ಬಳ್ಳಾರಿ: ತೋಟದಲ್ಲಿ ಹೂವು ಕೀಳಲು ಹೋಗಿ ನದಿಯಲ್ಲಿ ಸಿಲುಕಿಕೊಳ್ಳುವ ಭೀತಿಯಲ್ಲಿದ್ದ 24 ಜನರನ್ನು ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿಯ ತಂಡ ರಕ್ಷಿಸಿದೆ. ಈ ಘಟನೆ ತಾಲೂಕಿನ ವೈ.ಕಗ್ಗಲ್ ಗ್ರಾಮದಲ್ಲಿ ನಡೆದಿದೆ. ವೇದಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆ ಇದ್ದುದಕ್ಕೆ ಕಗ್ಗಲ್ ಗ್ರಾಮದ ಜನರು ನದಿ ದಾಟಿ ಹೂವು ಕೀಳುವುದಕ್ಕೆ ತೋಟಕ್ಕೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ದಿಢೀರ್ ನೀರಿನ ಪ್ರಮಾಣ ಹೆಚ್ಚಾಗಿದೆ. ಇದರಿಂದಾಗಿ ನದಿ ದಾಟಲಾಗದೆ ಜನರು ಜೀವಭಯದಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆ ಪಿ.ಡಿ.ಹಳ್ಳಿ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಬೋಟ್ ಮೂಲಕ ಜನರನ್ನು ರಕ್ಷಿಸಿದರು.
ಇದನ್ನೂ ಓದಿ: ಆನೇಕಲ್: ಕುಡಿದ ಮತ್ತಿನಲ್ಲಿ ಮಹಿಳೆಯ ಕೊಲೆಗೈದ ವ್ಯಕ್ತಿ