ETV Bharat / state

ಸೊಲ್ಲಾಪುರ, ಮುಂಬೈ ಕರ್ನಾಟಕಕ್ಕೆ ಸೇರಿದ್ದು ಅಂತ ನಾವೂ ಹೇಳ್ತೀವಿ; ಸಚಿವೆ ಶಶಿಕಲಾ ಜೊಲ್ಲೆ

author img

By

Published : Jan 18, 2021, 4:51 PM IST

ಬೆಳಗಾವಿ ನಮಗೆ ಸೇರಬೇಕು ಎಂಬ ಉದ್ಧವ್​ ಠಾಕ್ರೆ ಹೇಳಿಕೆ ಮೂರ್ಖತನದ್ದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

dsds
ಉದ್ಧವ್​ ವಿರುದ್ಧ ಸಚಿವೆ ಶಶಿಕಲಾ ಜೊಲ್ಲೆ ಕಿಡಿ

ಚಿಕ್ಕೋಡಿ: ಕರ್ನಾಟಕ-ಮಹಾರಾಷ್ಟ್ರದ ಎರಡೂ ಭಾಷೆಯ ಜನ ಅನ್ಯೋನ್ಯತೆಯಿಂದ ಇದ್ದಾರೆ. ಉದ್ಧವ್​ ಠಾಕ್ರೆ ಹಗಲು ಕನಸು ಕಾಣುತ್ತಿರುವ ಪರಿಣಾಮ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಕಿಡಿ ಕಾರಿದ್ದಾರೆ.

ಉದ್ಧವ್​ ವಿರುದ್ಧ ಸಚಿವೆ ಶಶಿಕಲಾ ಜೊಲ್ಲೆ ಕಿಡಿ

ನಿಪ್ಪಾಣಿ‌ ನಗರದಲ್ಲಿ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಹಾಗೂ ವಸತಿ ಗೃಹಗಳ ಉದ್ಘಾಟನಾ ಸಮಾರಂಭದ ನಂತರ ಮಾತನಾಡಿದ ಜೊಲ್ಲೆ, ಉದ್ಧವ್​ ಠಾಕ್ರೆ ಎರಡು ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಸೊಲ್ಲಾಪುರ, ಮುಂಬೈ ನಮ್ಮ ಕರ್ನಾಟಕಕ್ಕೆ ಸೇರಿದ್ದು ಎಂದು ಹೇಳಬಹುದು. ಭಾಷಾವಾರು ಪ್ರಾಂತ್ಯಗಳ ರಚನೆಯನ್ನು ಅತ್ಯಂತ ಸೂಕ್ತವಾಗಿ ಮಾಡಲಾಗಿದೆ. ಆದರೂ ರಾಜಕೀಯ ಲಾಭಕ್ಕಾಗಿ ಈ ರೀತಿಯ ಹೇಳಿಕೆಗಳನ್ನ ಠಾಕ್ರೆ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬೆಳಗಾವಿಯನ್ನ ಬಿಟ್ಟು ಕೊಡುವುದಿಲ್ಲ ಎಂದಿದ್ದಾರೆ.

ಚಿಕ್ಕೋಡಿ: ಕರ್ನಾಟಕ-ಮಹಾರಾಷ್ಟ್ರದ ಎರಡೂ ಭಾಷೆಯ ಜನ ಅನ್ಯೋನ್ಯತೆಯಿಂದ ಇದ್ದಾರೆ. ಉದ್ಧವ್​ ಠಾಕ್ರೆ ಹಗಲು ಕನಸು ಕಾಣುತ್ತಿರುವ ಪರಿಣಾಮ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಕಿಡಿ ಕಾರಿದ್ದಾರೆ.

ಉದ್ಧವ್​ ವಿರುದ್ಧ ಸಚಿವೆ ಶಶಿಕಲಾ ಜೊಲ್ಲೆ ಕಿಡಿ

ನಿಪ್ಪಾಣಿ‌ ನಗರದಲ್ಲಿ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಹಾಗೂ ವಸತಿ ಗೃಹಗಳ ಉದ್ಘಾಟನಾ ಸಮಾರಂಭದ ನಂತರ ಮಾತನಾಡಿದ ಜೊಲ್ಲೆ, ಉದ್ಧವ್​ ಠಾಕ್ರೆ ಎರಡು ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಸೊಲ್ಲಾಪುರ, ಮುಂಬೈ ನಮ್ಮ ಕರ್ನಾಟಕಕ್ಕೆ ಸೇರಿದ್ದು ಎಂದು ಹೇಳಬಹುದು. ಭಾಷಾವಾರು ಪ್ರಾಂತ್ಯಗಳ ರಚನೆಯನ್ನು ಅತ್ಯಂತ ಸೂಕ್ತವಾಗಿ ಮಾಡಲಾಗಿದೆ. ಆದರೂ ರಾಜಕೀಯ ಲಾಭಕ್ಕಾಗಿ ಈ ರೀತಿಯ ಹೇಳಿಕೆಗಳನ್ನ ಠಾಕ್ರೆ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬೆಳಗಾವಿಯನ್ನ ಬಿಟ್ಟು ಕೊಡುವುದಿಲ್ಲ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.