ETV Bharat / state

ಗೋಕಾಕ್‌ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

author img

By

Published : Jul 18, 2021, 12:48 PM IST

Updated : Jul 18, 2021, 12:57 PM IST

ಗ್ಯಾರೇಜ್​ನಲ್ಲಿ ಕೆಲಸ ಮುಗಿಸಿಕೊಂಡು ವಾಪಸ್​ ಆಗ್ತಿದ್ದ ಯುವಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣ ಗೋಕಾಕ್​ನಲ್ಲಿ ನಡೆದಿದೆ.

murder
ಯುವಕನ ಬರ್ಬರ ಹತ್ಯೆ

ಬೆಳಗಾವಿ: ಗ್ಯಾರೇಜ್​ನಲ್ಲಿ‌ ಕೆಲಸ ಮಾಡುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿರುವ ಘಟನೆ ಶನಿವಾರ ತಡರಾತ್ರಿ ಗೋಕಾಕ್​ನಲ್ಲಿ ನಡೆದಿದೆ. ಗೋಕಾಕ್ ಪಟ್ಟಣದ ಮಹಾಂತೇಶ ನಗರದ ನಿವಾಸಿ ಮಂಜು ಮುರಕಿಭಾವಿ (22) ಕೊಲೆಯಾದ ಯುವಕ.

weapons
ಕೊಲೆಯಾದ ಯುವಕ

ಮಂಜು ಮುರಕಿಭಾವಿ ಗೋಕಾಕ್​ನ ಗ್ಯಾರೇಜ್​ ವೊಂದರಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ನಿನ್ನೆ‌ ತಡರಾತ್ರಿ ಗ್ಯಾರೇಜ್​ನಲ್ಲಿ ಕೆಲಸ‌ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಗೋಕಾಕ್ ಪಟ್ಟಣದ ಹೊರವಲಯದಲ್ಲಿ ಯಾರೋ ದುಷ್ಕರ್ಮಿಗಳು ದಾಳಿ ಮಾಡಿ ಮನಬಂದಂತೆ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ.

ಕೊಲೆಯಾದ ಯುವಕನ ಬಳಿ ಮದ್ಯದ ಬಾಟಲ್, ಸೇರಿದಂತೆ ‌ಲೇಡಿಸ್ ಬ್ಯಾಗ್ ಬಿದ್ದಿದ್ದು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಗ್ಯಾರೇಜ್​ನಲ್ಲಿ‌ ಕೆಲಸ ಮಾಡುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿರುವ ಘಟನೆ ಶನಿವಾರ ತಡರಾತ್ರಿ ಗೋಕಾಕ್​ನಲ್ಲಿ ನಡೆದಿದೆ. ಗೋಕಾಕ್ ಪಟ್ಟಣದ ಮಹಾಂತೇಶ ನಗರದ ನಿವಾಸಿ ಮಂಜು ಮುರಕಿಭಾವಿ (22) ಕೊಲೆಯಾದ ಯುವಕ.

weapons
ಕೊಲೆಯಾದ ಯುವಕ

ಮಂಜು ಮುರಕಿಭಾವಿ ಗೋಕಾಕ್​ನ ಗ್ಯಾರೇಜ್​ ವೊಂದರಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ನಿನ್ನೆ‌ ತಡರಾತ್ರಿ ಗ್ಯಾರೇಜ್​ನಲ್ಲಿ ಕೆಲಸ‌ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಗೋಕಾಕ್ ಪಟ್ಟಣದ ಹೊರವಲಯದಲ್ಲಿ ಯಾರೋ ದುಷ್ಕರ್ಮಿಗಳು ದಾಳಿ ಮಾಡಿ ಮನಬಂದಂತೆ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ.

ಕೊಲೆಯಾದ ಯುವಕನ ಬಳಿ ಮದ್ಯದ ಬಾಟಲ್, ಸೇರಿದಂತೆ ‌ಲೇಡಿಸ್ ಬ್ಯಾಗ್ ಬಿದ್ದಿದ್ದು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jul 18, 2021, 12:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.