ETV Bharat / state

ಅನಧಿಕೃತ ಗರ್ಭಕೋಶ ಶಸ್ತ್ರಚಿಕಿತ್ಸೆಯಿಂದ ಸಂಕಷ್ಟ: ಸಚಿವ ರಾಮಲಿಂಗಾರೆಡ್ಡಿ ಎದುರು ಮಹಿಳೆಯರ ಕಣ್ಣೀರು

author img

By ETV Bharat Karnataka Team

Published : Dec 5, 2023, 6:30 PM IST

ಗರ್ಭಕೋಶದ ಶಸ್ತ್ರಚಿಕಿತ್ಸೆ ಸಂತ್ರಸ್ತರಾಗಿರುವ ಹಾವೇರಿ ಜಿಲ್ಲೆಯ ನೂರಾರು ಮಹಿಳೆಯರು ಸಚಿವ ರಾಮಲಿಂಗಾರೆಡ್ಡಿ ಅವರ ಮುಂದೆ ತಮ್ಮ ಸಂಕಷ್ಟ ತೋಡಿಕೊಂಡರು.

ಸಚಿವ ರಾಮಲಿಂಗಾರೆಡ್ಡಿ ಮುಂದೆ ಕಣ್ಣೀರಾದ ರಾಣೆಬೆನ್ನೂರ ಮಹಿಳೆಯರು
ಸಚಿವ ರಾಮಲಿಂಗಾರೆಡ್ಡಿ ಮುಂದೆ ಕಣ್ಣೀರಾದ ರಾಣೆಬೆನ್ನೂರ ಮಹಿಳೆಯರು
ಸಂತ್ರಸ್ತೆ ಲಲಿತಾ ಲಮಾಣಿ ಮಾತನಾಡಿದರು.

ಬೆಳಗಾವಿ: ಗರ್ಭಕೋಶದ ಅನಧಿಕೃತ ಶಸ್ತ್ರಚಿಕಿತ್ಸೆಗೆ ಒಳಗಾಗಿ ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನೂರಾರು ಸಂತ್ರಸ್ತ ಮಹಿಳೆಯರು ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಿ, ಇಂದು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​ನಲ್ಲಿ ಧರಣಿ ನಡೆಸಿದರು. ಮನವಿ ಆಲಿಸಲು ಸ್ಥಳಕ್ಕೆ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ಅವರ ಮುಂದೆ ಮಹಿಳೆಯರು ಕಣ್ಣೀರು ಹಾಕಿದರು.

ರಾಣೆಬೆನ್ನೂರಿನ ಸರ್ಕಾರಿ ವೈದ್ಯೆ ಡಾ.ಶಾಂತ ಪಿ. ಅವರ ದುಷ್ಕೃತ್ಯದಿಂದ 2013ರಿಂದ 2017ರ ಅವಧಿಯಲ್ಲಿ 1522 ಮಹಿಳೆಯರು ನಿತ್ಯ ಆರೋಗ್ಯ ಸಮಸ್ಯೆ ಅನುಭವಿಸುತ್ತಿದ್ದಾರೆ. ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆಯಲು ಸರ್ಕಾರಿ ಆಸ್ಪತ್ರೆಗೆ ತೆರಳಿದ ಈ ಮಹಿಳೆಯರಿಗೆ ಅನಧಿಕೃತವಾಗಿ ಗರ್ಭಕೋಶದ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಯ ಬಳಿಕ ಎಲ್ಲರಲ್ಲೂ ಹಲವು ರೀತಿಯ ಅನಾರೋಗ್ಯ ಕಾಣಿಸಿಕೊಂಡಿವೆ. ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗಿದ್ದೇವೆ ಎಂದು ಪ್ರತಿಭಟನಾಕಾರರು ತಮ್ಮ ಅಳಲು ತೋಡಿಕೊಂಡರು.

ನಿತ್ಯವೂ ನರಕಯಾತನೆ: ಸಚಿವ ರಾಮಲಿಂಗಾರೆಡ್ಡಿ ಮುಂದೆ ಪ್ರತಿಭಟನಾನಿರತ ಮಹಿಳೆಯರು ತಮಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು. 'ಈಟಿವಿ ಭಾರತ'ದ ಜೊತೆಗೆ ಮಾತನಾಡಿದ ಸಂತ್ರಸ್ತೆ ಲಲಿತಾ ಲಮಾಣಿ, ಆ ವೈದ್ಯೆ ಮಾಡಿರುವ ಕೃತ್ಯದಿಂದ ನಿತ್ಯವೂ ನರಕಯಾತನೆ ಅನುಭವಿಸುತ್ತಿದ್ದೇವೆ. 8 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಕೆಲಸ ಮಾಡಲು ಆಗುತ್ತಿಲ್ಲ. ದಯವಿಟ್ಟು ನಮಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಇದನ್ನೂ ಓದಿ: ಹಾವೇರಿ: ಗರ್ಭಕೋಶ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆಯರಿಂದ ಪ್ರತಿಭಟನೆ; ವಿಶೇಷ ಪ್ಯಾಕೇಜ್‌ಗೆ ಆಗ್ರಹ

ಸಂತ್ರಸ್ತೆ ಲಲಿತಾ ಲಮಾಣಿ ಮಾತನಾಡಿದರು.

ಬೆಳಗಾವಿ: ಗರ್ಭಕೋಶದ ಅನಧಿಕೃತ ಶಸ್ತ್ರಚಿಕಿತ್ಸೆಗೆ ಒಳಗಾಗಿ ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನೂರಾರು ಸಂತ್ರಸ್ತ ಮಹಿಳೆಯರು ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಿ, ಇಂದು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​ನಲ್ಲಿ ಧರಣಿ ನಡೆಸಿದರು. ಮನವಿ ಆಲಿಸಲು ಸ್ಥಳಕ್ಕೆ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ಅವರ ಮುಂದೆ ಮಹಿಳೆಯರು ಕಣ್ಣೀರು ಹಾಕಿದರು.

ರಾಣೆಬೆನ್ನೂರಿನ ಸರ್ಕಾರಿ ವೈದ್ಯೆ ಡಾ.ಶಾಂತ ಪಿ. ಅವರ ದುಷ್ಕೃತ್ಯದಿಂದ 2013ರಿಂದ 2017ರ ಅವಧಿಯಲ್ಲಿ 1522 ಮಹಿಳೆಯರು ನಿತ್ಯ ಆರೋಗ್ಯ ಸಮಸ್ಯೆ ಅನುಭವಿಸುತ್ತಿದ್ದಾರೆ. ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆಯಲು ಸರ್ಕಾರಿ ಆಸ್ಪತ್ರೆಗೆ ತೆರಳಿದ ಈ ಮಹಿಳೆಯರಿಗೆ ಅನಧಿಕೃತವಾಗಿ ಗರ್ಭಕೋಶದ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಯ ಬಳಿಕ ಎಲ್ಲರಲ್ಲೂ ಹಲವು ರೀತಿಯ ಅನಾರೋಗ್ಯ ಕಾಣಿಸಿಕೊಂಡಿವೆ. ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗಿದ್ದೇವೆ ಎಂದು ಪ್ರತಿಭಟನಾಕಾರರು ತಮ್ಮ ಅಳಲು ತೋಡಿಕೊಂಡರು.

ನಿತ್ಯವೂ ನರಕಯಾತನೆ: ಸಚಿವ ರಾಮಲಿಂಗಾರೆಡ್ಡಿ ಮುಂದೆ ಪ್ರತಿಭಟನಾನಿರತ ಮಹಿಳೆಯರು ತಮಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು. 'ಈಟಿವಿ ಭಾರತ'ದ ಜೊತೆಗೆ ಮಾತನಾಡಿದ ಸಂತ್ರಸ್ತೆ ಲಲಿತಾ ಲಮಾಣಿ, ಆ ವೈದ್ಯೆ ಮಾಡಿರುವ ಕೃತ್ಯದಿಂದ ನಿತ್ಯವೂ ನರಕಯಾತನೆ ಅನುಭವಿಸುತ್ತಿದ್ದೇವೆ. 8 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಕೆಲಸ ಮಾಡಲು ಆಗುತ್ತಿಲ್ಲ. ದಯವಿಟ್ಟು ನಮಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಇದನ್ನೂ ಓದಿ: ಹಾವೇರಿ: ಗರ್ಭಕೋಶ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆಯರಿಂದ ಪ್ರತಿಭಟನೆ; ವಿಶೇಷ ಪ್ಯಾಕೇಜ್‌ಗೆ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.