ETV Bharat / state

ಬೆಳಗಾವಿ: ಗುಟಕಾ ತಿಂದು ಉಗಿದ ವಿಚಾರವಾಗಿ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ ಅಂತ್ಯ - ETv Bharat Kannada news

ಗುಟಕಾ ತಿಂದು ಉಗಿದ ಎಂಬ ಕ್ಷುಲ್ಲಕ ಕಾರಣಕ್ಕೆ ಗಲಾಟೆ- ಕುಡಿದ ಮತ್ತಿನಲ್ಲಿ ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಬರ್ಬರ ಕೊಲೆ- ಬೆಳಗಾವಿ ಜಿಲ್ಲೆಯಲ್ಲಿ ಪ್ರಕರಣ

Accused Ajay Hiremath
ಆರೋಪಿ ಅಜಯ್ ಹಿರೇಮಠ
author img

By

Published : Jan 2, 2023, 7:28 PM IST

ಬೆಳಗಾವಿ : ಗುಟಕಾ ತಿಂದು ಉಗಿದ ಕ್ಷುಲ್ಲಕ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮ ನಡೆದಿದೆ.

ಅನಿಗೋಳ ಗ್ರಾಮದ ಮಂಜುನಾಥ ಸುಣಗಾರ(45 ವರ್ಷ) ಹತ್ಯೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ಉಂಟಾಗಿದೆ. ಈ ವೇಳೆ ಆರೋಪಿ ಅಜಯ್ ಹಿರೇಮಠ ಎಂಬುವರು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಂಜುನಾಥನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣ ಹಿನ್ನೆಲೆ: ತಡರಾತ್ರಿ ಇಬ್ಬರೂ ಮದ್ಯಪಾನ ಮಾಡಿ ಪಾನ್ ಶಾಪ್ ಬಳಿ ನಿಂತಿದ್ದು, ಈ ವೇಳೆ ಗುಟಕಾ ತಿಂದು ಉಗಿದ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದು ಮಂಜುನಾಥ ಸುಣಗಾರ(45ವರ್ಷ) ಮೇಲೆ ಅಜಯ್ ಹಿರೇಮಠ ಹತ್ಯೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

ಬೆಳಗಾವಿ : ಗುಟಕಾ ತಿಂದು ಉಗಿದ ಕ್ಷುಲ್ಲಕ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮ ನಡೆದಿದೆ.

ಅನಿಗೋಳ ಗ್ರಾಮದ ಮಂಜುನಾಥ ಸುಣಗಾರ(45 ವರ್ಷ) ಹತ್ಯೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ಉಂಟಾಗಿದೆ. ಈ ವೇಳೆ ಆರೋಪಿ ಅಜಯ್ ಹಿರೇಮಠ ಎಂಬುವರು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಂಜುನಾಥನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣ ಹಿನ್ನೆಲೆ: ತಡರಾತ್ರಿ ಇಬ್ಬರೂ ಮದ್ಯಪಾನ ಮಾಡಿ ಪಾನ್ ಶಾಪ್ ಬಳಿ ನಿಂತಿದ್ದು, ಈ ವೇಳೆ ಗುಟಕಾ ತಿಂದು ಉಗಿದ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದು ಮಂಜುನಾಥ ಸುಣಗಾರ(45ವರ್ಷ) ಮೇಲೆ ಅಜಯ್ ಹಿರೇಮಠ ಹತ್ಯೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.