ETV Bharat / state

ಹರಿಹರ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಗೆ ಪಿತೃ ವಿಯೋಗ - ಈಟಿವಿ ಭಾರತ ಕನ್ನಡ

ಶ್ರೀ ವಚನಾನಂದ ಸ್ವಾಮೀಜಿಗೆ ಪಿತೃ ವಿಯೋಗ - ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯ ಪೂರ್ವಾಶ್ರಮ ತಂದೆ ದುಂಡಪ್ಪ ಅದೃಶಪ್ಪ ಗೌರಗೊಂಡ ನಿಧನ- ತಾಂವಶಿ ಗ್ರಾಮದಲ್ಲಿ ಸಂಜೆ 5 ಗಂಟೆಗೆ ಅಂತ್ಯ ಸಂಸ್ಕಾರ

sri-vachanananda-swamijis-father-passed-away
ಹರಿಹರ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಗೆ ಪಿತೃ ವಿಯೋಗ
author img

By

Published : Jan 2, 2023, 4:08 PM IST

ಚಿಕ್ಕೋಡಿ(ಬೆಳಗಾವಿ) : ಹರಿಹರ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಯವರ ಪೂರ್ವಾಶ್ರಮ ತಂದೆ ದುಂಡಪ್ಪ ಅದೃಶಪ್ಪ ಗೌರಗೊಂಡ (75) ಅವರು ನಿಧನರಾಗಿದ್ದಾರೆ.

ಕಳೆದ ಎಂಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಹಾರಾಷ್ಟ್ರದ ಮೀರಜ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಸಂಜೆ 5 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ. ಅಂತಿಮ ಶವಸಂಸ್ಕಾರದಲ್ಲಿ ವಚನಾನಂದ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದು ಗೌರಗೊಂಡ ಕುಟುಂಬದ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಜೋಕರ್​ಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು: ಶಾಸಕ‌ ಯತ್ನಾಳ್​ಗೆ ವಚನಾನಂದ ಶ್ರೀ ಪರೋಕ್ಷ ಟಾಂಗ್​

ಚಿಕ್ಕೋಡಿ(ಬೆಳಗಾವಿ) : ಹರಿಹರ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಯವರ ಪೂರ್ವಾಶ್ರಮ ತಂದೆ ದುಂಡಪ್ಪ ಅದೃಶಪ್ಪ ಗೌರಗೊಂಡ (75) ಅವರು ನಿಧನರಾಗಿದ್ದಾರೆ.

ಕಳೆದ ಎಂಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಹಾರಾಷ್ಟ್ರದ ಮೀರಜ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಸಂಜೆ 5 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ. ಅಂತಿಮ ಶವಸಂಸ್ಕಾರದಲ್ಲಿ ವಚನಾನಂದ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದು ಗೌರಗೊಂಡ ಕುಟುಂಬದ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಜೋಕರ್​ಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು: ಶಾಸಕ‌ ಯತ್ನಾಳ್​ಗೆ ವಚನಾನಂದ ಶ್ರೀ ಪರೋಕ್ಷ ಟಾಂಗ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.