ETV Bharat / state

ಆಶಾ ಕಾರ್ಯಕರ್ತೆಯರ ಆರೋಗ್ಯದ ಕುರಿತು ಸರ್ಕಾರಕ್ಕೆ ಕಾಳಜಿ ಇಲ್ಲ: ಡಿ.ನಾಗಲಕ್ಷ್ಮಿ - ಚಳಿಗಾಲದ ಅಧಿವೇಶನ

ಚಳಿಗಾಲದ ಅಧಿವೇಶನ ಆರಂಭವಾಗುವ ದಿನದಿಂದ ಪ್ರತಿನಿತ್ಯ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ. ಪ್ರತೀ ಶಾಸಕರಿಗೆ, ಸಂಸದರಿಗೆ, ಸಚಿವರಿಗೆ ಮನವಿ ಪತ್ರ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ತಿಳಿಸಿದರು.

asha
asha
author img

By

Published : Sep 18, 2020, 1:56 PM IST

ಬಳ್ಳಾರಿ: ಜನರ ಆರೋಗ್ಯದ ಕುರಿತು ಕಾಳಜಿ ಇಲ್ಲದ ಸರ್ಕಾರ, ಸರ್ಕಾರದಲ್ಲಿ ಇರುವ ಸಚಿವರು, ಬರೀ ಹೆಸರಿಗೆ ಮಂತ್ರಿ ಸ್ಥಾನಕ್ಕಾಗಿ, ಡಿಸಿಎಂ ಸ್ಥಾನಗಳಿಗೆ ಮೊರೆ ಹೋಗುತ್ತಿದ್ದು, ಇದು ವಿಪರ್ಯಾಸ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಕಿಡಿಕಾರಿದ್ದಾರೆ.

ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ದಿನದಿಂದ ಪ್ರತಿನಿತ್ಯ ಆಶಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ಮಾಡಿ ಸಚಿವರಿಗೆ ಮನವಿ ಪತ್ರ ಸಲ್ಲಿಸುತ್ತೇವೆ ಎಂದರು.

ಆಶಾ ಕಾರ್ಯಕರ್ತೆಯರ ಸುದ್ದಿಗೋಷ್ಠಿ

ಬಹಳ ಕಷ್ಟಪಟ್ಟು ಕೊರೊನಾ ವೈರಸ್ ಮುಂಜಾಗ್ರತೆಯಿಂದ ಸಮಾಜದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಕಡೆಯಿಂದ ಅವರಿಗೆ 12 ಸಾವಿರ ರೂ. ವೇತನ ನಿಗದಿ ಮಾಡಬೇಕು ಎಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.

ಕಳೆದ ಜುಲೈ ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಸಂಬಳವಿಲ್ಲ. ಹಾಗಾದ್ರೆ ಅವರು ಜೀವನ ಮಾಡುವುದು ಹೇಗೆ ಎಂದು ಪ್ರಶ್ನೆ ಮಾಡಿದರು. ಇದರಿಂದಾಗಿ ಕರ್ನಾಟಕದಲ್ಲಿ ಇಂದು ಸರ್ಕಾರ ಆಡಳಿತದಲ್ಲಿ ಇದೆಯೋ ಅಥವಾ ಇಲ್ಲವೋ ಎನ್ನುವ ಅನುಮಾನ ಕಾಡುತ್ತಿದೆ ಎಂದರು.

asha-karyakarthes-pressmeet
ಆಶಾ ಕಾರ್ಯಕರ್ತೆಯರ ಮನವಿ

ಪ್ರಸ್ತುತ ಜನರ ಆರೋಗ್ಯಕ್ಕೆ ವೈದ್ಯರು ಮುಖ್ಯವಾಗಿದ್ದಾರೆ. ಆದರೆ ಅವರೇ ಇಂದು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿದೆ. ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಸಹ ಪ್ರತಿಭಟನೆ ಮಾಡುವ ಪರಿಸ್ಥಿತಿ ಬರುತ್ತದೆ ಎಂದರು.

asha-karyakarthes-pressmeet
ಆಶಾ ಕಾರ್ಯಕರ್ತೆಯರ ಮನವಿ

ಆಶಾ ಕಾರ್ಯಕರ್ತೆಯರ ಸಂಘದ ಶಾಂತ, ರೇಷ್ಮಾ, ದೇವದಾಸ್, ರಾಮಕ್ಕ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳು:

  • ಪ್ರೋತ್ಸಾಹ ಧನ ಮತ್ತು ಗೌರವಧನ ಎರಡನ್ನು ಒಟ್ಟಿಗೆ ಸೇರಿಸಿ ಮಾಸಿಕ 12 ಸಾವಿರ ರೂ. ಗೌರವಧನ ನೀಡಿ.
  • ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಪ್ರೋತ್ಸಾಹಧನ ಒದಗಿಸಬೇಕು.
  • ಕೊರೊನಾ ವೈರಸ್ ಪಾಸಿಟಿವ್ ಬಂದರೆ ಉಚಿತ ಚಿಕಿತ್ಸೆ ಜೊತೆಗೆ ಚಿಕಿತ್ಸೆಯ ಅವಧಿಯಲ್ಲಿ 3 ಸಾವಿರ ಗೌರವಧನ ನೀಡಬೇಕು.

ಬಳ್ಳಾರಿ: ಜನರ ಆರೋಗ್ಯದ ಕುರಿತು ಕಾಳಜಿ ಇಲ್ಲದ ಸರ್ಕಾರ, ಸರ್ಕಾರದಲ್ಲಿ ಇರುವ ಸಚಿವರು, ಬರೀ ಹೆಸರಿಗೆ ಮಂತ್ರಿ ಸ್ಥಾನಕ್ಕಾಗಿ, ಡಿಸಿಎಂ ಸ್ಥಾನಗಳಿಗೆ ಮೊರೆ ಹೋಗುತ್ತಿದ್ದು, ಇದು ವಿಪರ್ಯಾಸ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಕಿಡಿಕಾರಿದ್ದಾರೆ.

ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ದಿನದಿಂದ ಪ್ರತಿನಿತ್ಯ ಆಶಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ಮಾಡಿ ಸಚಿವರಿಗೆ ಮನವಿ ಪತ್ರ ಸಲ್ಲಿಸುತ್ತೇವೆ ಎಂದರು.

ಆಶಾ ಕಾರ್ಯಕರ್ತೆಯರ ಸುದ್ದಿಗೋಷ್ಠಿ

ಬಹಳ ಕಷ್ಟಪಟ್ಟು ಕೊರೊನಾ ವೈರಸ್ ಮುಂಜಾಗ್ರತೆಯಿಂದ ಸಮಾಜದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಕಡೆಯಿಂದ ಅವರಿಗೆ 12 ಸಾವಿರ ರೂ. ವೇತನ ನಿಗದಿ ಮಾಡಬೇಕು ಎಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.

ಕಳೆದ ಜುಲೈ ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಸಂಬಳವಿಲ್ಲ. ಹಾಗಾದ್ರೆ ಅವರು ಜೀವನ ಮಾಡುವುದು ಹೇಗೆ ಎಂದು ಪ್ರಶ್ನೆ ಮಾಡಿದರು. ಇದರಿಂದಾಗಿ ಕರ್ನಾಟಕದಲ್ಲಿ ಇಂದು ಸರ್ಕಾರ ಆಡಳಿತದಲ್ಲಿ ಇದೆಯೋ ಅಥವಾ ಇಲ್ಲವೋ ಎನ್ನುವ ಅನುಮಾನ ಕಾಡುತ್ತಿದೆ ಎಂದರು.

asha-karyakarthes-pressmeet
ಆಶಾ ಕಾರ್ಯಕರ್ತೆಯರ ಮನವಿ

ಪ್ರಸ್ತುತ ಜನರ ಆರೋಗ್ಯಕ್ಕೆ ವೈದ್ಯರು ಮುಖ್ಯವಾಗಿದ್ದಾರೆ. ಆದರೆ ಅವರೇ ಇಂದು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿದೆ. ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಸಹ ಪ್ರತಿಭಟನೆ ಮಾಡುವ ಪರಿಸ್ಥಿತಿ ಬರುತ್ತದೆ ಎಂದರು.

asha-karyakarthes-pressmeet
ಆಶಾ ಕಾರ್ಯಕರ್ತೆಯರ ಮನವಿ

ಆಶಾ ಕಾರ್ಯಕರ್ತೆಯರ ಸಂಘದ ಶಾಂತ, ರೇಷ್ಮಾ, ದೇವದಾಸ್, ರಾಮಕ್ಕ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳು:

  • ಪ್ರೋತ್ಸಾಹ ಧನ ಮತ್ತು ಗೌರವಧನ ಎರಡನ್ನು ಒಟ್ಟಿಗೆ ಸೇರಿಸಿ ಮಾಸಿಕ 12 ಸಾವಿರ ರೂ. ಗೌರವಧನ ನೀಡಿ.
  • ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಪ್ರೋತ್ಸಾಹಧನ ಒದಗಿಸಬೇಕು.
  • ಕೊರೊನಾ ವೈರಸ್ ಪಾಸಿಟಿವ್ ಬಂದರೆ ಉಚಿತ ಚಿಕಿತ್ಸೆ ಜೊತೆಗೆ ಚಿಕಿತ್ಸೆಯ ಅವಧಿಯಲ್ಲಿ 3 ಸಾವಿರ ಗೌರವಧನ ನೀಡಬೇಕು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.