ETV Bharat / state

ದೇಶದಲ್ಲಿ ಕೊರೊನಾ ಕೈ ಮೀರಿದ್ರೆ ರೈಲು ಬೋಗಿಗಳು ಆಸ್ಪತ್ರೆಗಳಾಗಲಿವೆ: ಸುರೇಶ್ ಅಂಗಡಿ

ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದಿದ್ದಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಸ್ಪತ್ರೆಗಳ ಕೊರತೆ ಎದುರಾಗಬಹುದು. ಈ ವೇಳೆ ರೈಲು ಬೋಗಿಗಳನ್ನೇ ಆಸ್ಪತ್ರೆಗಳಾಗಿ ಪರಿವರ್ತನೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಸುರೇಶ್​ ಅಂಗಡಿ ತಿಳಿಸಿದ್ದಾರೆ.

author img

By

Published : Mar 31, 2020, 1:56 PM IST

suresh-angdi
ಸುರೇಶ ಅಂಗಡಿ

ಬೆಳಗಾವಿ: ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದಿದ್ದಲ್ಲಿ ರೈಲು ಬೋಗಿಗಳನ್ನೇ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಸಲುವಾಗಿ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅಷ್ಟಾಗಿಯೂ ವೈರಸ್ ನಿಯಂತ್ರಣಕ್ಕೆ ಬಾರದಿದ್ರೆ ಸಹಜವಾಗಿಯೇ ಸೋಂಕಿತರ ಸಂಖ್ಯೆ ಹೆಚ್ಚುತ್ತದೆ. ಈ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳ ಕೊರತೆ ಎದುರಾಗಬಹುದು. ಹಾಗಾಗಿ, ರೈಲು ಬೋಗಿಗಳನ್ನೇ ಆಸ್ಪತ್ರೆಗಳಾಗಿ ಪರಿವರ್ತಿಸಬೇಕಾಗುತ್ತೆ. ಅದಕ್ಕಾಗಿ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಸಚಿವ ಸುರೇಶ ಅಂಗಡಿ

ಲಾಕ್‌ಡೌನ್ ಆದೇಶವನ್ನು ದೇಶದ ಜನತೆ ಕಳೆದ 8 ದಿನಗಳಿಂದ ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಜನರು ಗಂಭೀರವಾಗಿ ಲಾಕ್‌ಡೌನ್ ಆದೇಶ ಪಾಲಿಸಬೇಕಿದೆ. ಅಗತ್ಯ ವಸ್ತುಗಳ ಪೂರೈಕೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ದೇಶದ ಜನರು ಏ. 14 ರವರೆಗೆ ಮನೆಯಲ್ಲಿಯೇ ಇರಬೇಕು ಎಂದು ಸಚಿವರು ಮನವಿ ಮಾಡಿದರು.

ಹೊರ ರಾಜ್ಯಗಳ ಕಾರ್ಮಿಕರಿಗೆ ಅಗತ್ಯ ಸೌಕರ್ಯ ಒದಗಿಸಬೇಕು. ಗೋವಾ ಹಾಗೂ ರಾಜಸ್ಥಾನದ ಕಾರ್ಮಿಕರಿಗೆ ನಾವು ಊಟ, ವಸತಿ ನೀಡುತ್ತಿದ್ದೇವೆ. ಅದೇ ರೀತಿ ನಮ್ಮ ರಾಜ್ಯದ ಕಾರ್ಮಿಕರಿಗೂ ಬೇರೆ ರಾಜ್ಯಗಳು ಮಾನವೀಯತೆ ದೃಷ್ಟಿಯಿಂದ ಅಗತ್ಯ ಸೌಕರ್ಯ ನೀಡಬೇಕು. ಮಾರುಕಟ್ಟೆಗಳಲ್ಲಿ ಜನಜಂಗುಳಿ ನಿಯಂತ್ರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಬೆಳಗಾವಿ: ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದಿದ್ದಲ್ಲಿ ರೈಲು ಬೋಗಿಗಳನ್ನೇ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಸಲುವಾಗಿ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅಷ್ಟಾಗಿಯೂ ವೈರಸ್ ನಿಯಂತ್ರಣಕ್ಕೆ ಬಾರದಿದ್ರೆ ಸಹಜವಾಗಿಯೇ ಸೋಂಕಿತರ ಸಂಖ್ಯೆ ಹೆಚ್ಚುತ್ತದೆ. ಈ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳ ಕೊರತೆ ಎದುರಾಗಬಹುದು. ಹಾಗಾಗಿ, ರೈಲು ಬೋಗಿಗಳನ್ನೇ ಆಸ್ಪತ್ರೆಗಳಾಗಿ ಪರಿವರ್ತಿಸಬೇಕಾಗುತ್ತೆ. ಅದಕ್ಕಾಗಿ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಸಚಿವ ಸುರೇಶ ಅಂಗಡಿ

ಲಾಕ್‌ಡೌನ್ ಆದೇಶವನ್ನು ದೇಶದ ಜನತೆ ಕಳೆದ 8 ದಿನಗಳಿಂದ ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಜನರು ಗಂಭೀರವಾಗಿ ಲಾಕ್‌ಡೌನ್ ಆದೇಶ ಪಾಲಿಸಬೇಕಿದೆ. ಅಗತ್ಯ ವಸ್ತುಗಳ ಪೂರೈಕೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ದೇಶದ ಜನರು ಏ. 14 ರವರೆಗೆ ಮನೆಯಲ್ಲಿಯೇ ಇರಬೇಕು ಎಂದು ಸಚಿವರು ಮನವಿ ಮಾಡಿದರು.

ಹೊರ ರಾಜ್ಯಗಳ ಕಾರ್ಮಿಕರಿಗೆ ಅಗತ್ಯ ಸೌಕರ್ಯ ಒದಗಿಸಬೇಕು. ಗೋವಾ ಹಾಗೂ ರಾಜಸ್ಥಾನದ ಕಾರ್ಮಿಕರಿಗೆ ನಾವು ಊಟ, ವಸತಿ ನೀಡುತ್ತಿದ್ದೇವೆ. ಅದೇ ರೀತಿ ನಮ್ಮ ರಾಜ್ಯದ ಕಾರ್ಮಿಕರಿಗೂ ಬೇರೆ ರಾಜ್ಯಗಳು ಮಾನವೀಯತೆ ದೃಷ್ಟಿಯಿಂದ ಅಗತ್ಯ ಸೌಕರ್ಯ ನೀಡಬೇಕು. ಮಾರುಕಟ್ಟೆಗಳಲ್ಲಿ ಜನಜಂಗುಳಿ ನಿಯಂತ್ರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.