ETV Bharat / state

ಸೋಮವಾರದಂದು ಸರ್ಕಾರಿ ಬಸ್​ಗಳು ಎಂದಿನಂತೆ ಸಂಚಾರ : ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ

author img

By

Published : Sep 25, 2021, 7:34 PM IST

Updated : Sep 25, 2021, 7:49 PM IST

ಕಾಂಗ್ರೆಸ್ ನಾಯಕರು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅಸಲಿ ರೈತರು ಬಿಜೆಪಿ ಜೊತೆಗಿದ್ದಾರೆ. ನಕಲಿ ಅನೋದಕ್ಕಿಂತ ಬಿಳಿ ಬಟ್ಟೆ ಹಾಕಿ ರಾಜಕಾರಣ ಮಾಡುತ್ತಿರುವ ರೈತರು ನಿಜವಾದ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ..

Shriramulu
ಶ್ರೀರಾಮುಲು

ಚಿಕ್ಕೋಡಿ (ಬೆಳಗಾವಿ) : ರೈತರು ಭಾರತ್ ಬಂದ್​​ಗೆ ಕರೆ ನೀಡಿದ್ದರೂ ಎಂದಿನಂತೆ ರಾಜ್ಯದ ಎಲ್ಲ ಕಡೆಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸರ್ಕಾರಿ ಬಸ್​​​ಗಳು ಎಂದಿನಂತೆ ಸಂಚರಿಸಲಿವೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಬೆಳೆಯುವ ಸಲುವಾಗಿ‌ ಕಾಂಗ್ರೆಸ್ ಪಕ್ಷ ಸ್ವಾರ್ಥದ ರಾಜಕಾರಣ ಮಾಡುತ್ತಿದೆ. ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯದ ಎಲ್ಲ ಕಡೆಗೂ ಸಾರಿಗೆ ಬಸ್​​​​ಗಳು ಸಂಚಾರ ನಡೆಸಲಿವೆ ಎಂದರು.

ಭಾರತ್ ಬಂದ್ ಕುರಿತು ಸಾರಿಗೆ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯೆ

ರೈತರ ಹೆಸರು ಇಟ್ಟುಕೊಂಡು ತಮ್ಮ ಸ್ವಾರ್ಥಕ್ಕಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು. ಸೋಮವಾರದಂದು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಮೋದಿ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ.

ಆದ್ರೆ, ಕಾಂಗ್ರೆಸ್ ನಾಯಕರು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅಸಲಿ ರೈತರು ಬಿಜೆಪಿ ಜೊತೆಗಿದ್ದಾರೆ. ನಕಲಿ ಅನೋದಕ್ಕಿಂತ ಬಿಳಿ ಬಟ್ಟೆ ಹಾಕಿ ರಾಜಕಾರಣ ಮಾಡುತ್ತಿರುವ ರೈತರು ನಿಜವಾದ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಸ್ಥಗಿತವಾಗಿದ್ದ ಕಾರ್ಯಗಳೆಲ್ಲ ಈಗಷ್ಟೇ ಚೇತರಿಕೆ ಕಾಣುತ್ತಿವೆ.. ಭಾರತ್ ಬಂದ್ ಸೂಕ್ತವಲ್ಲ.. ಸಿಎಂ ಬೊಮ್ಮಾಯಿ

ಚಿಕ್ಕೋಡಿ (ಬೆಳಗಾವಿ) : ರೈತರು ಭಾರತ್ ಬಂದ್​​ಗೆ ಕರೆ ನೀಡಿದ್ದರೂ ಎಂದಿನಂತೆ ರಾಜ್ಯದ ಎಲ್ಲ ಕಡೆಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸರ್ಕಾರಿ ಬಸ್​​​ಗಳು ಎಂದಿನಂತೆ ಸಂಚರಿಸಲಿವೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಬೆಳೆಯುವ ಸಲುವಾಗಿ‌ ಕಾಂಗ್ರೆಸ್ ಪಕ್ಷ ಸ್ವಾರ್ಥದ ರಾಜಕಾರಣ ಮಾಡುತ್ತಿದೆ. ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯದ ಎಲ್ಲ ಕಡೆಗೂ ಸಾರಿಗೆ ಬಸ್​​​​ಗಳು ಸಂಚಾರ ನಡೆಸಲಿವೆ ಎಂದರು.

ಭಾರತ್ ಬಂದ್ ಕುರಿತು ಸಾರಿಗೆ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯೆ

ರೈತರ ಹೆಸರು ಇಟ್ಟುಕೊಂಡು ತಮ್ಮ ಸ್ವಾರ್ಥಕ್ಕಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು. ಸೋಮವಾರದಂದು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಮೋದಿ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ.

ಆದ್ರೆ, ಕಾಂಗ್ರೆಸ್ ನಾಯಕರು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅಸಲಿ ರೈತರು ಬಿಜೆಪಿ ಜೊತೆಗಿದ್ದಾರೆ. ನಕಲಿ ಅನೋದಕ್ಕಿಂತ ಬಿಳಿ ಬಟ್ಟೆ ಹಾಕಿ ರಾಜಕಾರಣ ಮಾಡುತ್ತಿರುವ ರೈತರು ನಿಜವಾದ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಸ್ಥಗಿತವಾಗಿದ್ದ ಕಾರ್ಯಗಳೆಲ್ಲ ಈಗಷ್ಟೇ ಚೇತರಿಕೆ ಕಾಣುತ್ತಿವೆ.. ಭಾರತ್ ಬಂದ್ ಸೂಕ್ತವಲ್ಲ.. ಸಿಎಂ ಬೊಮ್ಮಾಯಿ

Last Updated : Sep 25, 2021, 7:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.