ಅಥಣಿ: ಬೆಳಗಾವಿ ಜಿಲ್ಲೆಯನ್ನು ರಾಜ್ಯದಲ್ಲಿ ಮಾದರಿ ಪಥದತ್ತ ಕೊಂಡೊಯ್ಯುವ ಗುರಿ ಹೊಂದಲಾಗಿದ್ದು, ಎಲ್ಲಾ ಪಂಚಾಯತಿ ಸದಸ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತಿ ಸಿಇಒ ಎಚ್.ವಿ. ದರ್ಶನ್ ಹೇಳಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆಯು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಅವರು ತೋಟಗಾರಿಕಾ ಇಲಾಖೆ ವತಿಯಿಂದ ಶಾಲಾ- ಕಾಲೇಜು, ಅಂಗನವಾಡಿಗಳಲ್ಲಿ ಪಂಚಾಯತಿ ವತಿಯಿಂದ ಎಲ್ಲೆಲ್ಲಿ ಸ್ಥಳಾವಕಾಶ ದೊರೆಯುತ್ತದೆ ಅಲ್ಲಿ ನ್ಯೂಟ್ರಿಷನ್ ಉದ್ಯಾನ ನಿರ್ಮಾಣ ಮಾಡಲಾಗುವುದು. ಕೃಷಿ ಇಲಾಖೆಯಿಂದ ಜಲಾಮೃತ ಯೋಜನೆಯಲ್ಲಿ ಹೆಚ್ಚು ಕೆರೆಗಳನ್ನು ನಿರ್ಮಿಸುತ್ತೇವೆ. ಕೃಷಿ ಹೊಂಡ ನಿರ್ಮಾಣ, ಕಾಲುವೆಗಳ ಬಳಿ ಸಸಿ ನೆಡುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.