ಬೆಳಗಾವಿ: ನಿನ್ನೆ ಕರ್ನಾಟಕ ಬಸ್ಗೆ ಮಸಿ ಬಳಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳು ರಾಜ್ಯದ ಬಸ್ ಮೇಲೆ ಕಲ್ಲು ತೂರಾಟ ನಡೆಸಿ, ಉದ್ಧತಟನ ಪ್ರದರ್ಶಿಸಿದ್ದಾರೆ. ಈ ಬೆನ್ನಲ್ಲೇ ಮೀರಜ್ ಮಾರ್ಗವಾಗಿ ಸಂಚರಿಸುವ ರಾಜ್ಯದ ಬಸ್ ಸಂಚಾರ ಸ್ಥಗಿತಕ್ಕೆ ಬೆಳಗಾವಿ ಪೊಲೀಸರು ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದ ಮೀರಜ್ ಕಾಗವಾಡ ಮಧ್ಯೆ ಸಂಚರಿಸುತ್ತಿದ್ದ ಕರ್ನಾಟಕದ ಬಸ್ಗೆ ನಿನ್ನೆ ಮಧ್ಯರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ಅಥಣಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ಈ ವೇಳೆ ಬಸ್ನ ಗಾಜು ಜಖಂಗೊಂಡಿದೆ.
ಮುನ್ನೆಚ್ಚರಿಕ ಕ್ರಮವಾಗಿ ರಾಜ್ಯದ ಬಸ್ ಸಂಚಾರ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಕಾಗವಾಡ ಗಡಿ ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ ಸೇವೆ ಬಂದ್ ಮಾಡಲಾಗಿದೆ.
ಇದನ್ನೂ ಓದಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ: ಬಸ್ಗೆ ಕಪ್ಪು ಮಸಿ ಬಳಿದು ಕನ್ನಡಿಗರ ಆಕ್ರೋಶ