ETV Bharat / state

ಚೆನ್ನಮ್ಮನ ಹೆಸರು ಅಜರಾಮರವಾಗಿಸಲು ಕಿತ್ತೂರು ಅಭಿವೃದ್ಧಿ: ಡಿ.ಸಿ.ಎಂ ಲಕ್ಷ್ಮಣ ಸವದಿ - DCM Lakshman Savadi in kittur utsav

ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಹೆಮ್ಮಯಾಗಿರುವ ಕಿತ್ತೂರು ರಾಣಿ ಚೆನ್ನಮ್ಮನ ಹೆಸರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ, ಕಿತ್ತೂರಿನ ಅಭಿವೃದ್ಧಿಗಾಗಿ ಸರ್ಕಾರ ಶ್ರಮಿಸಲಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಕಿತ್ತೂರು ಉತ್ಸವದಲ್ಲಿ ಡಿಸಿಎಂ ಸವದಿ ಆಶ್ವಾಸನೆ
author img

By

Published : Oct 24, 2019, 9:04 AM IST

ಬೆಳಗಾವಿ: ಬ್ರಿಟಿಷರ ವಿರುದ್ಧ ಹೋರಾಟದ ಕಹಳೆ ಮೊಳಗಿಸಿದ ಚೆನ್ನಮ್ಮ, ಇಡೀ ದೇಶಕ್ಕೆ ಹೆಮ್ಮೆ. ಚೆನ್ನಮ್ಮನ ಹೆಸರು ಅಜರಾಮರವಾಗಿಸುವ ನಿಟ್ಟಿನಲ್ಲಿ ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಕಿತ್ತೂರು ಉತ್ಸವದಲ್ಲಿ ಡಿಸಿಎಂ ಸವದಿ ಆಶ್ವಾಸನೆ

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಚೆನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಮೂರುದಿನಗಳ ಕಾಲ ಆಯೋಜಿಸಲಾಗಿರುವ ಕಿತ್ತೂರು ಉತ್ಸವವನ್ನು ನೆರೆಸಂತ್ರಸ್ತರಿಗೆ ಸೂರು ಒದಗಿಸುವ ಭರವಸೆಯೊಂದಿಗೆ ಉದ್ಘಾಟಿಸಿದ ಡಿ.ಸಿ.ಎಂ, ಜನಸ್ತೋಮವನ್ನುದ್ದೇಶಿಸಿ ಮಾತನಾಡಿದರು.

ಕಿತ್ತೂರು ಪ್ರಾಧಿಕಾರಕ್ಕೆ 200 ಕೋಟಿ ರೂಪಾಯಿ ಅನುದಾನ ಒದಗಿಸಲು ಎಲ್ಲರೂ ಸೇರಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು. ಐದು ಕೋಟಿ ರೂ ವೆಚ್ಚದಲ್ಲಿ ಕಿತ್ತೂರಿನಲ್ಲಿ ಸಾರಿಗೆ ಘಟಕ ನಿರ್ಮಾಣಕ್ಕೆ ಶೀಘ್ರ ಭೂಮಿಪೂಜೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಸವದಿ ಭರವಸೆ ನೀಡಿದರು.

ಬೆಳಗಾವಿ: ಬ್ರಿಟಿಷರ ವಿರುದ್ಧ ಹೋರಾಟದ ಕಹಳೆ ಮೊಳಗಿಸಿದ ಚೆನ್ನಮ್ಮ, ಇಡೀ ದೇಶಕ್ಕೆ ಹೆಮ್ಮೆ. ಚೆನ್ನಮ್ಮನ ಹೆಸರು ಅಜರಾಮರವಾಗಿಸುವ ನಿಟ್ಟಿನಲ್ಲಿ ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಕಿತ್ತೂರು ಉತ್ಸವದಲ್ಲಿ ಡಿಸಿಎಂ ಸವದಿ ಆಶ್ವಾಸನೆ

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಚೆನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಮೂರುದಿನಗಳ ಕಾಲ ಆಯೋಜಿಸಲಾಗಿರುವ ಕಿತ್ತೂರು ಉತ್ಸವವನ್ನು ನೆರೆಸಂತ್ರಸ್ತರಿಗೆ ಸೂರು ಒದಗಿಸುವ ಭರವಸೆಯೊಂದಿಗೆ ಉದ್ಘಾಟಿಸಿದ ಡಿ.ಸಿ.ಎಂ, ಜನಸ್ತೋಮವನ್ನುದ್ದೇಶಿಸಿ ಮಾತನಾಡಿದರು.

ಕಿತ್ತೂರು ಪ್ರಾಧಿಕಾರಕ್ಕೆ 200 ಕೋಟಿ ರೂಪಾಯಿ ಅನುದಾನ ಒದಗಿಸಲು ಎಲ್ಲರೂ ಸೇರಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು. ಐದು ಕೋಟಿ ರೂ ವೆಚ್ಚದಲ್ಲಿ ಕಿತ್ತೂರಿನಲ್ಲಿ ಸಾರಿಗೆ ಘಟಕ ನಿರ್ಮಾಣಕ್ಕೆ ಶೀಘ್ರ ಭೂಮಿಪೂಜೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಸವದಿ ಭರವಸೆ ನೀಡಿದರು.

Intro:ಕಿತ್ತೂರು ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ : ಡಿ.ಸಿ.ಎಂ ಲಕ್ಷ್ಮಣ ಸವದಿ

ಬೆಳಗಾವಿ : ರಾಣಿ ಚನ್ನಮ್ಮ ಒಂದು ಜಾತಿ, ಸಮುದಾಯಕ್ಕೆ ಸೀಮಿತವಾಗಬಾರದು. ಬ್ರಿಟೀಷರ ವಿರುದ್ಧ ಹೋರಾಟದ ಕಹಳೆ ಮೊಳಗಿಸಿದ ಚನ್ನಮ್ಮ ಇಡೀ ದೇಶಕ್ಕೆ ಹೆಮ್ಮೆಯಾಗಿದ್ದಾರೆ. ಚನ್ನಮ್ಮನ ಹೆಸರು ಅಜರಾಮರವಾಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.


Body:ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಚನ್ನಮ್ಮ ಕಿತ್ತೂರು ಉತ್ಸವವನ್ನು ನೆರೆಸಂತ್ರಸ್ತರಿಗೆ ಸೂರು ಒದಗಿಸುವ ಭರವಸೆಯೊಂದಿಗೆ ವೇದಿಕೆಯಲ್ಲಿಯೇ ಸಾಂಕೇತಿಕವಾಗಿ ಮನೆಯನ್ನು ನಿರ್ಮಿಸುವ ಮೂಲಕ ಡಿಸಿಎಂ ಲಕ್ಷ್ಮಣ ಸವದಿ ಅವರು ಕಿತ್ತೂರು ಉತ್ಸವವನ್ನು ಉದ್ಘಾಟಿಸಿದರು.

Conclusion:ಕಿತ್ತೂರು ಪ್ರಾಧಿಕಾರಕ್ಕೆ 200 ಕೋಟಿ ರೂಪಾಯಿ ಅನುದಾನ ಒದಗಿಸಲು ಎಲ್ಲರೂ ಸೇರಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ಸಾರಿಗೆ ಘಟಕ ನಿರ್ಮಾಣಕ್ಕೆ ಶೀಘ್ರ ಭೂಮಿಪೂಜೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಸವದಿ ಭರವಸೆ ನೀಡಿದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.