ETV Bharat / state

ಬೆಳಗಾವಿ ಕೋರ್ಟ್ ಆವರಣದಲ್ಲಿಯೇ ಪೊಲೀಸರಿಂದ ತಪ್ಪಿಸಿಕೊಂಡು ವಿಚಾರಣಾಧೀನ‌ ಕೈದಿ ಪರಾರಿ

author img

By ETV Bharat Karnataka Team

Published : Jan 11, 2024, 4:44 PM IST

ಕೋರ್ಟ್ ಆವರಣದಲ್ಲಿಯೇ ವಿಚಾರಣಾಧೀನ‌ ಕೈದಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

under-trial-prisoner-escaped-from-police-at-belagavi-court-premises
ಬೆಳಗಾವಿ ಕೋರ್ಟ್ ಆವರಣದಲ್ಲಿಯೇ ವಿಚಾರಣಾಧೀನ‌ ಕೈದಿ ಪರಾರಿ!

ಬೆಳಗಾವಿ: ವಿಚಾರಣಾಧೀನ‌ ಕೈದಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿ ಆಗಿರುವ ಘಟನೆ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗದಲ್ಲಿರುವ ನಗರದ ಕೋರ್ಟ್ ಆವರಣದಲ್ಲಿ ಗುರುವಾರ ನಡೆದಿದೆ.

ತಾಲೂಕಿನ ಹಿಂಡಲಗಾ ಜೈಲಿನಿಂದ ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿದ್ದ ವಿಚಾರಣಾಧೀನ‌ ಕೈದಿ ಪರಾರಿ ಆಗಿದ್ದು, ಅಬ್ದುಲ್​ಗನಿ ಶಬ್ಬೀರ್​ ಶೇಖ್ ಎಂಬಾತನೇ ತಪ್ಪಿಸಿಕೊಂಡು ಓಡಿಹೋಗಿರುವ ಕೈದಿ. ಈತ ವಿವಿಧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ.

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ಆರೋಪಿ ಕೋರ್ಟ್ ಆವರಣದಲ್ಲಿಯೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಬೆಳಗಾವಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಟಿಳಕವಾಡಿ ಪೊಲೀಸರು ಆರೋಪಿಯನ್ನು ಕರೆತಂದಿದ್ದರು. ಪೊಲೀಸರ ಸಮ್ಮುಖದಲ್ಲಿಯೇ ಆರೋಪಿ ಓಡಿಹೋಗಿದ್ದಾನೆ ಎಂದು ತಿಳಿದುಬಂದಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕೈದಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಉದ್ಯಮದಲ್ಲಿ ಎತ್ತರಕ್ಕೆ ಬೆಳೆಯುತ್ತಿರುವ ಅಸೂಯೆ; ಮಾಲೀಕನ ಪತ್ನಿ ಕೊಲೆ ಮಾಡಿದ್ದ ಆರೋಪಿ ಬಂಧನ

ಬೆಳಗಾವಿ: ವಿಚಾರಣಾಧೀನ‌ ಕೈದಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿ ಆಗಿರುವ ಘಟನೆ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗದಲ್ಲಿರುವ ನಗರದ ಕೋರ್ಟ್ ಆವರಣದಲ್ಲಿ ಗುರುವಾರ ನಡೆದಿದೆ.

ತಾಲೂಕಿನ ಹಿಂಡಲಗಾ ಜೈಲಿನಿಂದ ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿದ್ದ ವಿಚಾರಣಾಧೀನ‌ ಕೈದಿ ಪರಾರಿ ಆಗಿದ್ದು, ಅಬ್ದುಲ್​ಗನಿ ಶಬ್ಬೀರ್​ ಶೇಖ್ ಎಂಬಾತನೇ ತಪ್ಪಿಸಿಕೊಂಡು ಓಡಿಹೋಗಿರುವ ಕೈದಿ. ಈತ ವಿವಿಧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ.

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ಆರೋಪಿ ಕೋರ್ಟ್ ಆವರಣದಲ್ಲಿಯೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಬೆಳಗಾವಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಟಿಳಕವಾಡಿ ಪೊಲೀಸರು ಆರೋಪಿಯನ್ನು ಕರೆತಂದಿದ್ದರು. ಪೊಲೀಸರ ಸಮ್ಮುಖದಲ್ಲಿಯೇ ಆರೋಪಿ ಓಡಿಹೋಗಿದ್ದಾನೆ ಎಂದು ತಿಳಿದುಬಂದಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕೈದಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಉದ್ಯಮದಲ್ಲಿ ಎತ್ತರಕ್ಕೆ ಬೆಳೆಯುತ್ತಿರುವ ಅಸೂಯೆ; ಮಾಲೀಕನ ಪತ್ನಿ ಕೊಲೆ ಮಾಡಿದ್ದ ಆರೋಪಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.