯ ದೇವನೆ ಎಂಬಾತ, ಕರ್ನಾಟಕದ ಚೆಕ್​ಪೋಸ್ಟ್​ಗೆ ನುಗ್ಗಿ ಧ್ವಂಸ ಮಾಡುವುದಾಗಿ ನಿನ್ನೆ ಬೆದರಿಕೆ ಒಡ್ಡಿದ್ದ. ಇಂದು ಆತನೇ ಪೊಲೀಸರ ಬಳಿ ಮನವಿ ಮಾಡುತ್ತಿರುವ ದೃಶ್ಯ ಕಂಡು ಬಂತು.

ಮಹಾರಾಷ್ಟ್ರ ರಾಜ್ಯದವರಾದ ಸ್ಥಳೀಯ ವ್ಯಕ್ತಿಗಳ ಆಧಾರ್ ಕಾರ್ಡ್ ಪರಿಶೀಲನೆ ಮಾಡಿ, ಗಡಿ ಪ್ರವೇಶಿಸಲು ಅವಕಾಶ ನೀಡಬೇಕೆಂದು ಶಿವಸೇನೆ ಕಾರ್ಯಕರ್ತರು ಪೊಲೀಸರೊಂದಿಗೆ ಮನವಿ ಮಾಡಿದರು. ಗಲಾಟೆ ಜೋರಾಗುತ್ತಿದ್ದಂತೆ ಶಿವಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.